• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

65 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
65 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ
0
SHARES
0
VIEWS
Share on FacebookShare on Twitter

ಬೆಂಗಳೂರು, ಅ. 28: ಕೊರೊನಾ ಭೀತಿಯ ನಡುವೆಯೂ ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ಈ ವರ್ಷ ಕರ್ನಾಟಕವು 65ನೇ ರಾಜ್ಯೋತ್ಸವ ಆಚರಿಸುತ್ತಿದ್ದು,

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 65 ಮಂದಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಪ್ರತಿವರ್ಷದಂತೆ ಈ ವರ್ಷ ರಾಜ್ಯೋತ್ಸವ ದಿನವಾದ ನ.1ರಂದು ಪ್ರಶಸ್ತಿ ಪ್ರದಾನ ಮಾಡುತ್ತಿಲ್ಲ. ನವೆಂಬರ್ 7ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಸರಳ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಚಿವ ಸಿ.ಟಿ ರವಿ ತಿಳಿಸಿದರು.

ಕ್ರೀಡಾ ಕ್ಷೇತ್ರ ಹೊರತುಪಡಿಸಿ ಉಳಿದ ಎಲ್ಲ ಕಡೆ 60 ವರ್ಷ ಮೇಲ್ಪಟ್ಟವರಿಗೆ ಪ್ರಶಸ್ತಿ ನೀಡಲಾಗಿದೆ ಹಾಗೂ ಸಾಮಾಜಿಕ ನ್ಯಾಯ ಒದಗಿಸಲಾಗಿದೆ. 26 ವಿವಿಧ ಕ್ಷೇತ್ರಗಳನ್ನು ಗುರುತಿಸಿಲಾಗಿದ್ದು, ಅನೇಕ ಶಿಫಾರಸ್ಸುಗಳು ಬಂದಿದ್ದರೂ ಅರ್ಹತೆ ಗಮನಿಸಿ ಪ್ರಶಸ್ತಿ ನೀಡಲಾಗಿದೆ. ಪ್ರತಿ ಜಿಲ್ಲೆಗೂ ಒಂದಾದರೂ ರಾಜ್ಯೋತ್ಸವ ಪ್ರಶಸ್ತಿ ಇರಬೇಕು ಎಂಬುದನ್ನು ಪರಿಗಣಿಸಲಾಗಿದೆ ಎಂದರು.

ಬಿಜೆಪಿ ಮತ್ತು ಆರ್ ಎಸ್ ಎಸ್ ಪೋಷಿತವಾದ ಯುವ ಬ್ರಿಗೇಡ್‌ ಕೂಡ ಪ್ರಶಸ್ತಿಗೆ ಆಯ್ಕೆಯಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಸಿ.ಟಿ. ರವಿ, ಸಂಘ ಸಂಸ್ಥೆ ಕ್ಷೇತ್ರದಲ್ಲಿ ಸಾಧನೆ ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಯಾವುದೇ ನೀತಿ ನಿಯಮಗಳನ್ನು ಮೀರಿಲ್ಲ. ಆರ್ ಎಸ್ ಎಸ್ ಪೋಷಿತ ಆಗಿರುವುದಕ್ಕೆ ಪ್ರಶಸ್ತಿ ಕೊಡಬಾರದು ಎಂದೇನೂ ಇಲ್ಲ. ಸಂಘದ ಸೇವೆಯನ್ನು ಪರಿಗಣಿಸಿ ಕೊಟ್ಟಿದ್ದೇವೆ. ಈ ವಿಚಾರವಾಗಿ ಯಾರಿಂದಲೂ ಒತ್ತಡ ಬಂದಿರುವುದಿಲ್ಲ ಎಂದು ತಿಳಿಸಿದ್ದಾರೆ.

ಸಾಹಿತ್ಯ ಕ್ಷೇತ್ರದ ಸಾಧನೆಗೆ, ಪ್ರೋ ಸಿಪಿ ಸಿದ್ಧಾಶ್ರಮ, ಧಾರವಾಡ, ವಿ. ಮುನಿ ವೆಂಕಟಪ್ಪ, ಕೋಲಾರ, ರಾಮಣ್ಣ ಬ್ಯಾಟಿ ( ವಿಶೇಷ ಚೇತನ), ಗದಗ, ವಲೇರಿಯನ್ ಡಿಸೋಜ (ವಲ್ಲಿವಗ್ಗ), ದಕ್ಷಿಣ ಕನ್ನಡ, ಡಿ ಎನ್ ಅಕ್ಕಿ, ಯಾದಗಿರಿ ಅವರಿಗೆ.

ಸಂಗೀತ ಕ್ಷೇತ್ರದ ಸಾಧನೆಗೆ ಹಂಬಯ್ಯ ನೂಲಿ, ರಾಯಚೂರು, ಅನಂತ ತೇರದಾಳ, ಬೆಳಗಾವಿ, ಬಿ.ವಿ ಶ್ರೀನಿವಾಸ್ , ಬೆಂಗಳೂರು ನಗರ, ಗಿರಿಜಾ ನಾರಾಯಣ , ಬೆಂಗಳೂರು ನಗರ, ಕೆ ಲಿಂಗಪ್ಪ ಶೇರಿಗಾರ ಕಟೀಲು, ದಕ್ಷಿಣ ಕನ್ನಡ ಅವರಿಗೆ ಲಭಿಸಿದೆ.

ನ್ಯಾಯಾಂಗ ಕ್ಷೇತ್ರದ ಸಾಧನೆಗೆ ಕೆ.ಎನ್. ಭಟ್, ಬೆಂಗಳೂರು, ಎಂಕೆ ವಿಜಯಕುಮಾರ್, ಉಡುಪಿ ಅವರು ಆಯ್ಕೆಗೊಂಡಿದ್ದಾರೆ.

ಮಾಧ್ಯಮ ಕ್ಷೇತ್ರದ ಸಾಧನೆಗೆ ಸಿ. ಮಹೇಶ್ವರನ್, ಮೈಸೂರು, ಟಿ. ವೆಂಕಟೇಶ್ (ಈ ಸಂಜೆ), ಬೆಂಗಳೂರು ಅವರು ಆಯ್ಕೆಗೊಂಡಿದ್ದಾರೆ.

ಯೋಗ ಕ್ಷೇತ್ರದಲ್ಲಿನ ಸಾಧನೆಗೆ ಡಾ. ಎ.ಎಸ್. ಚಂದ್ರಶೇಖರ್, ಮೈಸೂರು ಅವರು ಆಯಕ್ಎಗೊಂಡಿದ್ದು, ಶಿಕ್ಷಣ ಕ್ಷೇತ್ರದ ಸಾಧನೆಗೆ ಎಂ.ಎನ್. ಷಡಕ್ಷರಿ, ಚಿಕ್ಕಮಗಳೂರು, ಡಾ. ಆರ್ ರಾಮಕೃಷ್ಣ, ಚಾಮರಾಜನಗರ, ಡಾ. ಎಂಜಿ ಈಶ್ವರಪ್ಪ, ದಾವಣಗೆರೆ,  ಡಾ. ಪುಟ್ಟಸಿದ್ದಯ್ಯ, ಮೈಸೂರು, ಅಶೋಕ್ ಶೆಟ್ಟರ್, ಬೆಳಗಾವಿ, ಡಿಎಸ್ ದಂಡಿನ್, ಗದಗ ಅವರಿಗೆ ಲಭಿಸಲಿದೆ.

ಹೊರನಾಡು ಕನ್ನಡಿಗರಾದ ಕುಸುಮೋದರ ದೇರಣ್ಣ ಶೆಟ್ಟಿ ಕೇಲ್ತಡ್ಕ, ದಕ್ಷಿಣ ಕನ್ನಡ, ವಿದ್ಯಾ ಸಿಂಹಾಚಾರ್ಯ ಮಾಹುಲಿ, ಮಹಾರಾಷ್ಟ್ರ ಮಾಲುಂಡ, ಮುಂಬೈ ಇವರು ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಕ್ರೀಡಾ ಕ್ಷೇತ್ರದಲ್ಲಿ ಎಚ್‌ಬಿ ನಂಜೇಗೌಡ, ತುಮಕೂರು, ಉಷಾರಾಣಿ, ಬೆಂಗಳೂರು ಸಂಕೀರ್ಣ, ಡಾ.ಕೆವಿ ರಾಜು, ಕೋಲಾರ, ನಂ. ವೆಂಕೋಬರಾವ್, ಹಾಸನ, ಡಾ. ಕೆಎಸ್ ರಾಜಣ್ಣ (ವಿಕಲಚೇತನ), ಮಂಡ್ಯ,  ವಿ. ಲಕ್ಷ್ಮೀನಾರಾಯಣ (ನಿರ್ಮಾಣ್) ಮಂಡ್ಯ ಇವರಿಗೆ ಲಭಿಸಲಿದೆ.

ಯೂತ್‌ ಫಾರ್ ಸೇವಾ, ಬೆಂಗಳೂರು, ದೇವದಾಸಿ ಸ್ವಾವಲಂಬನ ಕೇಂದ್ರ, ಬಳ್ಳಾರಿ, ಬೆಟರ್ ಇಂಡಿಯಾ, ಬೆಂಗಳೂರು, ಯುವ ಬ್ರಿಗೇಡ್, ಬೆಂಗಳೂರು ಗ್ರಾಮಾಂತರ, ಧರ್ಮೋತ್ಥಾನ ಟ್ರಸ್ಟ್‌, ಧರ್ಮಸ್ಥಳ, ದಕ್ಷಿಣ ಕನ್ನಡ ಈ ಸಂಘ ಸಂಸ್ಥೆಗಳಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಲಿದೆ.

ಸಮಾಜಸೇವಾ ಕ್ಷೇತ್ರದ ಸಾಧನೆಗೆ ಎನ್ ಎಸ್ (ಕುಂದರಗಿ) ಹೆಗಡೆ, ಉತ್ತರ ಕನ್ನಡ, ಪ್ರೇಮಾ ಕೋಮಂಡರಾಮ ಶ್ರೇಷ್ಠಿ, ಚಿಕ್ಕಮಗಳೂರು, ಮಣೆಗಾರ್ ಮೀರಾನ್ ಸಾಹೇಬ್, ಉಡುಪಿ, ಮೋಹಿನಿ ಸಿದ್ದೇಗೌಡ, ಚಿಕ್ಕಮಗಳೂರು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಲಿವೆ.

ವೈದ್ಯಕೀಯ ಕ್ಷೇತ್ರದ ಸಾಧನೆಗೆ ಡಾ. ಅಶೋಕ್ ಸೊನ್ನದ್, ಬಾಗಲಕೋಟೆ, ಡಾ. ಬಿಎಸ್ ಶ್ರೀನಾಥ್, ಶಿವಮೊಗ್ಗ, ಡಾ. ಎ. ನಾಗರತ್ನ, ಬಳ್ಳಾರಿ, ಡಾ. ವೆಂಕಟಪ್ಪ ರಾಮನಗರ ಇವರಿಗೆ ಲಭಿಸಲಿದೆ.

ಕೃಷಿ ಕ್ಷೇತ್ರದ ಸಾಧನೆಗೆ ಸುರತ್ ಸಿಂಗ್ ಕನೂರ್ ಸಿಂಗ್ ರಜಪೂತ್, ಬೀದರ್, ಎಸ್‌ವಿ ಸುಮಂಗಲಮ್ಮ ವೀರಭದ್ರಪ್ಪ, ಚಿತ್ರದುರ್ಗ, ಡಾ. ಸಿದ್ರಾಮಪ್ಪ ಬಸವಂತರಾವ್ ಪಾಟೀಲ್, ಕಲಬುರಗಿ ಇವರಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.

ಪರಿಸರಕ್ಕೆ ಸಂಬಂಧಿಸಿದ ಸಾಧನೆಗೆ ಅಮರ ನಾರಾಯಣ, ಚಿಕ್ಕಬಳ್ಳಾಪುರ, ಎನ್‌ಡಿ ಪಾಟೀಲ್, ವಿಜಯಪುರ ಇವರಿಗೆ, ಹಾಗೂ ವಿಜ್ಞಾನ/ತಂತ್ರಜ್ಞಾನದ ಸಾಧನೆಗೆ ಪ್ರೊ. ಉಡುಪಿ ಶ್ರೀನಿವಾಸ, ಉಡುಪಿ, ಡಾ. ಚಿಂದಿ ವಾಸುದೇವಪ್ಪ, ಶಿವಮೊಗ್ಗ ಇವರಿಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಲಭಿಸಲಿದೆ.

ಸಹಕಾರ ಸಂಬಂಧಿತ ಸಾಧನೆಗೆ ಡಾ. ಸಿಎನ್ ಮಂಜೇಗೌಡ, ಬೆಂಗಳೂರು, ಬಯಲಾಟದ ಸಾಧನೆಗೆ ಕೆಂಪವ್ವ ಹರಿಜನ, ಬೆಳಗಾವಿ, ಚೆನ್ನಬಸಪ್ಪ ಬೆಂಡಿಗೇರಿ, ಹಾವೇರಿ, ಯಕ್ಷಗಾನದ ಸಾಧನೆಗೆ ಬಂಗಾರ್ ಆಚಾರಿ, ಚಾಮರಾಜನಗರ, ಎಂ.ಕೆ ರಮೇಶ್ ಆಚಾರ್ಯ, ಶಿವಮೊಗ್ಗ, ರಂಗಭೂಮಿಯ ಸಾಧನೆಗೆ ಅನಸೂಯಮ್ಮ, ಹಾಸನ, ಎಚ್. ಷಡಾಕ್ಷರಪ್ಪ, ದಾವಣಗೆರೆ, ತಿಪ್ಪೇಸ್ವಾಮಿ, ಚಿತ್ರದುರ್ಗ ಇವರಿಗೆ ಲಭಿಸಲಿದೆ.

ಚಲನಚಿತ್ರ ಬಿಎಸ್ ಬಸವರಾಜ್, ತುಮಕೂರು, ಎ.ಟಿ. ರಘು, ಕೊಡಗು ಇವರಿಗೆ, ಚಿತ್ರಕಲಾ ಕ್ಷೇತ್ರದ ಸಾದನೆಗೆ ಎಂಜೆ ವಾಚೇದ್ ಮಠ, ಧಾರವಾಡ, ಜಾನಪದ ಗುರುರಾಜ ಹೊಸಕೋಟೆ, ಬಾಗಲಕೋಟೆ, ಡಾ. ಹಂಪನಹಳ್ಳಿ ತಿಮ್ಮೇಗೌಡ, ಹಾಸನ, ಶಿಲ್ಪಕಲಾ ಕ್ಷೇತ್ರದ ಸಾಧನೆಗೆ ಎನ್‌ಎಸ್ ಜನಾರ್ದನ ಮೂರ್ತಿ, ಮೈಸೂರು ಇವರಿಗೆ.

ನೃತ್ಯ ಕ್ಷೇತ್ರದ ಸಾಧನೆಗೆ ನಾಟ್ಯ ವಿದುಷಿ ಜ್ಯೋತಿ ಪಟ್ಟಾಭಿರಾಮ್ ಇವರಿಗೆ, ಜಾನಪದ/ತೊಗಲು ಗೊಂಬೆಯಾಟದ ಸಾದನೆಗೆ ಕೇಶಪ್ಪ ಶಿಳ್ಳೆಕ್ಯಾತರ, ಕೊಪ್ಪಳ ಇವರಿಗೆ ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಲಭಿಸಲಿದೆ ಎಂದು ಪ್ರಕಟಣೆ ತಿಳಿಸಿದೆ.

Related News

ಖಲಿಸ್ತಾನಿಗಳಿಗೆ ಶಾಕ್ ; ಹಲವಾರು ರಾಜ್ಯಗಳ 50ಕ್ಕೂ ಹೆಚ್ಚು ಸ್ಥಳಗಳ ಮೇಲೆ NIA ದಾಳಿ..!
ದೇಶ-ವಿದೇಶ

ಖಲಿಸ್ತಾನಿಗಳಿಗೆ ಶಾಕ್ ; ಹಲವಾರು ರಾಜ್ಯಗಳ 50ಕ್ಕೂ ಹೆಚ್ಚು ಸ್ಥಳಗಳ ಮೇಲೆ NIA ದಾಳಿ..!

September 27, 2023
ನಿಂಬೆ ಹಣ್ಣನ್ನು ಈ ಆಹಾರಗಳ ಜೊತೆ ಅಪ್ಪಿತಪ್ಪಿಯೂ ಬಳಸಬೇಡಿ..!
ಆರೋಗ್ಯ

ನಿಂಬೆ ಹಣ್ಣನ್ನು ಈ ಆಹಾರಗಳ ಜೊತೆ ಅಪ್ಪಿತಪ್ಪಿಯೂ ಬಳಸಬೇಡಿ..!

September 26, 2023
ಬಿಗ್‌ ಶಾಕ್: 18ಕ್ಕೂ ಹೆಚ್ಚು ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳಲ್ಲಿ ವಾಟ್ಸಾಪ್‌ ಸ್ಥಗಿತ ವಿವರ ಇಲ್ಲಿದೆ.
ಡಿಜಿಟಲ್ ಜ್ಞಾನ

ಬಿಗ್‌ ಶಾಕ್: 18ಕ್ಕೂ ಹೆಚ್ಚು ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳಲ್ಲಿ ವಾಟ್ಸಾಪ್‌ ಸ್ಥಗಿತ ವಿವರ ಇಲ್ಲಿದೆ.

September 26, 2023
ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಲು 3 ದಿನಗಳ ಗಡುವು, ಮನವಿ ಸ್ವೀಕರಿಸಿದ ರಾಮಲಿಂಗಾ ರೆಡ್ಡಿ
ದೇಶ-ವಿದೇಶ

ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಲು 3 ದಿನಗಳ ಗಡುವು, ಮನವಿ ಸ್ವೀಕರಿಸಿದ ರಾಮಲಿಂಗಾ ರೆಡ್ಡಿ

September 26, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.