ರೈತರ ಬಗ್ಗೆ ಅವಹೇಳನಕಾರಿ ಟ್ವೀಟ್‍: ಕಂಗನಾ ವಿರುದ್ಧ ಎಫ್‍ಐಆರ್ :

ತುಮಕೂರು: ರೈತರ ವಿರುದ್ಧ ಅವಹೇಳನಕಾರಿ ಟ್ವೀಟ್ ಮಾಡಿದ್ದ ಬಾಲಿವುಡ್ ನಟಿ ಕಂಗನಾ ರನೌತ್ ವಿರುದ್ಧ ತುಮಕೂರಿನ ಕ್ಯಾತಸಂದ್ರ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

ತುಮಕೂರು ಜೆಎಂಎಫ್ಸಿ ನ್ಯಾಯಾಲಯದ ನಿರ್ದೇಶನದ ಮೇರೆಗೆ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಕಂಗನಾ ಮಾಡಿರುವ ಟ್ವೀಟ್ ಸಂದೇಶವನ್ನು ಎಫ್ಐಆರ್ ನಲ್ಲಿ ಉಲ್ಲೇಖಿಸಲಾಗಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಕೇಂದ್ರ ಸರ್ಕಾರದ ಕೃಷಿ ಕಾಯಿದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಟ್ವೀಟ್ ಮೂಲಕ ಟೀಕಿಸಿದ್ದ ನಟಿ ಕಂಗನಾ ವಿರುದ್ಧ ಪ್ರಥಮ ತನಿಖಾ ವರದಿ ದಾಖಲಿಸಲು ನಿರ್ದೇಶಿಸುವಂತೆ ತುಮಕೂರಿನ ಪ್ರಥಮ ದರ್ಜೆ ನ್ಯಾಯಿಕ ನ್ಯಾಯಾಲಯದಲ್ಲಿ (ಜೆಎಂಎಫ್ಸಿ) ವಕೀಲ ರಮೇಶ್ ನಾಯಕ್ ಅವರು ಖಾಸಗಿ ದೂರು ದಾಖಲಿಸಿದ್ದರು

Exit mobile version