Bengaluru: ಇಂದು(ಜ.26) ದೇಶದೆಲ್ಲೆಡೆ 75ನೇ ಗಣರಾಜ್ಯೋತ್ಸವ (Republic Day) ಆಚರಿಸುತ್ತಿದ್ದು, ಬೆಂಗಳೂರಿನ (75th Republic Day Celebration) ಮಾಣಿಕ್ ಷಾ ಪರೇಡ್ ಮೈದಾನದಲ್ಲಿ
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಧ್ವಜಾರೋಹಣ ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ರಾಜ್ಯದ ಜನರನ್ನು ಉದ್ದೇಶಿಸಿ ಮಾತನಾಡಿದ ರಾಜ್ಯಪಾಲ ಗೆಹ್ಲೋಟ್, ನಾಡಿನ ಸಮಸ್ತ
ಜನತೆಗೆ 75ನೇ ಗಣರಾಜ್ಯೋತ್ಸವದ (75th Republic Day Celebration) ಶುಭಾಶಯಗಳನ್ನು ಕೋರಿದರು.
ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ (Manik Shah Pared Ground) ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಧ್ವಜಾರೋಹಣ
ನೆರವೇರಿಸಿದ ಬಳಿಕ ಅವರು ಪೊಲೀಸ್ ತುಕಡಿಗಳಿಂದ ಗೌರವ ವಂದನೆ ಸ್ವೀಕಾರ ಮಾಡಿದರು. ಇಂದು ಭಾರತಕ್ಕೆ ಐತಿಹಾಸಿಕ ದಿನವಾಗಿದೆ. ಸಂವಿಧಾನವು ಭಾರತದ ನಾಗರೀಕರಿಗೆ ನ್ಯಾಯ,
ಸ್ವಾತಂತ್ರ್ಯ, ಹಾಗೂ ಸಮಾನತೆಯ ಅವಕಾಶವನ್ನ ಒದಗಿಸಿದೆ. ಸಮಗ್ರತೆ, ಏಕತೆಯನ್ನ ಕಾಪಾಡುವ ಜೊತೆಗೆ ಸ್ವಾಭಿಮಾನದ ಜೀವನ ಒದಗಿಸುವ ಧ್ಯೇಯವನ್ನ ಹೊಂದಿದೆ ಎಂದರು.
ಸರ್ಕಾರವು 5 ಗ್ಯಾರಂಟಿಗಳನ್ನ (Guarantee) ಜಾರಿಗೊಳಿಸುವ ಭರವಸೆ ನೀಡಿತ್ತು. ಅದರಂತೆ ಎಲ್ಲ ಐದು ಗ್ಯಾರಂಟಿಗಳನ್ನ ಅನುಷ್ಠಾನಗೊಳಿಸಲಾಗಿದ್ದು, ಶಕ್ತಿ ಮತ್ತು ಗೃಹಲಕ್ಷ್ಮೀ ಯೋಜನೆಯಿಂದ
ಮಹಿಳೆಯರಿಗೆ ಅನುಕೂಲವಾಗಿದೆ. ಮಾಸಿಕ ರೂ,2,000 ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ ಎಂದು ಹೇಳಿದರು. ರಾಜ್ಯಪಾಲ ಗೆಹ್ಲೋಟ್ (Gehlot) ಭಾಷಣದಲ್ಲಿ ಸರ್ಕಾರದ ಸಾಧನೆ
ಪ್ರಸ್ತಾಪ ವಚನ ಭಂಗಕ್ಕಿಂತ ದೊಡ್ಡ ದೇಶದ್ರೋಹ ಮತ್ತೊಂದಿಲ್ಲ ಎಂದು ನಾನು ಬಲವಾಗಿ ನಂಬಿದವನು. ಇದು ನಮ್ಮ ಪಕ್ಷದ ಬದ್ಧತೆ ಕೂಡಾ ಆಗಿದೆ.
ಭರವಸೆಗಳನ್ನು ನೀಡಿ ಚುನಾವಣೆಯಲ್ಲಿ ಗೆದ್ದು ಬಂದಿರುವ ನಮಗೆ ಅದನ್ನು ಉಳಿಸಿಕೊಳ್ಳುವ ಜವಾಬ್ದಾರಿಯೂ ಇದೆ. ಇದನ್ನು ನಾವು ಮರೆತಿಲ್ಲ. ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಗ್ಯಾರಂಟಿ
ಯೋಜನೆಗಳ ಭರವಸೆಯ ಈಡೇರಿಕೆಗೆ ಮೊದಲ ಸಚಿವ ಸಂಪುಟದಲ್ಲಿಯೇ ತಾತ್ವಿಕ ಅಂಗೀಕಾರ ಪಡೆದು ಜಾರಿ ಪ್ರಕ್ರಿಯೆಗೆ ಚಾಲನೆ ನೀಡಿದ್ದೆವು. ಇದರ ಫಲವಾಗಿ ಇಂದು ಐದು ಗ್ಯಾರಂಟಿ ಯೋಜನೆಗಳು
ಅನುಷ್ಠಾನಗೊಂಡಿವೆ ಎನ್ನುವುದನ್ನು ನಿಮ್ಮ ಮುಂದೆ ಹೇಳಲು ಹೆಮ್ಮೆ ಪಡುತ್ತೇನೆ.
ದೇಶದ ಯಾವುದೇ ರಾಜ್ಯ ಸರ್ಕಾರ ಕೂಡಾ ಇಂತಹದ್ದೊಂದು ಸಾಧನೆ ಮಾಡಿಲ್ಲ ಎನ್ನುವುದನ್ನು ವಿಶ್ವಾಸಪೂರ್ವಕವಾಗಿ ಹೇಳಬಲ್ಲೆ. ಇದು ರಾಜ್ಯದ ಜನತೆ ನಮ್ಮ ಸರ್ಕಾರಕ್ಕೆ ಕೊಟ್ಟಿರುವ ಶಕ್ತಿ ಎನ್ನುವುದನ್ನು
ನಾವು ಮರೆತಿಲ್ಲ. ಗ್ಯಾರಂಟಿ ಯೋಜನೆಗಳ ಜೊತೆಯಲ್ಲಿ ನಮ್ಮ ಸರ್ಕಾರದ ಅನ್ನಭಾಗ್ಯ, ಕ್ಷೀರಭಾಗ್ಯ, ಕ್ಷೀರಧಾರೆ, ಕೃಷಿಭಾಗ್ಯ, ಪಶುಭಗ್ಯ, ಋಣಮುಕ್ತಭಾಗ್ಯ, ವಿದ್ಯಾಸಿರಿ, ಆರೋಗ್ಯಭಾಗ್ಯ, ಜಲಭಾಗ್ಯ
ಕಾರ್ಯಕ್ರಮಗಳು ಕೂಡಾ ಯಶಸ್ವಿಯಾಗಿ ಜಾರಿಯಲ್ಲಿದೆ.
ನಮ್ಮ ನಾಡಿನ ಸಾಮಾಜಿಕ ನ್ಯಾಯದ ಮೊದಲ ಹರಿಕಾರ ಬಸವಣ್ಣನವರು. ಸಂವಿಧಾನದ ಆಶಯಗಳನ್ನು ಪ್ರತಿಪಾದಿಸುವ ಬಸವಮಾರ್ಗದಲ್ಲಿ ನಡೆಯುವವನು ನಾನು. ಈ ಬದ್ದತೆಯಂದಾಗಿಯೇ
ನಮ್ಮ ಸರ್ಕಾರ ಬಸವಣ್ಣನವರನ್ನು ಕರ್ನಾಟಕದ (Karnataka) ಸಾಂಸ್ಕಂತಿಕ ನಾಯಕ ಎಂದು ಘೋಷಿಸಿದೆ ಎಂದು ಗೆಹ್ಲೋಟ್ ಭಾಷಣದಲ್ಲಿ ತಿಳಿಸಿದರು.
- ಭವ್ಯಶ್ರೀ ಆರ್ ಜೆ