ಹತ್ರಾಸ್‍ ಅತ್ಯಾಚಾರ ಪ್ರಕರಣ: ಘಟನಾ ಸ್ಥಳಕ್ಕೆ ಸಿಬಿಐ ಭೇಟಿ

ಉತ್ತರಪ್ರದೇಶ : ಉತ್ತರಪ್ರದೇಶದ ಹತ್ರಾಸ್‌‌ನಲ್ಲಿ ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಘಟನಾ ಸ್ಥಳಕ್ಕೆ ಮಂಗಳವಾರ ಸಿಬಿಐ ಅಧಿಕಾರಿಗಳ ತಂ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ಶಿಫಾರಸ್ಸು ಹಾಗೂ ಕೇಂದ್ರ ಸರ್ಕಾರದ ಅಧಿಸೂಚನೆ ಬಳಿಕ ಸಿಬಿಐ ತನಿಖೆ ವಹಿಸಿಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ದಾಖಲೆಗಳನ್ನು ಸ್ವೀಕರಿಸಿದ್ದಾರೆ. ಸಿಬಿಐ ತಂಡವು ಸಂತ್ರಸ್ತೆಯ ಸಹೋದರನನ್ನು ಭೇಟಿ ಮಾಡಿದ್ದು, ಘಟನೆ ನಡೆದ ಸ್ಥಳವನ್ನು ತೋರಿಸಲು ಸೂಚನೆ ನೀಡಿತ್ತು. ಘಟನೆ ನಡೆದ ಒಂದು ತಿಂಗಳ ಬಳಿಕ ಸಿಬಿಐ ತಂಡ ಭೇಟಿ ನೀಡಿದೆ.

ಘಟನೆಯ ಬಗ್ಗೆ ಕೇಂದ್ರ ವಿಧಿ-ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳನ್ನು ಕೇಂದ್ರ ತಂಡದ ಅಧಿಕಾರಿಗಳು ಭೇಟಿ ಆಗುವ ಸಾಧ್ಯತೆ ಇದೆ. ಈ ಘಟನೆ ಸೆ.29ರಂದು ನಡೆದಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಯುವತಿ ದೆಹಲಿಯ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು.

Exit mobile version