ಸಿಡಿಎಸ್ ಬಿಪಿನ್ ರಾವತ್ ಇದ್ದ IAF Mi-12V5 ಸೇನಾ ವಿಮಾನ ಅಪಘಾತ ;

ತಮಿಳು ನಾಡಿನ ಕುನ್ನೂರಿನಲ್ಲಿ ಭಾರತ ಸೇನೆಗೆ ಸೇರಿದ ಹೆಲಿಕಾಪ್ಟರ್​ವೊಂದು ಅಪಘಾತಕ್ಕೀಡಾಗಿದೆ.ಈ ಬಗ್ಗೆ ಟ್ವೀಟ್ ಮಾಡಿದ ಭಾರತೀಯ ವಾಯುಸೇನೆ,ರಕ್ಷಣಾಸಿಬ್ಬಂದಿಮುಖ್ಯಸ್ಥ (CDS) ಬಿಪಿನ್​ರಾವತ್‌ ಮತ್ತು ಅವರ ಪತ್ನಿ ಮಧುಲಿಕಾ ರಾವತ್​ಸೇರಿದಂತೆ 14 ಜನ ಸಿಬ್ಬಂದಿ ಇದ್ದರು ಎಂದು ಹೇಳಲಾಗುತ್ತಿದೆ. ಇದರಲ್ಲಿ ನಾಲ್ವರ ಮೃತದೇಹ ಪತ್ತೆಯಾಗಿದ್ದು ಮೂವರನ್ನು ರಕ್ಷಿಸಲಾಗಿದೆ.ನೀಲಗಿರಿ ಜಿಲ್ಲೆಯ ವೆಲ್ಲಿಂಗ್ಟನ್ಕಂಟೋನ್ಮೆಂಟ್​ನ ಆಸ್ಪತ್ರೆಯಲ್ಲಿ ಈ ಮೂವರನ್ನು ದಾಖಲಿಸಲಾಗಿದ್ದು ಅವರ ಸ್ಥಿತಿ ಗಂಭೀರವಾಗಿದೆ.ಘಟನೆ ನಡೆದ ಸ್ಥಳದಲ್ಲಿ ಬೆಂಕಿಯ ಹೊಗೆ ಏಳುತ್ತಿದೆ.ಈಗಾಗಲೇ ಸಿಕ್ಕ ನಾಲ್ಕು ಮೃತದೇಹದಲ್ಲಿ ಇಬ್ಬರುಶೇ.80ರಷ್ಟು ಸುಟ್ಟುಹೋಗಿದ್ದಾರೆ. ಅಲ್ಲಿನ ಹತ್ತಿರದ ಗುಡ್ಡಗಾಡು ಪ್ರದೇಶದಲ್ಲಿ ಇನ್ನೂ ಹುಡುಕಾಟ ನಡೆಯುತ್ತಿದೆ.

Exit mobile version