ಬೆಂಗಳೂರು:ರಾಜ್ಯದಲ್ಲಿ ಇನ್ನೇನು ಕೋವಿಡ್ ಇಳಿಮುಖವಾಗುತ್ತಿದೆ ಎಂದು ನಿಟ್ಟುಸಿರು ಬಿಡುತ್ತಿರುವಾಗಲೇಓಮಿಕ್ರಾನ್ ಕೇಸ್ ಪತ್ತೆಯಾಗಿದ್ದರಿಂದ ಮತ್ತೆ ಎಲ್ಲೆಡೆ ಭೀತಿ ಶುರುವಾಗಿದೆ.ಅದರಲ್ಲೂ ಶಾಲಾ ಕಾಲೇಜುಗಳಲ್ಲಿ ಹೆಚ್ಚಾಗಿ ಸೋಂಕು ಕಾಣಿಸುತ್ತಿರುವುದರಿಂದ ಪೋಷಕರಲ್ಲಿ ಆತಂಕ ಮನೆ ಮಾಡಿದೆ.ಇದರಿಂದ ಪೋಷಕರು ಶಾಲಾ ಕಾಲೇಜುಗಳನ್ನು ಮುಚ್ಚುವಂತೆ ಆಗ್ರಹ ನಡೆಸುತ್ತಿದ್ದಾರೆ.ಈ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್,ಶಾಲೆಗಳಲ್ಲಿ ಕಠಿಣ ಕ್ರಮ ತೆಗೆದುಕೊಳ್ಳಲು ಚಿಂತನೆ ನಡೆಸುತ್ತಿದ್ದೇವೆ,ಶಾಲೆ ಬಂದ್ ಮಾಡುವ ಪರಿಸ್ಥಿತಿ ಬಂದರೆ ಸರ್ಕಾರ ಸಿದ್ದವಿದೆ,ಅವಶ್ಯ ಬಿದ್ದರೆ ಎಕ್ಸಾಂ ಕೂಡ ರದ್ದು ಮಾಡುತ್ತೇವೆ ಎಂದು ಹೇಳಿದ್ದಾರೆ.ಸದ್ಯ ಯಾರೂ ಆತಂಕ ಪಡಬೇಡಿ,ಇಂದು ಅಧಿಕಾರಿಗಳ ಜೊತೆ ಚರ್ಚಿಸಿ ಗೈಡ್ಲೈನ್ ಸಿದ್ಧ ಪಡಿಸುತ್ತೇವೆ ಎಂದು ಹೇಳಿದ್ದಾರೆ.