Bangalore: ನಮ್ಮ ಮೆಟ್ರೋ (Namma Metro) ಹಸಿರು ಮಾರ್ಗದ ಪೀಣ್ಯ (3days greenline metro Discontinuance) ಹಾಗೂ ನಾಗಸಂದ್ರದ (Nagasandra) ನಡುವೆ ಮೂರು
ದಿನ(3 Days) ಮೆಟ್ರೋ ರೈಲು ಸೇವೆ ಸ್ಥಗಿತಗೊಳ್ಳಲಿದ್ದು, ನಾಗಸಂದ್ರದಿಂದ ಮಾದವಾರ ವರೆಗಿನ ವಿಸ್ತರಿತ ಮಾರ್ಗದಲ್ಲಿ ಕಾಮಾಗಾರಿ ನಡೆಯಲಿರುವ ಕಾರಣ ಶುಕ್ರವಾರದಿಂದ ಮೂರು ದಿನ
ಮೆಟ್ರೋ ಸೇವೆ ತಾತ್ಕಲಿಕವಾಗಿ ಸಂಚಾರ ಸ್ಥಗಿತಗೊಳ್ಳಲಿದೆ ಎಂದು (3days greenline metro Discontinuance) ಬಿಎಂಆರ್ಸಿಎಲ್ ತಿಳಿಸಿದೆ.
ಬೆಂಗಳೂರು ಮೆಟ್ರೋ(Bangalore Metro) ರೈಲು ನಿಗಮವು ಹಸಿರು ಮಾರ್ಗದಲ್ಲಿ ಪ್ರಯಾಣಿಸುವ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ ಮೂಡಿಸಿದ್ದು, ಪೀಣ್ಯ ಹಾಗೂ ನಾಗಸಂದ್ರದ (Nagasandra)
ನಡುವೆ ಮೂರು ದಿನ ಮೆಟ್ರೋ ರೈಲು ಸೇವೆ ಸ್ಥಗಿತಗೊಳ್ಳಲಿದೆ. ಜನವರಿ 26 ರಿಂದ ಜನವರಿ 28ರ ತನಕ ಮೆಟ್ರೋ ರೈಲು ಸಂಚಾರ ತಾತ್ಕಲಿಕ ಸ್ಥಗಿತಗೊಳ್ಳಲಿದೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ.
ಜನವರಿ 29ರ (Jan 29) ಬೆಳಗ್ಗೆ 5 ಗಂಟೆಯಿಂದ ಎಂದಿನಂತೆ ಸಂಚಾರ ಶುರುವಾಗಲಿದ್ದು, ಮೆಟ್ರೋದ ಎರಡನೇ ಹಂತದ ಕಾಮಗಾರಿ ಕೂಡ ಸದ್ಯ ತ್ವರಿತಗತಿಯಲ್ಲಿ ಸಾಗುತ್ತಿದೆ. ನಗರದ ಎಲ್ಲ ಪ್ರದೇಶಗಳಿಗೆ
ಮೆಟ್ರೋ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಬಿಎಂಆರ್ಸಿಎಲ್ ಚುರುಕಿನ ಕಾಮಗಾರಿ ನಡೆಸುತ್ತಿದೆ.
ನಾಗಸಂದ್ರದಿಂದ (Nagasandra) ಮಾದವಾರವರೆಗಿನ ವಿಸ್ತರಿತ ಮಾರ್ಗ ಕಾಮಗಾರಿ ನಡೆಯುತ್ತಿದ್ದು, ಇದು ಪೂರ್ಣಗೊಂಡ ಬಳಿಕ ಮಾದವಾರವರೆಗೆ ಮೆಟ್ರೋ ಸೇವೆ ದೊರೆಯಲಿದೆ. ಮೆಟ್ರೋ ಸಂಚಾರ
(Metro traffic) ಸ್ಥಗಿತಗೊಳ್ಳುವ ಕಾರಣ ಪೀಣ್ಯ ಸುತ್ತ ಮುತ್ತ ಸಂಚಾರ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇದೆ.
ಬರೊಬ್ಬರಿ 6.5 ಲಕ್ಷ (6.5 lakh) ಜನ ನಮ್ಮ ಮೆಟ್ರೋ ರೈಲುಗಳಲ್ಲಿ ದಿನವೊಂದಕ್ಕೆಸಂಚರಿಸುತ್ತಿದ್ದು, ಈ ಪೈಕಿ 80 ಸಾವಿರದಿಂದ 1 ಲಕ್ಷ (1 Lakh) ಜನ ಕ್ಯೂಆರ್ ಕೋಡ್ ಮೂಲಕ ಟಿಕೆಟ್ ಖರೀದಿಸಿ
ಪ್ರಯಾಣಿಸುತ್ತಿದ್ದಾರೆ. ಇದು ಟಿಕೆಟ್ ಕೌಂಟರ್ನ ಒತ್ತಡ ಕಡಿಮೆ ಆಗಲು ಕಾರಣವಾಗಿದೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ.
ನಮ್ಮ ಮೆಟ್ರೋ (Namma Metro ) ಕ್ಯೂಆರ್ ಕೋಡ್, ವಾಟ್ಸಪ್ ಪೇಮೆಂಟ್ ಸೌಲಭ್ಯಕ್ಕೆ ಪ್ರಯಾಣಿಕರು ಫಿದಾ ನಮ್ಮ ಬೆಂಗಳೂರಿನ ಮೆಟ್ರೋ ಸಹ ಡಿಜಿಟಲ್ ಪೇಮೆಂಟ್ ಸೌಲಭ್ಯ (Digital payment
facility) ಅಳವಡಿಸಿಕೊಂಡಿದ್ದು ಪ್ರಯಾಣಿಕರು ಅದರ ಗರಿಷ್ಠ ಪ್ರಯೋಜನ ಪಡೆಯುತ್ತಿದ್ದಾರೆ. ತನ್ಮೂಲಕ ತಾವು ಸಿಲಿಕಾನ್ ಸಿಟಿ ಜನ ಎಂಬುದನ್ನು ಮತ್ತೊಮ್ಮೆ ಪ್ರೂವ್ ಮಾಡಿದ್ದಾರೆ.
ಅಂದಹಾಗೆ ಬಿಎಂಆರ್ಸಿಎಲ್ ವತಿಯಿಂದ ನಮ್ಮ ಮೆಟ್ರೋ ಪ್ರಯಾಣಕ್ಕೆ ಡಿಜಿಟಲ್ ಪಾವತಿ ವ್ಯವಸ್ಥೆ ಜಾರಿಗೊಳಿಸಿದೆ.
ಟ್ರಾಫಿಕ್ ಸಾಗರದಿಂದ (Nagasandra) ಬಳಲಿರುವ ಸಿಲಿಕಾನ್ ಸಿಟಿ ಮಂದಿ ಇದೀಗ ಮೆಟ್ರೋ ಮೊರೆ ಹೋಗಿದ್ದಾರೆ. ದಿನದಿಂದ ದಿನಕ್ಕೆ ನಮ್ಮ ಮೆಟ್ರೋದಲ್ಲಿ ಪ್ರಯಾಣಿಸುವವರ ಸಂಖ್ಯೆ ಹೆಚ್ಚಾಗಿದೆ.
ಬಿಎಂಆರ್ಸಿಎಲ್ ಕೂಡ ಸಿಟಿಯ ಅಷ್ಟ ದಿಕ್ಕುಗಳಿಗೂ ಮೆಟ್ರೋ ಸಂಪರ್ಕ ಕಲ್ಪಿಸುವ ಕೆಲಸ ಮಾಡ್ತಿದೆ. ಸದ್ಯ ಮೆಟ್ರೋದಲ್ಲಿ ಒಂದು ದಿನಕ್ಕೆ ಬರೊಬ್ಬರಿ 6.5 ಲಕ್ಷ ಜನ ಸಂಚರಿಸುತ್ತಿದ್ದಾರೆ.
ವಿಸ್ತರಣೆ, NCMC ಕಾರ್ಡ್ ಟಿಕೆಟ್, ಫೀಡರ್ ಬಸ್ ಸಿಟಿ ಮಂದಿಯ ಅಚ್ಚುಮೆಚ್ಚಾಗ್ತಿದೆ. ಇದರ ನಡುವೆ ಟೋಕನ್ ಟಿಕೆಟ್ ಕಿರಿಕಿರಿ ತಪ್ಪಿಸಲು ಪರಿಚಯಿಸಿದ ಕ್ಯೂಆರ್ ಕೋಡ್ ಈಗ
ಹೊಸ ದಾಖಲೆ ನಿರ್ಮಾಣಕ್ಕೆ ಕಾರಣವಾಗಿದೆ.
ಇದನ್ನು ಓದಿ: ಜಯದೇವ ಆಸ್ಪತ್ರೆ ನಿರ್ದೇಶಕ ಸ್ಥಾನದಿಂದ ಡಾ. ಮಂಜುನಾಥ್ ಔಟ್ ; ಸಿಎಂ ಆಪ್ತರಿಗೆ ಸ್ಥಾನ..?!
- ಭವ್ಯಶ್ರೀ ಆರ್ ಜೆ