ಸುರೇಶ್ ರೈನಾ ಸಂಬಂಧಿಯ ಕೊಲೆ ಪ್ರಕರಣ: ಮೂವರು ಅಂತರ್ ರಾಜ್ಯ ದರೋಡೆ ಕೋರರ ಸೆರೆ

ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಸುರೇಶ್ ರೈನಾ ಅವರ ಸಂಬಂಧಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದ್ದು, ಪೊಲೀಸರ ಕಾರ್ಯಕ್ಕೆ ಸುರೇಶ್‍ ರೈನಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಆ.19ರಂದು ಪಂಜಾಬ್‌ನ ಪಠಾಣ್‌ಕೋಟ್ ಜಿಲ್ಲೆಯ ಥರಿಯಾಲ್ ಗ್ರಾಮದಲ್ಲಿ ರೈನಾ ಅವರ ಕುಟುಂಬಸ್ಥರ ಮೇಲೆ ದರೋಡೆಕೋರರ ಗುಂಪು ದಾಳಿ ಮಾಡಿತ್ತು. ಈ ವೇಳೆ ಚಿಕ್ಕಪ್ಪ ಹಾಗೂ ಸಹೋದರ ಸಂಬಂಧಿಗಳ ಮೇಲೆ ಹಲ್ಲೆ ನಡೆಸಿ ಮನೆಯಲ್ಲಿನ ಬೆಲೆ ಬಾಳುವ ವಸ್ತುಗಳನ್ನು ದೋಚಿದ್ದರು.
ಈ ಘಟನೆಯಲ್ಲಿ ರೈನಾ ಅವರ ಚಿಕ್ಕಪ್ಪ ಅಶೋಕ್ ಕುಮಾರ್ ಸ್ಥಳದಲ್ಲೇ ಮೃತಪಟ್ಟರೆ ಅವರ ಮಗ ಕೌಶಲ್ ಕುಮಾರ್ ಆಗಸ್ಟ್ 31 ರಂದು ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.
ಈ ವಿಷಯ ಗೊತ್ತಾಗುತ್ತಿದ್ದಂತೆ ಸುರೇಶ್ ರೈನಾ, ಇಂಡಿಯನ್ ಪ್ರೀಮಿಯರ್ ಲೀಗ್ ತೊರೆದು ಭಾರತಕ್ಕೆ ಮರಳಿದ್ದರು. ಅಲ್ಲದೆ ದರೋಡೆಕೋರರನ್ನು ಪತ್ತೆ ಹಚ್ಚಲು ಕ್ರಮ ಕೈಗೊಳ್ಳುವಂತೆ ಪಂಜಾಬ್ ಮುಖ್ಯಮಂತ್ರಿಯಲ್ಲಿ ಮನವಿ ಮಾಡಿದ್ದರ…

Exit mobile version