ಸೋಮವಾರವೂ ದ.ಕ. ಜಿಲ್ಲೆ ಸಂಪೂರ್ಣ ಬಂದ್ : ಸಚಿವ ಕೋಟ

ಕೊರೋನ ವೈರಸ್ ಭೀತಿಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆ ಸೋಮವಾರವೂ ಸಂಪೂರ್ಣ ಬಂದ್ ಆಗಲಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ. ರವಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ತಿಳಿಸಿದರು.

ಸೋಮವಾರವೂ ಬಂದ್ ಮುಂದುವರಿಯಲಿದ್ದು, ಮಂಗಳವಾರ ಬೆಳಗ್ಗೆ ೬ರಿಂದ ಅಪರಾಹ್ನ ೩ರವರೆಗೆ ದಿನಸಿ ಅಂಗಡಿ ತೆರೆಯಲು ಅವಕಾಶ ನೀಡಲಾಗುವುದು. ಕುಟುಂಬದ ಒಬ್ಬ ಸದಸ್ಯ ಸಾಮಗ್ರಿ ಖರೀದಿಗೆ ಹೊರಗೆ ಬರಬೇಕು. ದಿನಸಿ ಅಂಗಡಿಯವರು ಅಧಿಕ ದರ ವಸೂಲಿ ಮಾಡಿದರೆ ಪರವಾನಗಿ ರದ್ದುಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಬಿಪಿಎಲ್ ಪಡಿತರ ಚೀಟಿದಾರರಿಗೆ ಎ.೨ ರಿಂದ ೨ ತಿಂಗಳ (ಎಪ್ರಿಲ್ ಮತ್ತು ಮೇ) ಪಡಿತರ ನೀಡಲು ಸೂಚನೆ ನೀಡಲಾಗಿದೆ. ಬೆಳಗ್ಗೆ ೭ರಿಂದ ರಾತ್ರಿ ೮ರವರೆಗೆ ಪಡಿತರ ನೀಡಲು ನ್ಯಾಯಬೆಲೆ ಅಂಗಡಿಯವರಿಗೆ ಸೂಚನೆ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.

Exit mobile version