ಹೊಸಬಾಂಬ್‌ ಸಿಡಿಸಿದ ಬಿಜೆಪಿ ಅಭ್ಯರ್ಥಿ ಮುನಿರತ್ನ

ಬೆಂಗಳೂರು, ಅ.28: ಈಗಾಗಲೇ ನಡೆಯಬೇಕಿದ್ದ ರಾಜರಾಜೇಶ್ವರಿ ನಗರದ ಉಪಚುನಾವಣೆಯು ದಿನೇ ದಿನೇ ಕುತೂಹಲ ಕೆರಳಿಸುತ್ತಿದೆ. ಆದ್ದರಿಂದ ರಾಜರಾಜೇಶ್ವರಿ ವಿಧಾನಸಭೆ ಉಪಚುನಾವಣೆಯಲ್ಲಿ ರಾಜಕೀಯ ನಾಯಕರು ಅಬ್ಬರದ ಪ್ರಚಾರ ನಡೆಸುತ್ತಿದ್ದು, ಆರ್.ಆರ್. ನಗರ ಮತ್ತೊಂದು ಡಿಜೆ ಹಳ್ಳಿಯಾದರೂ ಅಚ್ಚರಿಯಲ್ಲ ಎಂದು ಬಿಜೆಪಿ ಅಭ್ಯರ್ಥಿ ಮುನಿರತ್ನ ಹೊಸ ಬಾಂಬ್ ಸಿಡಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಅಭ್ಯರ್ಥಿ ಮುನಿರತ್ನ, ಆರ್.ಆರ್. ನಗರದಲ್ಲಿರುವ ಮುಸ್ಲಿಂ ಸಮುದಾಯಗಳ ಪ್ರದೇಶಗಳಲ್ಲಿ ಪ್ರಚಾರದ ಹೆಸರಲ್ಲಿ ಸಿದ್ದರಾಮಯ್ಯ ಅವರು ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿ ಅಲ್ಲಿನ ಜನರನ್ನು ಕೆಣಕಿದ್ದಾರೆ. ಹೀಗಾಗಿ ಆರ್.ಆರ್. ನಗರ ಮತ್ತೊಂದು ಡಿ.ಜೆ ಹಳ್ಳಿಯಾದರೂ ಅಚ್ಚರಿಯಿಲ್ಲ ಎಂದು ಹೇಳಿದ್ದಾರೆ.

ಬೆಂಗಳೂರಿಗರ ನೆಮ್ಮದಿ ಹಾಳು ಮಾಡುವುದೇ ಕಾಂಗ್ರೆಸ್ನವರ ಹುಟ್ಟುಗುಣ, ಯಾರ ಭದ್ರಕೋಟೆಯನ್ನು ಯಾರೂ ಛಿದ್ರ ಮಾಡಲು ಸಾಧ್ಯವಿಲ್ಲ. ನಾವು ಮತದಾರರ ಬಳಿ ಮತ ಭಿಕ್ಷೆ ಕೇಳುತ್ತಿದ್ದೇವೆ ಎಂದು ಹೇಳಿದ್ದಾರೆ.

Exit mobile version