• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ರಮೇಶ್ ಜಾರಕಿಹೊಳಿ ಪ್ರಕರಣ: ಪ್ರಕರಣದಲ್ಲಿ 5 ಕೋಟಿ ಡೀಲ್ ನಡೆದಿದೆ: ಎಚ್.ಡಿ.ಕೆ ಹೊಸ ಬಾಂಬ್

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ಕೇಂದ್ರದ ಬಜೆಟ್ ಜನರ ಶೋಷಣೆಗೆ ಕಾರಣವಾಗುವುದರಲ್ಲಿ ಅನುಮಾನವಿಲ್ಲ: ಹೆಚ್‌ಡಿಕೆ
0
SHARES
0
VIEWS
Share on FacebookShare on Twitter

ಮೈಸೂರು, ಮಾ. 05: ರಾಜಕಾರಣಿಗಳ ಸಿಡಿ ಇದೆ ಎನ್ನುವವರು ಮೊದಲು ಅಂತವರನ್ನ ಒದ್ದು ಏರೋಪ್ಲೇನ್ ಹತ್ತಿಸಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು.

ಮೈಸೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಡಿ ಇದೆ ಎಂದು ಕೆಲವರು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ.
ಇದು ಬ್ಲ್ಯಾಕ್‌ಮೇಲ್‌ನ ಕಾರ್ಯತಂತ್ರ. ಇದಕ್ಕೆ ಪುಷ್ಠಿ ಕೊಟ್ಟು ಬೆಳಸಬೇಡಿ. ಈ ರೀತಿ ಸಿಡಿ ಇದೆ ಎನ್ನುವವರನ್ನು ಬಂಧಿಸಿ ಅವರ ಬಳಿ ಇರುವ ಸಿಡಿಗಳನ್ನು ಸರ್ಕಾರವೇ ಜನರ ಮುಂದೆ ಬಿಡುಗಡೆ ಮಾಡಲಿ.

ಅದ್ಯಾರೋ ಒಬ್ಬ ಮಾಜಿ ಸಿಎಂ ಅದೆಲ್ಲೋ ಹೋಗಿ ಬರುತ್ತಾರೆ.
ಅದರ ಸಿಡಿ ನನ್ನ ಬಳಿ ಇದೆ ಅಂತಾನೆ. ರಾಜ್ಯದಲ್ಲಿ ದೇವೇಗೌಡ, ಎಸ್‌ಎಂ ಕೃಷ್ಣ ಹಾದಿಯಾಗಿ ತುಂಬಾ ಜನ ಇದ್ದಾರೆ. ಯಾರು ಆ ಮಾಜಿ ಸಿಎಂ ಎಂದು ಬಾಯಿ ಬಿಡಿಸಿ.
ಸುಮ್ಮನ್ನೇ ನಾವು ಹೊರಗೆ ಓಡಾಡುವಾಗ ಮುಜುಗರ ತರಬೇಡಿ. ಇಂತಹ ಹೇಳಿಕೆಗಳಿಂದ ಜನ ನಮ್ಮನ್ಮು ಅನುಮಾನದಿಂದ ನೋಡುವ ಹಾಗೇ ಮಾಡಬೇಡಿ. ಹಿಂದೆ ಅದ್ಯಾವುದೋ ಆಂಕರ್ ವಿಚಾರದಲ್ಲು ನನ್ನ ಹೆಸರು ತಂದರು. ಆಗಲು ಸರಿಯಾಗಿ ಜಾಡಿಸಿದ್ದೇ‌ನೆ. ನನಗೆ ಈ ವಿಚಾರದಲ್ಲಿ ಯಾವುದೇ ಭಯವು ಇಲ್ಲ. ಈ ಪ್ರಕರಣದಲ್ಲಿ ನಾನು ತುಂಬಾ ಕ್ಲೀನ್ ಆಗಿದ್ದೇನೆ. ಆದರೆ ನನ್ನ ಉದ್ದೇಶ ಇಂತಹ ಬ್ಲ್ಯಾಕ್ ಮೇಲ್‌ಗಳು ನಿಲ್ಲಬೇಕು. ಇಂತಹ ಪ್ರಕರಣಗಳು ಹೆಸಿಗೆ ಬರುವಂತ ಸ್ಥಿತಿ ನಿರ್ಮಾಣ ಮಾಡಿದೆ ಎಂದರು.‌

ಅಲ್ಲದೇ, ಮಾಜಿ ಸಚಿವ ಜಾರಕಿಹೊಳಿ ಸಿಡಿ ಪ್ರಕರಣದ ಕುರಿತು ಮಾತನಾಡಿದ ಅವರು, ಈ ಪ್ರಕರಣದಲ್ಲಿ 5 ಕೋಟಿಯ ಡೀಲ್ ನಡೆದಿದೆ. ಇದು ನನಗಿರುವ ಮೂಲಗಳ ಮಾಹಿತಿ. ಕಳೆದು ಮೂರು ತಿಂಗಳಿಂದ ಈ‌ ಡೀಲ್ ವ್ಯವಹಾರ ನಡೆದಿದೆ. ದೊಡ್ಡ ದೊಡ್ಡವರೇ ಈ ಪ್ರಕರಣದಲ್ಲಿ ಇದ್ದಾರೆ. ಇದನ್ನ ತನಿಖೆ ಮಾಡಿಸುವ ಜವಾಬ್ದಾರಿ ಸರ್ಕಾರದ್ದು. ನಾನು ಈ ಪ್ರಕರಣ ನೋಡಿ ಖುಷಿ ಪಡುವವನ್ನಲ್ಲ.

ಸರ್ಕಾರ ಬೀಳಿಸದರು ಎನ್ನುವ ಕಾರಣಕ್ಕೆ ನಾನು ಒಂದು ಕಲ್ಲು ಹೊಡೆಯಬೇಕು ಅಂತ ಹೊಡೆಯೋದಿಲ್ಲ. ಇದೀಗಾ ಹಲವು ರೀತಿಯ ವ್ಯಾಖ್ಯಾನ ಶುರುವಾಗಿದೆ. ಪ್ರಕರಣ ಹಳ್ಳ ಹಿಡಿಯುವಂತದ್ದು ಏನು?
ಆ ಮಂತ್ರಿನಾ ರಾಜೀನಾಮೆ ಕೊಡಿಸಬೇಕೆಂಬ ಉದ್ದೇಶ ಇತ್ತು. ಇದೀಗಾ ಆ ರಾಜೀನಾಮೆ ಕೊಡಿಸುವಲ್ಲಿ ಅವರು ಸಫಲರಾಗಿದ್ದಾರೆ.

ಇದೀಗಾ ಆ ಹೆಣ್ಣು ಮಗಳನ್ನ ಕಟ್ಟಿಕೊಂಡು ಅವರಿಗೆ ಏನು?
ಅವರಿಬ್ಬರೇ ವಿಡಿಯೋ ಮಾಡಿಕೊಂಡಿದ್ದಾರೆ. ಆದರೆ ಆ ವಿಡಿಯೋ ಹೊರಗೆ ಕೊಟ್ಟವರು ಯಾರು? ಗೊತ್ತಿಲ್ಲ.? ಇಂತಹ ವಿಚಾರದಲ್ಲಿ ಸುಮ್ಮನ್ನೇ ಕಲ್ಲು ಹೊಡೆಯಬಾರದು. ಇವತ್ತು ರಾಜಕೀಯ ತುಂಬಾ ಕಲುಷಿತವಾಗಿದೆ. ಕೆಸರು ನಮ್ಮ‌ ಮೇಲೆ ನಾವೇ ಎರಚಿಕೊಂಡ ಹಾಗೆ. ಇಂತಹ ಪ್ರಕರಣದಿಂದ ನಮ್ಮ‌ನ್ನು ಜನ ತಪ್ಪಾಗಿ ತಿಳಿದು ಕೊಳ್ಳುತ್ತಾರೆ. ಹೀಗಾಗಿ ಮೊದಲು ಇಂತವರನ್ನ ಒದ್ದು ಒಳಗೆ ಹಾಕಿ ಎಂದರು.

ಇದೇ ವೇಳೆ ಒನ್ ನೇಷನ್ ಒನ್ ಎಲೆಕ್ಷನ್ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಮೊದಲು ಹಣದಿಂದ ಚುನಾವಣೆ ನಡೆಯೋದು ನಿಲ್ಲಲ್ಲಿ. ಚುನಾವಣೆಯ ವ್ಯವಸ್ಥೆಯ ಲೋಪ ಬದಲಾಗಲಿ. ಹಣವಿದ್ದವರಿಗೆ ಮಾತ್ರ ಚುನಾವಣೆ ಅನ್ನೋದು ನಿಲ್ಲಬೇಕು. ಆಮೇಲೆ ಈ ಬಗ್ಗೆ ಚರ್ಚೆ ಮಾಡೋಣ. ನನ್ನನ್ನು ಒಳಗೊಂಡಂತೆ ಬಿಜೆಪಿ, ಕಾಂಗ್ರೆಸ್ ಆತ್ಮ ವಿಮರ್ಶೆ ಮಾಡಬೇಕು. ಒನ್ ನೇಷನ್ ಒನ್ ಎಲೆಕ್ಷನ್ ವಿಚಾರದಲ್ಲಿ ಕಾಂಗ್ರೆಸ್ ಯೂ ಟರ್ನ್ ಹೊಡೆದಿದೆ. ಈ ವಿಚಾರದ ಚರ್ಚೆಯಲ್ಲಿ ಕಾಂಗ್ರೆಸ್ ಮೊದಲು ಭಾಗವಹಿಸಿತ್ತು
ಆ ನಂತರ ಸದನದಲ್ಲಿ ಯು ಟರ್ನ್ ಹೊಡೆಯಿತು.
ಇದು ಯಾಕೆ ಅಂತ ಗೊತ್ತಾಗಲಿಲ್ಲ. ಪ್ರಸ್ತುತ ರಾಜಕಾರಣದ ಸ್ಥಿತಿ ಪ್ರಜಾಪ್ರಭುತ್ವದ ವ್ಯವಸ್ಥೆ ಬುಡಮೇಲು ಮಾಡಲಿದೆ.
ಮೊದಲು ಅದು ಕೊನೆಯಾಗಬೇಕು ಎಂದರು.

Related News

ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್
Vijaya Time

ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್

June 8, 2023
ಸರ್ಕಾರ ಮದ್ಯ ದರ ಹೆಚ್ಚಳ ಮಾಡಿಲ್ಲ, ಬಿಯರ್‌ ಕಂಪೆನಿಗಳಿಂದಲೇ ಬೆಲೆ ಏರಿಕೆ: ಅಬಕಾರಿ ಇಲಾಖೆ ಸ್ಪಷ್ಟನೆ
Vijaya Time

ಸರ್ಕಾರ ಮದ್ಯ ದರ ಹೆಚ್ಚಳ ಮಾಡಿಲ್ಲ, ಬಿಯರ್‌ ಕಂಪೆನಿಗಳಿಂದಲೇ ಬೆಲೆ ಏರಿಕೆ: ಅಬಕಾರಿ ಇಲಾಖೆ ಸ್ಪಷ್ಟನೆ

June 8, 2023
ಸರಾಸರಿ ದಾಟಿದ್ರೆ ವಿದ್ಯುತ್ ಬಿಲ್ ಕಟ್ಟಲೇಬೇಕು : ಇಂಧನ ಸಚಿವ ಕೆ.ಜೆ.ಜಾರ್ಜ್
ರಾಜ್ಯ

ಸರಾಸರಿ ದಾಟಿದ್ರೆ ವಿದ್ಯುತ್ ಬಿಲ್ ಕಟ್ಟಲೇಬೇಕು : ಇಂಧನ ಸಚಿವ ಕೆ.ಜೆ.ಜಾರ್ಜ್

June 7, 2023
ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಖಚಿತ: ಯಾವೆಲ್ಲಾ ಪಠ್ಯಗಳಿಗೆ ಬಿಳಲಿದೆ ಕತ್ತರಿ?
ರಾಜ್ಯ

ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಖಚಿತ: ಯಾವೆಲ್ಲಾ ಪಠ್ಯಗಳಿಗೆ ಬಿಳಲಿದೆ ಕತ್ತರಿ?

June 7, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.