ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣ: ಪೊಲೀಸರ ಮುಂದೆ ಹೇಳಿಕೆ ನೀಡಲಿರುವ ನಿರ್ಮಾಪಕ ಮಹೇಶ್ ಭಟ್‍

Pic : Twitter

ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರ ನಿರ್ಮಾಪಕ ಮಹೇಶ್ ಭಟ್‍, ಶೀಘ್ರವೇ ಮುಂಬೈ ಪೊಲೀಸರ ಎದುರು ತಮ್ಮ ಹೇಳಿಕೆ ನೀಡಲಿದ್ದಾರೆ.

ಈ ಬಗ್ಗೆ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿರುವ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್‍ಮುಖ್‍, ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರ ನಿರ್ಮಾಪಕ ಮಹೇಶ್‍ ಭಟ್‍ ಮುಂದಿನ ಎರಡು ದಿನಗಳಲ್ಲಿ ತಮ್ಮ ಹೇಳಿಕೆ ನೀಡಲಿದ್ದಾರೆ. ಅಲ್ಲದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆ ದಾಖಲಿಸಲು ನಿರ್ಮಾಪಕ ಹಾಗೂ ನಿರ್ದೇಶಕ ಕರಣ್‍ ಜೋಹಾರ್ ಅವರಿಗೂ ತಿಳಿಸಲಾಗಿದೆ.

ಸುಶಾಂತ್‍ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಕರಣದ ಕುರಿತಂತೆ ತಮ್ಮ ಹೇಳಿಕೆ ನೀಡುವಂತೆ ನಟಿ ಕಂಗನಾ ರಣಾವತ್ ಅವರಿಗೆ ಸಮನ್ಸ್‍ ಸಹ ನೀಡಲಾಗಿದೆ. ಸುಶಾಂತ್ ಆತ್ಮಹತ್ಯೆಗೆ ಶರಣಾದ ಬಳಿಕ ನಟಿ ಕಂಗನಾ ರಣಾವತ್, ಬಾಲಿವುಡ್‍ನಲ್ಲಿರುವ ಸ್ವಜನ ಪಕ್ಷಪಾತಕ್ಕೆ ಸುಶಾಂತ್‍ ಬಲಿಪಶುವಾದರು ಎಂಬ ಆರೋಪ ಮಾಡಿದ್ದರು. ಸದ್ಯ ಸುಶಾಂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈವರೆಗೂ 37 ಜನರ ಹೇಳಿಕೆಗಳನ್ನು ದಾಖಲಿಸಿದ್ದಾರೆ ಎಂದು ಗೃಹ ಸಚಿವ ಅನಿಲ್ ದೇಶ್‍ಮುಖ್ ಹೇಳಿದ್ದಾರೆ.

Exit mobile version