ಬೆಂಗಳೂರು, ಅ. 19: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಐಷಾರಾಮಿ ಬಸ್ಗಳಲ್ಲಿ ವಾರಾಂತ್ಯದಲ್ಲಿ ಟಿಕೆಟ್ ದರವನ್ನು ಶೇ 10ರಷ್ಟು ಏರಿಕೆ ಮಾಡುತ್ತಿತ್ತು. ಕೋವಿಡ್ ಕಾರಣದಿಂದಾಗಿ ಪ್ರಯಾಣಿಕರ ಕೊರತೆಯನ್ನು ಕೆಎಸ್ಆರ್ಟಿಸಿ ಎದುರಿಸುತ್ತಿದೆ. ಖಾಸಗಿ ಬಸ್ಗಳಲ್ಲಿ ಸಹ ದರ ಕಡಿಮೆ ಇದೆ ಆದ್ದರಿಂದ ತಾತ್ಕಾಲಿಕವಾಗಿ ವಾಪಸ್ ಪಡೆಯಲಾಗಿದೆ.
ಕೆಎಸ್ಆರ್ಟಿಸಿ ಈ ಕುರಿತು ಪ್ರಕಟಣೆ ಹೊರಡಿಸಿದೆ. ಡಿಸೆಂಬರ್ 31ರ ತನಕ ವಾರಾಂತ್ಯದಲ್ಲಿ ಟಿಕೆಟ್ ದರವನ್ನು ಶೇ 10ರಷ್ಟು ಏರಿಕೆ ಮಾಡುವುದಿಲ್ಲ ಎಂದು ಹೇಳಿದ್ದು, ಇದರಿಂದಾಗಿ ಪ್ರಯಾಣಿಕರಿಗೆ ಹೆಚ್ಚಿನ ಹೊರೆ ತಪ್ಪಲಿದೆ.
ಐಷಾರಾಮಿ ಬಸ್ಗಳು ಈಗ ಸಂಚಾರವನ್ನು ಆರಂಭಿಸಿವೆ. ಬಸ್ನಲ್ಲಿ ಶೇ 50ರಷ್ಟು ಸೀಟುಗಳು ಮಾತ್ರ ಭರ್ತಿಯಾಗಬೇಕು ಎಂಬ ನಿಯಮವನ್ನು ಈಗ ಸಡಿಲಿಸಲಾಗಿದೆ. ಅಂತರರಾಜ್ಯ ಬಸ್ಗಳ ಸಂಚಾರವನ್ನು ಕೆಎಸ್ಆರ್ಟಿಸಿ ಈಗ ಆರಂಭವಾಗಿದೆ.
ವಾರಾಂತ್ಯದಲ್ಲಿ ಐಷಾರಾಮಿ ಬಸ್ಗಳಲ್ಲಿ ಟಿಕೆಟ್ ದರ ಶೇ 10ರಷ್ಟು ಹೆಚ್ಚಳ ಮಾಡಲಾಗುತ್ತಿತ್ತು. ಈಗ ಅದನ್ನು ಸ್ಥಗಿತಗೊಳಿಸುವ ಮೂಲಕ ಹೆಚ್ಚಿನ ಪ್ರಯಾಣಿಕರನ್ನು ಸೆಳೆಯಲು ಸಂಸ್ಥೆ ಮುಂದಾಗಿದೆ.