ಸಂವಿಧಾನ ದಿನದ ಅಂಗವಾಗಿ ಬೊಮ್ಮಾಯಿ, ಸಿದ್ದರಾಮಯ್ಯ ಮತ್ತು ಹೆಚ್‌ಡಿಕೆ ಅವರಿಂದ ಟ್ವಿಟ್‌

 ಬೆಂಗಳೂರು ನ 25 : 1949ರ ನವೆಂಬರ್ 26ರಂದು ಭಾರತದ ಸಂವಿಧಾನವನ್ನು ಅಂದಿನ ಸಂವಿಧಾನ ಸಭೆ ಅಂಗೀಕರಿಸಿತು. ನಮ್ಮ ಸಂವಿಧಾನದ ಸದಾಶಯಗಳನ್ನು ಸಂರಕ್ಷಿಸುವ ಹಾಗೂ ಪಾಲಿಸುವ ದೃಢನಿಶ್ಚಯದೊಂದಿಗೆ ನಮ್ಮ ಎಲ್ಲ ಸಂವಿಧಾನ ರಚನೆ ಮಾಡಿದವರನ್ನು ಸ್ಮರಿಸೋಣ, ಸಂವಿಧಾನಕ್ಕೆ ಸದಾ ಬದ್ಧರಾಗಿರುವ ಸಂಕಲ್ಪವನ್ನು ಪುನರುಚ್ಚರಿಸೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವಿಟ್ ಮಾಡಿದ್ದಾರೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವಿಟ್ ಮಾಡಿ, ಕೋಮುವಾದ, ಜಾತಿತಾರತಮ್ಯ, ಮೂಢನಂಬಿಕೆಗಳಂತಹ ಸಾಮಾಜಿಕ ಪಿಡುಗುಗಳು ಮತ್ತು ಸರ್ವಾಧಿಕಾರದ ವಿರುದ್ಧದ ಹೋರಾಟಕ್ಕೆ ನಮಗಿರುವ ಅ ಸಂವಿಧಾನಮಾತ್ರ. ನಾವು ಸಂವಿಧಾನವನ್ನು ರಕ್ಷಿಸಿದರೆ ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ. ನಾಡಿನ ಸಮಸ್ತ ಬಂಧುಗಳಿಗೆ ಸಂವಿಧಾನ ದಿನದ ಶುಭಾಶಯಗಳು ಎಂದು ತಿಳಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಚ್. ಡಿ.ಕುಮಾರಸ್ವಾಮಿ ಟೀಟ್ ಮಾಡಿ, ವಿಶಾಲ ದೃಷ್ಟಿಕೋನ, ಸಮಾನ ಅವಕಾಶದ ಆಶಯದೊಂದಿಗೆ ಡಾ.ಅಂಬೇಡ್ಕರ್ ಅವರ ಅಧ್ಯಕ್ಷತೆಯಲ್ಲಿ ರಚನೆಯಾದ ಸಂವಿಧಾನವನ್ನು 1949ರ ನ. 26ರಂದು ದೇಶಕ್ಕೆ ಸಮರ್ಪಣೆ ಮಾಡಿದ ಐತಿಹಾಸಿಕ ದಿನವನ್ನು ಸ್ಮರಿಸೋಣ 2 ವರ್ಷ 11 ತಿಂಗಳು 17 ದಿನಗಳಲ್ಲಿ ರಚನೆಯಾದ ಜಗತ್ತಿನ ಅತಿದೊಡ್ಡ ಲಿಖಿತ ಸಂವಿಧಾನವೂ ಜಗತ್ತಿಗೆ ಮಾದರಿ, ನಮ್ಮೆಲ್ಲರ ಪಾಲಿನ ಪವಿತ್ರ ಗ್ರಂಥ ಎಂದು ತಿಳಿಸಿದ್ದಾರೆ.

Exit mobile version