ಬೆಂಗಳೂರು, ನ.10: ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಅರಣ್ಯ ಸಂರಕ್ಷಣೆ, ಅಕ್ರಮ ಕಡಿತಲೆ, ವನ್ಯಜೀವಿ ಸಂರಕ್ಷಣೆ, ಅರಣ್ಯ ಪ್ರದೇಶವನ್ನು ಒತ್ತುವರಿದಾರರಿಂದ ತೆರವುಗೊಳಿಸುವುದು ಸೇರಿದಂತೆ ಇತರೆ ಕೆಲಸ ಕಾರ್ಯಗಳ ಮೂಲಕ ಸಾಧನೆ ಮಾಡಿದ ಅಧಿಕಾರಿ-ಸಿಬ್ಬಂದಿಗಳನ್ನು ಆಯ್ಕೆ ಮಾಡುವಂತೆ 2017ರಲ್ಲಿ ಆದೇಶವನ್ನು ಜಾರಿಗೆ ತರಲಾಗಿತ್ತು.
ಅದರಂತೆ ಪ್ರತಿ ವರ್ಷ 25 ಅಧಿಕಾರಿ/ಸಿಬ್ಬಂದಿಗಳನ್ನೊಳಗೊಂಡಂತೆ 2017,2018,2019ರ ಸಾಲಿನಲ್ಲಿ 75 ಅಧಿಕಾರಿ ಸಿಬ್ಬಂದಿಗಳನ್ನು ಆಯ್ಕೆ ಮಾಡಲಾಗಿದ್ದು, ಅವರಿಗೆ ನವೆಂಬರ್ 23 ರಂದು ವಿಧಾನಸೌಧದ ಬಾಂಕ್ವೆಟ್ ಹಾಲ್ನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.