ಸಾಮಾಜಿಕ ಭದ್ರತಾ ಯೋಜನೆ ಫಲಾನುಭವಿಗಳಿಗೆ ಗುಡ್‌ನ್ಯೂಸ್

ಬೆಂಗಳೂರು, ನ. 21: ವೃದ್ದಾಪ್ಯವೇತನವನ್ನು ಕೆಲವು ಅಂಚೆ ಕಚೇರಿಯಿಂದ ಪಡೆದುಕೊಳ್ಳು ವೃದ್ಧರಿಗೆ ತೊಂದರೆಯಾಗುತ್ತಿದ್ದು ಇನ್ನು ಮುಂದೆ  ವೃದ್ಧಾಪ್ಯ ವೇತನ ಸೇರಿ ಸಾಮಾಜಿಕ ಭದ್ರತಾ ಯೋಜನೆಗಳ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣವನ್ನು ನೇರ ವರ್ಗಾವಣೆ ಮಾಡಲಾಗುವುದು ಎಂದು ಕಂದಾಯ ಸಚಿವ ಅರ್. ಅಶೋಕ್ ತಿಳಿಸಿದ್ದಾರೆ.

 ಈ ಪ್ರಕ್ರಿಯೆಗೆ ಮುಂದಿನ ತಿಂಗಳು ಉಡುಪಿ ಜಿಲ್ಲೆಯಲ್ಲಿ  ಚಾಲನೆ ನೀಡಲಾಗುತ್ತದೆ ಎಂದು ತಿಳಿಸಿದರು.ಇನ್ನು ರೈತರಿಗೆ  ಬೆಳೆ ವಿಮೆ ಹಣವನ್ನೂ ಬ್ಯಾಂಕ್ ಮೂಲಕ ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಲಾಗುವುದು ಈ ಮೂಲಕ ಹಲವು ಮಧ್ಯವರ್ತಿಗಳ ಹಾವಳಿಯನ್ನು ತಪ್ಪಿಸುತ್ತೇವೆಂದು ತಿಳಿಸಿದರು.

Exit mobile version