ಉತ್ತರ ಪ್ರದೇಶ, ಅ.14: ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ಅಂತ್ಯ ಸಂಸ್ಕಾರವನ್ನು ರಾತ್ರೋರಾತ್ರಿ ನೆರವೇರಿಸಿದ್ದು ಮಾನವ ಹಕ್ಕುಗಳಿಗೆ ವಿರುದ್ಧವಾದದ್ದು ಎಂದು ಅಲ್ಲಹಾಬಾದ್ ಹೈಕೋರ್ಟ್ ಹೇಳಿಕೆಯನ್ನು ನೀಡಿದೆ.
ಕೋರ್ಟ್ ನ ನ್ಯಾ. ಪಂಕಜ್ ಮಿತ್ತಲ್ ಹಾಗೂ ನ್ಯಾ. ರಂಜನ್ ರಾಯ್ ಅವರಿದ್ದ ವಿಭಾಗೀಯ ಪೀಠ, ಉತ್ತರ ಪ್ರದೇಶ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಿ, ವಾಸ್ತವಾಸಂಶಗಳು, ಪರಿಸ್ಥಿತಿ ಹಾಗೂ ಹಿಂದಿನ ಉಲ್ಲೇಖಿತ ಅಂಶಗಳನ್ನು ಪರಿಗಣಿಸಿದರೆ, ಸಂತ್ರಸ್ತೆಯ ಪಾರ್ಥಿವ ಶರೀರವನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸದೇ ಅಂತ್ಯಕ್ರಿಯೆ ನಡೆಸಿರುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂಬುದು ಸ್ಪಷ್ಟವಾಗಿ ತಿಳಿದು ಬರುತ್ತದೆ.
ಕಾನೂನು ಸುವ್ಯವಸ್ಥೆಯ ಕಾರಣ ನೀಡಿ ಈ ರೀತಿ ಮಾಡಿರುವುದು ಸೂಕ್ತವಲ್ಲ ಎಂದು ಹೇಳಿರುವ ಕೋರ್ಟ್, ಪಾರ್ಥಿವ ಶರೀರವನ್ನು ಹಸ್ತಾಂತರಿಸದೇ ಇರಲು ಯಾವುದೇ ಕಾರಣಗಳು ತಮಗೆ ಕಂಡು ಬರುತ್ತಿಲ್ಲ ಎಂದು ಕೋರ್ಟ್ ಹೇಳಿದೆ.