ಸಿಎಂ ಬಿಎಸ್‌ಯಡಿಯೂರಪ್ಪ ನಿವಾಸಕ್ಕೆ ವಿಜಯಪುರದ 40 ಸ್ವಾಮೀಜಿಗಳು ಭೇಟಿ

ಬೆಂಗಳೂರು, ಫೆ. 09: ಇಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಕಾವೇರಿ ನಿವಾಸಕ್ಕೆ ವಿಜಯಪುರ ಜಿಲ್ಲೆಯ ಸುಮಾರು 40 ಮಂದಿ ಸ್ವಾಮೀಜಿಗಳ ಗುಂಪೊಂದು ಭೇಟಿ ನೀಡಿದ್ದು,ವಿಜಯಪುರದ ಜಿಲ್ಲಾ ಮಠಾಧೀಶರ ಒಕ್ಕೂಟದಿಂದ ಸ್ವಾಮೀಜಿಗಳು ಬೆಂಗಳೂರಿಗೆ ಆಗಮಿಸಿ ಜಿಲ್ಲೆಯ ವಿವಿಧ ಬೇಡಿಕೆ ಈಡೇರಿಸಲು ಮನವಿ ಪತ್ರವನ್ನು ಸಿಎಂ ಯಡಿಯೂರಪ್ಪನವರಿಗೆ ನೀಡಿದರು.

ವಿಜಯಪುರ ಜಿಲ್ಲೆಯನ್ನು ಸಮಗ್ರ ನೀರಾವರಿಗೆ ಒಳಪಡಿಸುವ ಮತ್ತು ಈಗಾಗಲೇ ಚಾಲ್ತಿಯಲ್ಲಿರುವ ನೀರಾವರಿ ಯೋಜನೆಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವುದು ಹಾಗೂ ವೀರಶೈವ ಲಿಂಗಾಯತ ಒಳ ಪಂಗಡಗಳಿಗೆ ಮೀಸಲಾತಿ ಕಲ್ಪಿಸಿಕೊಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಸಿಎಂ ಮುಂದಿರಿಸಿದ್ದಾರೆ.

Exit mobile version