ಬೆಂಗಳೂರು: ರಾಜ್ಯ ವಿಧಾನಮಂಡಲದ ಅಧಿವೇಶನ ಸೆ 21 ರಿಂದ ಆರಂಭವಾಗುತ್ತಿದ್ದು ಸದನಕ್ಕೆ ಹಾಜರಾಗುವ ಎಲ್ಲಾ ಸದಸ್ಯರೂ ಕಡ್ಡಾಯವಾಗಿ ಕೊರೋನಾ ಸೋಂಕು ಪತ್ತೆ ಪರೀಕ್ಷೆಗೆ ಒಳಪಟ್ಟು ಕೊರೋನಾ ರಿಪೋರ್ಟ್ ಹೊಂದಿರಬೇಕು ಎಂದು ಸರ್ಕಾರದ ಉಪ ಕಾರ್ಯದರ್ಶಿ ಹೆಚ್ ಎಸ್ ಚೆನ್ನಬಸಪ್ಪ ಸುತ್ತೋಲೆ ಹೊರಡಿಸಿದ್ದಾರೆ.
ವಿಧಾನ ಮಂಡಲ ಅಧಿವೇಶನ ಆರಂಭ ಹಿನ್ನಲೆಯಲ್ಲಿ ವಿಧಾನ ಸೌಧ, ವಿಕಾಸ ಸೌಧದೊಳಗೆ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದ್ದು ಕಟ್ಟುನಿಟ್ಟಿನ ಸುರಕ್ಷತಾ ಕ್ರಮಗಳನ್ನು ಪಾಲನೆಯನ್ನು ಜಾರಿಗೊಳಿಸಿದೆ.
ವಿಧಾನ ಮಂಡಲ ಅಧಿವೇಶನ 21-09-2020 ರಿಂದ ಪ್ರಾರಂಭವಾಗುವ ಪ್ರಯುಕ್ತಕೋವಿಡ್ -19 ಹರಡದಂತೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಅವಶ್ಯಕವಾಗಿದೆ ಹಾಗೂ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚನೆ ನೀಡಿದ್ದಾರೆ.