• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

15 ವರ್ಷದ ಬಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ 5 ಭದ್ರತಾ ಸಿಬ್ಬಂದಿ ವಿರುದ್ಧ FIR ದಾಖಲಿಸಿದ ಪೊಲೀಸ್

Mohan Shetty by Mohan Shetty
in ದೇಶ-ವಿದೇಶ
Police
0
SHARES
3
VIEWS
Share on FacebookShare on Twitter

Gurugram : ಗುರುಗ್ರಾಮ್‌ನ ಹೌಸಿಂಗ್ ಸೊಸೈಟಿಯ ಐವರು ಸೆಕ್ಯೂರಿಟಿ ಗಾರ್ಡ್‌ಗಳನ್ನು ಮಂಗಳವಾರ ದೀಪಾವಳಿ ಜಾತ್ರೆಯಲ್ಲಿ ಪಾಲ್ಗೊಳ್ಳಲು ಹೋಗಿದ್ದ 15 ವರ್ಷದ (15 year Old was beaten) ಬಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ವರದಿಯಾಗಿದೆ.

15 year old

ಅಕ್ಟೋಬರ್ 15 ರಂದು ಸೆಕ್ಟರ್ 49ರ ಆರ್ಕಿಡ್ ಪೆಟಲ್ ಸೊಸೈಟಿಯಲ್ಲಿ ಈ ಘಟನೆ ನಡೆದಿದೆ.

ಬಂಧಿತ ಆರೋಪಿಗಳನ್ನು ಉತ್ತರ ಪ್ರದೇಶದ ರೋಹ್ತಾಶ್, ಭೂಪೇಂದರ್ ಸಿಂಗ್, ರಾಧೇಶ್ಯಾಮ್, ಮಾನ್ ಸಿಂಗ್ ಮತ್ತು ರಾಜಸ್ಥಾನದ ಭರತ್‌ಪುರ ಮೂಲದ ಜಿತೇಂದರ್ ಸಿಂಗ್ ಎಂದು ಗುರುತಿಸಲಾಗಿದೆ .

ಪೊಲೀಸರು ನೀಡಿರುವ ಹೇಳಿಕೆಯನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ (PTI) ವರದಿ ಮಾಡಿದೆ.

ದೀಪಾವಳಿಯ ಹಬ್ಬದ ಪ್ರಯುಕ್ತ ಜಾತ್ರೆಗೆ ಹೋಗಲು ಬಯಸಿದ ಹುಡುಗನಿಗೆ ಸ್ಥಳದಲ್ಲಿದ್ದ ಭದ್ರತಾ ಸಿಬ್ಬಂದಿ ಆತನನ್ನು ತಡೆದಿದ್ದಲ್ಲದೆ, ನಿಂದಿಸಿ ಕೈಯಲ್ಲಿದ್ದ ದೊಣ್ಣೆಗಳಿಂದ ಥಳಿಸಿದ್ದಾರೆ ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೆಕ್ಟರ್ 50 ಪೊಲೀಸ್ ಠಾಣೆಯಲ್ಲಿ ಐಪಿಸಿಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಮತ್ತು ಬಾಲಾಪರಾಧಿ ಕಾಯ್ದೆಯಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ : https://vijayatimes.com/3-year-old-lodged-complaint/

ವ್ಯಾಲಿ ವ್ಯೂ ಎಸ್ಟೇಟ್ ಸೊಸೈಟಿಯ ನಿವಾಸಿಯಾಗಿರುವ ಬಾಲಕನ ತಾಯಿ ತನ್ನ ದೂರಿನಲ್ಲಿ ಶನಿವಾರ ರಾತ್ರಿ 7.30ರ ಸುಮಾರಿಗೆ ತನ್ನ ಮಗ ತನ್ನ ಸ್ನೇಹಿತರೊಂದಿಗೆ ಆರ್ಕಿಡ್ ಪೇಟೆಯಲ್ಲಿ ದೀಪಾವಳಿ ಜಾತ್ರೆಯನ್ನು ನೋಡಲು ಮನೆಯಿಂದ ಹೊರಟು ಹೋಗಿದ್ದ ಎಂದು ತಿಳಿಸಿದ್ದಾರೆ.

“ನನ್ನ ಮಗ ಮತ್ತು ಅವನ ಸ್ನೇಹಿತರು ಸೊಸೈಟಿ ಗೇಟ್ ತಲುಪಿದಾಗ, ಭದ್ರತಾ ಸಿಬ್ಬಂದಿ ಮತ್ತು ಕೆಲವು ನಿವಾಸಿಗಳು ಅವನನ್ನು ತಡೆದಿದ್ದಾರೆ.

ನನ್ನ ಮಗ ಮತ್ತು ಅವನ ಸ್ನೇಹಿತರು ಸಿಬ್ಬಂದಿಯನ್ನು ಒಳಗೆ ಹೋಗಲು ಬಿಡುವಂತೆ ವಿನಂತಿಸಿದಾಗ, ಸಿಬ್ಬಂದಿ ಅವರನ್ನು ಮನಬಂದಂತೆ ನಿಂದಿಸಿದ್ದಾರೆ.

Police

ಭದ್ರತಾ ಸಿಬ್ಬಂದಿ ಅವರ ವಿರುದ್ಧ ನನ್ನ ಮಗ ಪ್ರಶ್ನಿಸಿ ಪ್ರತಿಭಟಿಸಿದಾಗ, ಸಿಬ್ಬಂದಿ ಅವನನ್ನು ಮತ್ತು ಅವನ ಸ್ನೇಹಿತರನ್ನು ಥಳಿಸಲು ಪ್ರಾರಂಭಿಸಿದರು.

ಕೆಲವು ಜನರು ನನ್ನ ಮಗನನ್ನು ಕೊಲ್ಲುವುದಾಗಿ ಕೂಡ ಬೆದರಿಕೆ ಹಾಕಿದರು ಎಂದು ಬಾಲಕನ ಪೋಷಕರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

https://fb.watch/gfhno5NCvv/ ವಿಜಯಪುರ : ಭಾರಿ ಮಳೆಗೆ ತತ್ತರಿಸಿದ ರೈತರ ಜೀವನ!

ಮಂಗಳವಾರ ಪೊಲೀಸರು ಈ ಪ್ರಕರಣದಲ್ಲಿ ಐವರು ಭದ್ರತಾ ಸಿಬ್ಬಂದಿಯನ್ನು ಬಂಧಿಸಿದ್ದಾರೆ ಎಂದು ಸೆಕ್ಟರ್ 50 ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ರಾಜೇಶ್ ಕುಮಾರ್ ತಿಳಿಸಿದ್ದಾರೆ.

ಕಾವಲುಗಾರರನ್ನು ಜಾಮೀನಿನ ಮೇಲೆ ಬಿಡಲಾಯಿತು. ನಾವು ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಎಸ್‌ಎಚ್‌ಒ ಹೇಳಿದ್ದಾರೆ ಎನ್ನಲಾಗಿದೆ.

Tags: IndiaPolice CaseUttar Pradesh

Related News

ಹಳಿ ತಪ್ಪಿರುವುದು ರೈಲು ಬೋಗಿಗಳಲ್ಲ, ನಮ್ಮ ಸರ್ಕಾರ ; ಮೋದಿ ವಿರುದ್ದ ಕಿಡಿಕಾರಿದ ನಟ ಕಿಶೋರ್
ದೇಶ-ವಿದೇಶ

ಹಳಿ ತಪ್ಪಿರುವುದು ರೈಲು ಬೋಗಿಗಳಲ್ಲ, ನಮ್ಮ ಸರ್ಕಾರ ; ಮೋದಿ ವಿರುದ್ದ ಕಿಡಿಕಾರಿದ ನಟ ಕಿಶೋರ್

June 6, 2023
ಭಾರತದ ಟಾಪ್ 10 ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳ ಪಟ್ಟಿ ಇಲ್ಲಿದೆ
ದೇಶ-ವಿದೇಶ

ಭಾರತದ ಟಾಪ್ 10 ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳ ಪಟ್ಟಿ ಇಲ್ಲಿದೆ

June 6, 2023
ghaziabad
ದೇಶ-ವಿದೇಶ

ಆನ್ಲೈನ್ ಗೇಮಿಂಗ್ ಅಪ್ಲಿಕೇಶನ್ ಮೂಲಕ ಮತಾಂತರ ಜಾಲ ಬೇಧಿಸಿದ ಯುಪಿ ಪೊಲೀಸರು

June 6, 2023
ಕಾನೂನು ಎಲ್ಲರಿಗೂ ಒಂದೇ, ತಪ್ಪಿತಸ್ಥರಿಗೆ ನ್ಯಾಯಾಲಯ ಶಿಕ್ಷೆ ವಿಧಿಸಲಿದೆ: ಕುಸ್ತಿಪಟುಗಳಿಗೆ ಅಮಿತ್ ಶಾ ಭರವಸೆ
ದೇಶ-ವಿದೇಶ

ಕಾನೂನು ಎಲ್ಲರಿಗೂ ಒಂದೇ, ತಪ್ಪಿತಸ್ಥರಿಗೆ ನ್ಯಾಯಾಲಯ ಶಿಕ್ಷೆ ವಿಧಿಸಲಿದೆ: ಕುಸ್ತಿಪಟುಗಳಿಗೆ ಅಮಿತ್ ಶಾ ಭರವಸೆ

June 6, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.