- ಮತ್ತೆರಡು ಜೀವಗಳನ್ನು ಬಲಿ ಪಡೆದ ಕಿಲ್ಲರ್ ಹಾರ್ಟ್ (2 more cases of heart attack) ಅಟ್ಯಾಕ್
- ನಿಂತಲ್ಲೇ ಕುಸಿದು ಬಿದ್ದ ಇಪ್ಪತ್ತರ ಯುವಕ
- ಯುವಕ ಮತ್ತು ಯುವತಿಯ ಕನಸು ಕಸಿದ ಹೃದಯಾಘಾತ
Dharwad: ರಾಜ್ಯದಲ್ಲಿ ಹೃದಯಾಘಾತದ ಮರಣ ಮೃದಂಗ ಮುಂದುವರಿದಿದೆ. ಅದರಲ್ಲೂ ಕಳೆದ ಕೆಲ ದಿನಗಳಿಂದ 30 ವರ್ಷದ ಒಳಗಿನ ಯುವಕ/ಯುವತಿಯರೆ ಹೃದಯಾಘಾತಕ್ಕೆ ಸಾವನೊಪ್ಪುತ್ತಿರುವುದು ಬೇಸರದ ಸಂಗತಿಯಾಗಿದೆ.

ಇದೀಗ ಕಿಲ್ಲರ್ ಹಾರ್ಟ್ ಅಟ್ಯಾಕ್ ಇಂದಾಗಿ ಧಾರವಾಡ ಹಾಗೂ ದಾವಣಗೆರೆಯಲ್ಲಿ ಇಬ್ಬರು ಜೀವ ಕಳೆದುಕೊಂಡಿದ್ದಾರೆ.ದಾವಣಗೆರೆ (Davangere) ನಗರದ ಜಯನಗರದಲ್ಲಿ 22 ವರ್ಷದ ಕಾಲೇಜು ಯುವಕ ಹೃದಯಾಘಾತಕ್ಕೆ ಬಲಿಯಾಗಿದ್ದಾನೆ.
ಮನೆಯಲ್ಲಿದ್ದಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಜೀವ ಕಳೆದುಕೊಂಡಿದ್ದಾನೆ. ಉದ್ಯಮಿ ರೇಖಾ ಮುರ್ಗೇಶ್ ಪುತ್ರ ಅಕ್ಷಯ್ (22) ಮೃತ ದುರ್ದೈವಿ. ನಿಂತಲ್ಲೇ ಕುಸಿದು ಬೀಳುತ್ತಿದ್ದಂತೆಯೇ ಅಕ್ಷಯ್ನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಬದುಕುಳಿಯಲಿಲ್ಲ.
ಇನ್ನು ಧಾರವಾಡ ಪುರೋಹಿತನಗರದಲ್ಲಿರುವ ಪ್ರಭಾಕರ ಕುಸುಗೂರ ಅವರ ಮಗಳು ಜೀವಿತಾ ಕುಸುಗೂರ (26) ಹೃದಯಸ್ತಂಭನದಿಂದ ಮೃತಪಟ್ಟಿದ್ದಾರೆ. ಅವರು ಇತ್ತೀಚಿಗಷ್ಟೇ ಎಂಎಸ್ಸಿ ಅಗ್ರಿ ಪದವಿ ಮುಗಿಸಿ ಯುಪಿಎಸ್ಸಿ- ಕೆಎಎಸ್ (UPSC – KAS) ಪರೀಕ್ಷೆಗೆ ತಯಾರಿ ನಡೆಸಿದ್ದರು.
ಮನೆಯಲ್ಲಿ ಮಂಗಳವಾರ ಮಧ್ಯಾಹ್ನ ತಲೆ ಸುತ್ತು ಬಂದು ಬಿದ್ದ ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಿದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಇನ್ನು ಕಳೆದು ಮೂರು ತಿಂಗಳಲ್ಲಿ ಕೇವಲ ದಾವಣಗೆರೆ ಜಿಲ್ಲಾ ಆಸ್ಪತ್ರೆ ಒಂದರಲ್ಲಿಯೇ 75 ಕ್ಕೂ ಹೆಚ್ಚು ಜನ (2 more cases of heart attack) ಹೃದಯಾಘಾತದಿಂದ ಮೃತಪಟ್ಟ ವಿಚಾರ ಬೆಳಕಿಗೆ ಬಂದಿದೆ.
ರಾಜ್ಯದಲ್ಲಿ ಸಂಭವಿಸುವ ಹಠಾತ್ ಸಾವುಗಳನ್ನು ಇನ್ನು ಮುಂದೆ ಅಧಿಸೂಚಿತ ಕಾಯಿಲೆ ಎಂದು ಪರಿಗಣಿಸಲು ಹಾಗೂ ಆಸ್ಪತ್ರೆಯಿಂದ ಹೊರಗೆ ಹೃದಯಾಘಾತದಿಂದ ಮೃತಪಟ್ಟವರ ಮರಣೋತ್ತರ ಪರೀಕ್ಷೆ ಕಡ್ಡಾಯಗೊಳಿಸಲು ಆರೋಗ್ಯ ಇಲಾಖೆ (Health Department) ನಿರ್ಧರಿಸಿದೆ.
ಇದನ್ನು ಓದಿ : ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಹೃದಯ ತಪಾಸಣೆ ಯೋಜನೆ ಜಾರಿ ; ಸರ್ಕಾರದ ಮಹತ್ವದ ನಿರ್ಣಯ