ಮೈಸೂರು, ಅ. 16: ಇನ್ಫೋಸಿಸ್ ಪ್ರತಿಷ್ಠಾನದ ಸುಧಾಮೂರ್ತಿ ಅವರನ್ನು ಮೈಸೂರು ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ಗೆ ಆಯ್ಕೆ ಮಾಡಿದೆ ಎಂದು ಕುಲಪತಿ ಪ್ರೊ. ಜಿ. ಹೇಮಂತ್ ಕುಮಾರ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು ವಿಶ್ವವಿದ್ಯಾನಿಲಯದ 100ನೇ ಘಟಿಕೋತ್ಸವದಲ್ಲಿ ಸುಧಾಮೂರ್ತಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು. ಇನ್ಫೋಸಿಸ್ ಪ್ರತಿಷ್ಠಾನದ ಮೂಲಕ ಸುಧಾಮೂರ್ತಿ ಅವರು ಕೈಗೊಂಡಿರುವ ಸಾಮಾಜಿಕ ಕಾರ್ಯಗಳನ್ನು ಗುರುತಿಸಿ ಹಾಗೂ ಅವರ ವೈಯಕ್ತಿಕ ಸಾಧನೆ ಪರಿಗಣಿಸಿ ಅವರಿಗೆ ಮೈಸೂರು ವಿವಿಯ ಈ ಸಾಲಿನ ಗೌರವ ಡಾಕ್ಟರೇಟ್ ನೀಡಲಾಗುತ್ತದೆ ಎಂದರು.
ಕೋವಿಡ್ ಹಿನ್ನೆಲೆಯಲ್ಲಿ ಅವರು ವಿ.ವಿ.ಗೆ ಬಂದು ಡಾಕ್ಟರೇಟ್ ಸ್ವೀಕರಿಸಲು ಆಗುವುದಿಲ್ಲ. ಹೀಗಾಗಿ, ಅವರ ನಿವಾಸಕ್ಕೆ ತೆರಳಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು ಎಂದರು.