• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ರಾಜ್ಯದಲ್ಲಿ ಕೊರೋನಾದಿಂದಾಗಿ ಅನಾಥರಾದ 48 ಮಕ್ಕಳು

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ರಾಜ್ಯದಲ್ಲಿ ಕೊರೋನಾದಿಂದಾಗಿ ಅನಾಥರಾದ 48 ಮಕ್ಕಳು
0
SHARES
0
VIEWS
Share on FacebookShare on Twitter

ಮಡಿಕೇರಿ, ಜೂ.19: ಸಾಂಕ್ರಾಮಿಕ ಸೋಂಕಿನ ಮೂರನೇ ಅಲೆಯ ಸಂದರ್ಭದಲ್ಲಿ ಮಕ್ಕಳು ಹೆಚ್ಚಾಗಿ ಕೊರೊನಾ ಸೋಂಕಿಗೆ ಒಳಗಾಗಲಿದ್ದಾರೆ ಎಂಬ ಆತಂಕವಿದೆ. ಈ ಹಿನ್ನೆಲೆ ದೇಶಾದ್ಯಂತ, ತಜ್ಞರು ಮತ್ತು ಸರ್ಕಾರವು ಕೋವಿಡ್ -19 ರ ಸೋಂಕಿನಿಂದ ಮಕ್ಕಳನ್ನು ಹೇಗೆ ರಕ್ಷಿಸಬೇಕು ಎಂಬುದರ ಕುರಿತು ಚರ್ಚಿಸುತ್ತಿದೆ. ಆದರೆ ಈಗಾಗಲೇ ದೇಶದಾದ್ಯಂತ ಸಾವಿರಾರು ಮಕ್ಕಳು ಕೋವಿಡ್‌ ಕಾರಣದಿಂದಾಗಿ ತಮ್ಮ ಪೋಷಕರನ್ನು ಕಳೆದುಕೊಂಡು ಅನಾಥರಾಗಿದ್ದಾರೆ.

ಸಾಂಕ್ರಾಮಿಕ ರೋಗವು ಈಗಾಗಲೇ ಕರ್ನಾಟಕದಾದ್ಯಂತ ನೂರಾರು ಮಕ್ಕಳ ಬಾಲ್ಯದ ಮೇಲೆ ಭಾರಿ ಪರಿಣಾಮವನ್ನುಂಟು ಮಾಡಿದೆ. ಕೋವಿಡ್‌ ಸೋಂಕಿನ ಕಾರಣದಿಂದಾಗಿ ರಾಜ್ಯಾದ್ಯಂತ 48 ಮಕ್ಕಳು ತಮ್ಮ ಹೆತ್ತವರನ್ನು ಕಳೆದುಕೊಂಡಿದ್ದಾರೆ. ನೂರಾರು ಮಂದಿ ಕೊರೊನಾ ಕಾರಣದಿಂದಾಗಿ ತಮ್ಮ ಓರ್ವ ಪೋಷಕರನ್ನು ಕಳೆದುಕೊಂಡಿದ್ದಾರೆ.

”ಕೊಡಗಿನ ಗುಡ್ಡಗಾಡು ಜಿಲ್ಲೆಯಲ್ಲಿ, ಮೂರು ಮಕ್ಕಳು ಕೋವಿಡ್‌ ಪರಿಣಾಮ ಇಬ್ಬರೂ ಪೋಷಕರನ್ನು ಕಳೆದುಕೊಂಡಿದ್ದಾರೆ. ಇನ್ನೂ 35 ಮಕ್ಕಳ ಪೋಷಕರ ಪೈಕಿ ತಂದೆ ಅಥವಾ ತಾಯಿ, ಒಬ್ಬರು ಕೊರೊನಾ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಾರಂಭಿಸಿದ ‘ಬಾಲ ಸೇವಾ’ ಯೋಜನೆಯಡಿ ಇಲಾಖೆ ಈ ಅನಾಥ ಮಕ್ಕಳನ್ನು ತಲುಪುತ್ತಿದೆ,” ಎಂದು ಕರ್ನಾಟಕ ಮಹಿಳೆ ಮತ್ತು ಮಕ್ಕಳ ಕಲ್ಯಾಣ ಸಚಿವ ಶಶಿಕಲಾ ಜೊಲ್ಲೆ ಶುಕ್ರವಾರ ಹೇಳಿದ್ದಾರೆ.

ಕೋವಿಡ್ -19 ರ ನಿರೀಕ್ಷಿತ ಮೂರನೇ ಅಲೆಗಿಂತ ಮುಂಚಿತವಾಗಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ಚರ್ಚಿಸಲು ಮಡಿಕೇರಿಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ ಶಶಿಕಲಾ, ಪ್ರತಿ ತಾಲೂಕಿನಲ್ಲಿ ಮಕ್ಕಳಿಗಾಗಿ ಮೀಸಲಾದ ಕೋವಿಡ್ ಕೇರ್ ಕೇಂದ್ರಗಳನ್ನು ಸ್ಥಾಪಿಸಲಾಗುವಂತೆ ನೋಡಿಕೊಳ್ಳಲು ಕೊಡಗಿನ ತನ್ನ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಅಗತ್ಯವಾದ ನೆರವು ನೀಡುವಂತೆ ಜಿಲ್ಲಾಡಳಿತಕ್ಕೆ ಮನವಿ ಮಾಡಿದರು.

”ಕೊಡಗಿನಲ್ಲಿ 2,380 ಮಕ್ಕಳು ಎರಡನೇ ಅಲೆಯ ಸಂದರ್ಭ ಸೋಂಕಿನ ಪರಿಣಾಮಕ್ಕೆ ಒಳಗಾಗಿದ್ದಾರೆ. ಈ ಪೈಕಿ 16 ಮಂದಿ ಹೊರತುಪಡಿಸಿ ಉಳಿದವರೆಲ್ಲರೂ ಸೋಂಕಿನಿಂದ ಚೇತರಿಸಿಕೊಂಡಿದ್ದಾರ,” ಎಂದು ಹೇಳಿದ ಸಚಿವೆ, ಅನಾಥ ಮಕ್ಕಳ ಸುಧಾರಣೆಗೆ ದೇಣಿಗೆ ನೀಡುವಂತೆ ಮನವಿ ಮಾಡಿದರು. ಈ ಮಕ್ಕಳನ್ನು ದತ್ತು ಪಡೆಯಲು ಆಸಕ್ತಿ ಹೊಂದಿರುವವರಿಗೆ ಇಲಾಖೆಯಿಂದ ಎಲ್ಲಾ ಕಾನೂನು ಬೆಂಬಲವನ್ನು ನೀಡಲಾಗುವುದು ಎಂದು ಭರವಸೆ ನೀಡಿದರು.

Related News

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ
ಪ್ರಮುಖ ಸುದ್ದಿ

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ

May 27, 2023
8 ಬ್ಯಾಂಕುಗಳ ಲೈಸೆನ್ಸ್ ರದ್ದು ಮಾಡಿದೆ RBI : ಕರ್ನಾಟಕದಲ್ಲಿರುವ ಬ್ಯಾಂಕ್‌ಗಳೂ ಈ ಲಿಸ್ಟಲ್ಲಿವೆ
ಪ್ರಮುಖ ಸುದ್ದಿ

8 ಬ್ಯಾಂಕುಗಳ ಲೈಸೆನ್ಸ್ ರದ್ದು ಮಾಡಿದೆ RBI : ಕರ್ನಾಟಕದಲ್ಲಿರುವ ಬ್ಯಾಂಕ್‌ಗಳೂ ಈ ಲಿಸ್ಟಲ್ಲಿವೆ

May 27, 2023
ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು
ಪ್ರಮುಖ ಸುದ್ದಿ

ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು

May 27, 2023
ನೂತನ ಕಾಂಗ್ರೆಸ್ ಸರ್ಕಾರದ ಭರ್ತಿಯಾದ ಸಿದ್ದರಾಮಯ್ಯ ಸಂಪುಟ: ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ? ಯಾವ ಜಿಲ್ಲೆಗಿಲ್ಲ ಮಂತ್ರಿಭಾಗ್ಯ ಪಟ್ಟ?
ಪ್ರಮುಖ ಸುದ್ದಿ

ನೂತನ ಕಾಂಗ್ರೆಸ್ ಸರ್ಕಾರದ ಭರ್ತಿಯಾದ ಸಿದ್ದರಾಮಯ್ಯ ಸಂಪುಟ: ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ? ಯಾವ ಜಿಲ್ಲೆಗಿಲ್ಲ ಮಂತ್ರಿಭಾಗ್ಯ ಪಟ್ಟ?

May 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.