ವಿಪತ್ತು ಪರಿಹಾರ ನಿಧಿ ಮೊತ್ತ 5 ಪಟ್ಟು ಹೆಚ್ಚಳ

ಕಲಬುರಗಿ, ಅ. 16: ರಾಜ್ಯ ಸರ್ಕಾರ ನೆರೆ ಸಂತ್ರಸ್ತರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೇಂದ್ರ ಹಣಕಾಸು ಇಲಾಖೆಯು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ನೀಡುವ ಪರಿಹಾರ ಮೊತ್ತ 5 ಪಟ್ಟು ಹೆಚ್ಚಳಕ್ಕೆ ಒಪ್ಪಿಗೆ ನೀಡಿದ್ದು, ಮುಂದಿನ ದಿನಗಳಲ್ಲಿ ಪರಿಹಾರ ಹೆಚ್ಚಾಗಲಿದೆ. ಸದ್ಯದ ಪರಿಸ್ಥಿತಿ ಎದುರಿಸಲು ಪ್ರವಾಹ ಪೀಡಿತ ಜಿಲ್ಲಾಡಾಳಿತಕ್ಕೆ 5 ಕೋಟಿ ರೂ. ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ರಾಜ್ಯದಲ್ಲಿ ಪ್ರವಾಹದಿಂದ 23,996 ಹೆಕ್ಟೇರ್ ತೋಟಗಾರಿಕೆ ಬೆಳೆ 3,31,170 ಹೆಕ್ಟರ್ ಬೆಳೆ ಹಾನಿಯಾಗಿದ್ದು, 1268 ಸೇತುವೆ ಕುಸಿದಿವೆ. ರಾಜ್ಯದಲ್ಲಿ 173 ತಾಲೂಕು ಪ್ರವಾಹ ಪೀಡಿತ ಪ್ರದೇಶ ಗಳೆಂದು ಘೋಷಣೆ ಮಾಡಲಾಗಿದೆ ಎಂದರು.

Exit mobile version