ಪಶ್ಚಿಮ ಬಂಗಾಳ ಸಿಡಿಲು ದುರಂತದಲ್ಲಿ ಸಾವನ್ನಪ್ಪಿದವರಿಗೆ 2 ಲಕ್ಷ ರೂ.ಪರಿಹಾರ : ಪಿಎಂ

ನವದೆಹಲಿ, ಜೂ. 08: ಪಶ್ಚಿಮಬಂಗಾಳದ ದಕ್ಷಿಣ ಭಾಗದ ಜಿಲ್ಲೆಗಳಲ್ಲಿ ಸಿಡಿಲು ಬಡಿದು ಸುಮಾರು 20 ಮಂದಿ ಮೃತಪಟ್ಟಿದ್ದಾರೆ. ಈ ಸಿಡಿಲು ದುರಂತದಲ್ಲಿ ಮೃತಪಟ್ಟ ಕುಟುಂಬಗಳಿಗೆ ಪ್ರಧಾನಿ ಮೋದಿ ತಲಾ 2 ಲಕ್ಷ ರೂ.ಪರಿಹಾರ ಘೋಷಿಸಿದ್ದು, ಗಾಯಗೊಂಡವರಿಗೆ 50,000 ರೂ.ಪರಿಹಾರ ನೀಡುವುದಾಗಿ ಹೇಳಿದ್ದಾರೆ.

ಪಶ್ಚಿಮ ಬಂಗಾಳ ಘಟನೆ ಬಗ್ಗೆ ಪ್ರಧಾನಿ ಮೋದಿ ಟ್ವೀಟ್​ ಮಾಡಿ ಜೀವ ಕಳೆದುಕೊಂಡವರಿಗೆ ಸಂತಾಪ ಸೂಚಿಸಿದ್ದು, ಗಾಯಗೊಂಡವರು ಶೀಘ್ರವೇ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಹೂಗ್ಲಿ ಮತ್ತು ಮುರ್ಶಿದಾಬಾದ್​ ಜಿಲ್ಲೆಗಳಲ್ಲಿ 9 ಮಂದಿ ಮೃತಪಟ್ಟಿದ್ದು, ಪುರ್ಬಾ ಮೇದಿನಿಪುರದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಇದರ ಹೊರತಾಗಿ ದಕ್ಷಿಣ 24 ಪರಗಣ, ಕೋಲ್ಕತ್ತ, ಹೌರಾಹ್​, ಪುರುಲಿಯಾ, ಬಂಕುರಾ, ನಾದಿಯಾ ಜಿಲ್ಲೆಗಳಲ್ಲಿ ಭಾರಿ ಗುಡುಗು-ಸಿಡಿಲು ಉಂಟಾಗಿದೆ.

Exit mobile version