ನ್ಯಾಯಾಧಿಕರಣದ ಆದೇಶವನ್ನೂ ಮೀರಿ 60 tmc ನೀರನ್ನು ತಮಿಳುನಾಡಿಗೆ ಹರಿಸಲಾಗ್ತಿದೆ – ಬಿಜೆಪಿ ಗಂಭೀರ ಆರೋಪ

Karnataka: ಕಾವೇರಿ ನ್ಯಾಯಾಧಿಕರಣವೇ ನಿಗದಿ ಮಾಡಿದ್ದಕ್ಕಿಂತಲೂ ಎರಡು ಪಟ್ಟು ನೀರನ್ನು (60tmc water released to tn) ಈಗಾಗಲೇ ಹರಿಬಿಟ್ಟಿದ್ದಾರೆ. ರಾಜ್ಯದ ರೈತರ ಹಿತಕ್ಕಿಂತಲೂ,

ಕಾಂಗ್ರೆಸ್ (Congress) ಸ್ನೇಹಿತರಾದ ಸ್ಟಾಲಿನ್ (Stalin) ಅವರಿಗೆ ಅನುಕೂಲ ಮಾಡಿಕೊಡುವುದು ಸಿದ್ದರಾಮಯ್ಯರವರ ಗುರಿ. ಹಾಗಾಗಿ ಈಗ ಪ್ರತಿನಿತ್ಯವೂ 15,000 ಕ್ಯೂಸೆಕ್ಸ್ ನೀರನ್ನು

ಬಿಡಲಾಗ್ತಾ ಇದೆ. ಅಲ್ಲದೆ 32 tmc ನೀರು ಬಿಡಬೇಕು ಅನ್ನೋ ನ್ಯಾಯಾಧಿಕರಣದ ಆದೇಶವನ್ನೂ ಮೀರಿ 60 tmc ನೀರನ್ನು ತಮಿಳುನಾಡಿಗೆ ಹರಿಸಲಾಗ್ತಿದೆ. ಅಂದ್ಹಾಗೆ 60 tmc ಅಂದ್ರೆ ಎಷ್ಟು ಗೊತ್ತಾ?

ಸುಮಾರು ನಾಲ್ಕು ಲಕ್ಷ ಹೆಕ್ಟೇರ್ ಬೆಳೆಗೆ ಆಗೋವಷ್ಟು ನೀರು..! ಅಸಮರ್ಥ ಕಾಂಗ್ರೆಸ್ ಸರ್ಕಾರದ ಪರಿಣಾಮವಾಗಿ ಕೆಆರ್ಎಸ್ನಲ್ಲಿ ನೀರಿನ ಮಟ್ಟ 100 ಅಡಿಗಿಂತ ಕೆಳಗೆ ಇಳಿಯೋ ಅಪಾಯದಲ್ಲಿದೆ.

ಬಂಗಾರದ ಬೆಳೆ ಭಸ್ಮವಾಗುವ ಆತಂಕದಲ್ಲಿ ನಮ್ಮ ರೈತರಿದ್ದಾರೆ. ಎಂದು ಬಿಜೆಪಿ (BJP) ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದೆ.

ಈ ಟ್ವೀಟ್ ಮಾಡಿರುವ ಬಿಜೆಪಿ (BJP), ಇನ್ನೇನು ಕೆಲವೇ ತಿಂಗಳು ಕಳೆದರೆ ಬೆಂಗಳೂರಲ್ಲಿ (Bengaluru) ಕುಡಿಯೋ ನೀರಿಗೂ ತತ್ವಾರ ಶುರುವಾಗೋದಿದೆ. ನಿಯಮಗಳನ್ನು ಮಾತನಾಡುವವರಿಗಾದರೂ

ಇದನ್ನು ಅರ್ಥ ಮಾಡಿಸಬಹುದು. ಆದರೆ ನಿಯತ್ತೇ ಇಲ್ಲದವರಿಗೆ ಅರ್ಥಮಾಡಿಸೋದು ಹೇಗೆ? ನ್ಯಾಯಾಲಯದ ಆದೇಶವನ್ನು ಮೀರಿ ಕಳ್ಳತನದಿಂದ ಕಾವೇರಿಯನ್ನು ಹರಿ ಬಿಟ್ಟರೆ ಪಾಪದ ರೈತ

ಇನ್ಯಾರ ಮೊರೆ ಹೋಗಬೇಕು ಹೇಳಿ? ನಮ್ಮ ನಾಡಿಗೆ ದ್ರೋಹ ಬಗೆದ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ (60tmc water released to tn) ಎಂದು ಆಕ್ರೋಶ ಹೊರಹಾಕಿದೆ.

ಇನ್ನೊಂದು ಟ್ವೀಟ್ನಲ್ಲಿ, ಕರ್ನಾಟಕದಲ್ಲಿ ದುರಾದೃಷ್ಟವಶಾತ್ 10 ವರ್ಷದ ಬಳಿಕ ಮತ್ತೆ ಬರದ ಛಾಯೆ ಆವರಿಸಿದೆ. ಮುಂಗಾರಿನಲ್ಲಿ ಬಂದ ಅಲ್ಪ ಮಳೆಯನ್ನೇ ನಂಬಿ ಕಾವೇರಿ ಒಡಲಿನ ಎರಡೂ

ಮಡಿಲುಗಳಲ್ಲಿ ರೈತರು ಬಿತ್ತನೆ ಮಾಡಿ ಬೆಳೆಗಾಗಿ ಕಾಯುತ್ತಿದ್ದಾರೆ. ಆದರೆ ಅನ್ನ, ಹಣ, ಬೆಳಕು ಎಂದೆಲ್ಲಾ ಭರವಸೆ ನೀಡಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ (Siddaramaiah) ಅವರ ನೇತೃತ್ವದ

ಸರಕಾರ ಅಕ್ಕಿಯ ಪ್ರತಿ ಅಗಳಿನಿಂದ ಹಿಡಿದು ಕಾವೇರಿ (Kaveri) ನೀರಿನ ಪ್ರತಿ ಹನಿಯವರೆಗೂ ರಾಜ್ಯದ ಜನತೆಗೆ ಮತ್ತು ಅನ್ನದಾತ ರೈತನಿಗೆ ಮಾಡಿದ್ದು ನಯವಂಚನೆ..! ಅಧಿಕಾರದ ಲಾಲಸೆ,

ದುರಾಸೆಗೆ ಬಿದ್ದ ಕಾಂಗ್ರೆಸ್ , ಯಾವ ಯೋಜನೆಯನ್ನು ಹೇಗೆ ಅನುಷ್ಠಾನ ಮಾಡಬೇಕೆಂಬ ಕಿಂಚಿತ್ತೂ ಪರಿಕಲ್ಪನೆ ಇಲ್ಲದೆ ಮನಸೋಯಿಚ್ಛೆ ಯೋಜನೆಗಳನ್ನು ಘೋಷಿಸಿತು. ಆದರೆ ಅಧಿಕಾರಕ್ಕೆ ಬಂದ

ಮೇಲೆ ಆ ಯಾವ ಯೋಜನೆಯನ್ನೂ ಸರಿಯಾಗಿ ಅನುಷ್ಠಾನ ಮಾಡದೆ ರಾಜ್ಯದ ಜನತೆಯ ಕಿವಿ ಮೇಲೆ ಹೂ ಇಡಲಾಯಿತು. ಮನೆಯ ಪ್ರತಿಯೊಬ್ಬರಿಗೂ 10 ಕೆಜಿ ಅಕ್ಕಿ ಕೊಡುತ್ತೇವೆಂದು

ಕನ್ನಡಿಗರನ್ನು ನಂಬಿಸಿ ವಂಚಿಸಲಾಯಿತು.

ಇದರ ಜತೆಗೆ ಅಕ್ಕಿಯಲ್ಲೂ ಸಿದ್ದರಾಮಯ್ಯ ಅವರ ಭಂಡ ಸರ್ಕಾರದ ಒಣ ರಾಜಕೀಯ ಬೇರೆ. ಆದರೆ ಜನತೆ ಇದಕ್ಕೆ ಸೊಪ್ಪು ಹಾಕವುದಿಲ್ಲ ಎಂದು ತಿಳಿದ ಮೇಲೆ ಹಣ ತಿಂದು ಹೊಟ್ಟೆ ತುಂಬಿಸ್ಕೊಳಿ

ಅಂತ ಬರೇ ನೂರಾ ಎಪ್ಪತ್ತು ರೂಪಾಯಿ ಕೊಟ್ಟು ನಕ್ಕುಬಿಟ್ಟಿತು ಘನತವೆತ್ತ ಕಾಂಗ್ರೆಸ್ ಸರ್ಕಾರ. ಕ್ಷಮಿಸಲ್ಲಾ ಸ್ವಾಮಿ, ನಿಮ್ಮನ್ನ ಜನ ಕ್ಷಮಿಸಲ್ಲ. ರಾಜ್ಯದ ಮನೆಮನೆಗೂ 200 ಯೂನಿಟ್ (Unit)

ಫ್ರೀ ವಿದ್ಯುತ್ ಅಂತ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬರೆದ ಇಂಕೇ ಇನ್ನೂ ಮಾಸಿಲ್ಲ, ಆಗ್ಲೇ ಮೋಸ ಮಾಡ್ಬಿಟ್ಟಿತ್ತು. ಉಚಿತ 200 ಯೂನಿಟ್ ಕೊಡೋದಲ್ಲ, ಬದಲಾಗಿ ಕಾಂಗ್ರೆಸ್ ಸರ್ಕಾರ ತಂದಿರೋ

ಲೋಡ್ ಶೆಡ್ಡಿಂಗ್ ಅನ್ನೋ ಭೂತ ಇದ್ದಿದ್ದನ್ನೂ ಕಿತ್ತುಕೊಂಡಿದೆ ಎಂದು ಟೀಕಿಸಿದೆ.

ಮತ್ತೊಂದು ಟ್ವೀಟ್ನಲ್ಲಿ, ಲೋಡ್ ಶೆಡ್ಡಿಂಗ್ (Load Shedding) ಮೂಲಕ ಕರೆಂಟೇ ಇಲ್ಲದಂತೆ ಮಾಡಿದ್ದರೂ ಕೂಡ ವಿದ್ಯುತ್ ದರ ಮಾತ್ರ ಶಾಕ್ ಹೊಡಿಯುತ್ತಿದೆ. ಹೊಸ ಹೊಸಾ ಸ್ಲ್ಯಾಬುಗಳನ್ನ

ಮಾಡಿ ಒಂದೇ ಸಲಕ್ಕೆ ಸಾವಿರಾರು ರೂಪಾಯಿ ಜಡಿದದ್ದನ್ನ ಗಮನಿಸೋಕಾಗದಷ್ಟು ಕನ್ನಡಿಗರು ದಡ್ಡರಲ್ಲ. ಬದಲಾಗಿ ಇವನ್ನೆಲ್ಲಾ ನೆನಪಿಟ್ಟು ಕಾದು ಕೂರುವ ಗುಣದವರು ನಮ್ಮವರು. ಇದರ ನಡುವೆ

ಶಕ್ತಿ ಹೆಸರಲ್ಲಿ ಮಹಿಳೆಯರಿಗೆ ಉಚಿತ ಅಂತ ಹೇಳಲಾಯ್ತು, ಆದರೆ ಸಾರಿಗೆ ನಿಗಮಗಳು ಹಳ್ಳ ಹಿಡಿದವು. ಪಾಲಿಗೆ ಬರಬೇಕಾದ ದುಡ್ಡು ಈ ಸರಕಾರ ಮೂರು ತಿಂಗಳಾದರೂ ಇನ್ನೂ ನೀಡಿಲ್ಲ.

ಇದರಿಂದಾಗಿ ಸಾರಿಗೆ ನಿಗಮ ಸಂಕಷ್ಟದ ಕಡೆಗೆ ಸಾಗ್ತಾ ಇದೆ. ಸಾರಿಗೆ ನೌಕರರು ಸರಿಯಾದ ಸಮಯಕ್ಕೆ ಸಂಬಳ ಸಿಗದೆ ಡಿಪೋದಲ್ಲೇ ಕಾಲ ಕಳೆದರು. ದುರಸ್ತಿಗೂ ದುಡ್ಡಿಲ್ಲದೆ ರಸ್ತೆಗಿಳಿತಾ ಇರೋ

ಬಸ್ಸುಗಳು ಯಮನ ಕಿಂಕರರ ಸ್ವರೂಪಗಳಾಗುತ್ತಿವೆ. ಇದರ ನಡುವೆ ಎಲ್ಲಾ ಇಲಾಖೆಗಳಲ್ಲೂ ವರ್ಗಾವಣೆ ದಂಧೆ ಮಿತಿ ಮೀರಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟು ಮರಳಿನಂತ ಮಾಫಿಯಾಗಳು

ರಾಜ್ಯದಲ್ಲಿ ವಿಜೃಂಭಿಸುತ್ತಿವೆ.ಇಷ್ಟೆಲ್ಲಾ ಆದಮೇಲೂ ಗಾಯದ ಮೇಲೆ ಉಪ್ಪು ಸುರಿಯೋದು ಅಂತಾರಲ್ಲಾ, ಅದನ್ನೇ ಕಾಂಗ್ರೆಸ್ ಸರ್ಕಾರ ಮಾಡ್ತಿದೆ. ನಮ್ಮ ರೈತರ ಕಣ್ಣೆದುರೇ ಕಾವೇರಿಯನ್ನು

ತಮಿಳುನಾಡಿಗೆ (Tamilnadu) ಹರಿಬಿಟ್ಟು, ಸಂಕಟವನ್ನು 100 ಪಟ್ಟು ಹೆಚ್ಚು ಮಾಡಿದೆ ಎಂದು ವಾಗ್ದಾಳಿ ನಡೆಸಿದೆ.

Exit mobile version