ಸಿಡಿಎಸ್ ಬಿಪಿನ್ ರಾವತ್ ಇದ್ದ ಸೇನಾ ಹೆಲಿಕಾಪ್ಟರ್ ಪತನ; ವರದಿ ಪ್ರಕಾರ ಮೃತರ ಸಂಖ್ಯೆ 13ಕ್ಕೆ ಏರಿಕೆ

ಡಿಸೆಂಬರ್‌(08): ಇಂದು ಮಧ್ಯಾಹ್ನ 12.20 ರ ಸುಮಾರಿಗೆ  ತಮಿಳುನಾಡಿನ ಕೂನೂರ್​​ನಲ್ಲಿ ಭಾರತದ ಮೊದಲ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ ಬಿಪಿನ್ ರಾವತ್ ಅವರಿದ್ದ ಸೇನಾ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. ಎಎನ್ಐ ಸುದ್ದಿ ಸಂಸ್ಥೆ ವರದಿ ಪ್ರಕಾರ ಬಿಪಿನ್ ರಾವತ್ ಸೇರಿದಂತೆ 14  ಪ್ರಯಾಣಿಕರು ಹೆಲಿಕಾಪ್ಟರ್​​ನಲ್ಲಿದ್ದರು. ಹಾಗೂ ಮೃತಪಟ್ಟವರ ಸಂಖ್ಯೆ  13ಕ್ಕೆ  ಏರಿಕೆಯಾಗಿದೆ ಎಂದು ವರದಿಯಾಗಿದೆ.

ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಕೂಡ ಘಟನೆ ನಡೆದ ಸ್ಥಳಕ್ಕೆ ಭೇಟಿಯಾಗಿದ್ದಾರೆ. ಬಿಪಿನ್ ರಾವತ್ ರವರ ಸ್ಥಿತಿ ಚಿಂತಾಜನಕವಾಗಿದೆ ಹಾಗೂ ಸೇನಾ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. 13 ಜನ ಮೃತಪಟ್ಟವರ ಗುರುತು ಪಡೆಯಲು ಡಿಎನ್​​ ಪರೀಕ್ಷೆನಡೆಸಲಾಗುತ್ತಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ರವರು ಈ ಘಟನೆ ಬಗ್ಗೆ ನಾಳೆ ಸಂಸತ್​​ನಲ್ಲಿ ಹೇಳಿಕೆ ನೀಡುವ ಸಾಧ್ಯತೆಯಿದೆ.

Exit mobile version