8 ಒಪ್ಪಂದಗಳಿಗೆ ಸಹಿ ಹಾಕಿದ ರಾಜ್ಯ ಸರ್ಕಾರ

ಬೆಂಗಳೂರು, ನ. 20: ದೇಶದಲ್ಲಿ ಸೈಬರ್ ಭದ್ರತೆ, ದತ್ತಾಂಶ ವಿಜ್ಞಾನ, ಸೆಮಿಕಂಡಕ್ಟರ್ ಗಳ ಬಗ್ಗೆ ಅಧ್ಯಯನ, ಕೃತಕ ಬುದ್ಧಿಮತ್ತೆ ಸೇರಿ ಸುಮಾರು 8 ವಿಷಯಕ್ಕೆ ಸಂಬಂಧಿಸಿದಂತೆ ವಿವಿಧ ದೇಶಗಳೊಂದಿಗೆ ಒಡಂಬಡಿಕೆ ಮಾಡಿದ್ದೇವೆ ಎಂದು ಐಟಿ-ಬಿಟಿ ಸಚಿವರು ಆದ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ಅಶ್ವಥ ನಾರಾಯಣ ಅವರು ಟೆಕ್ ಸೆಮ್ಮಿಟ್ ನಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಒಂದೇ ದಿನ 8 ಒಡಂಬಡಿಕೆಗೆ ಸಹಿ ಹಾಕಿದ್ದೇವೆ. ಯಾವ ದೇಶದೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇವೋ ಆ ದೇಶದ ಸಂಬಂಧಪಟ್ಟ ಸಂಸ್ಥೆ ಮತ್ತು‌ನಮ್ಮ ಸಂಸ್ಥೆಗಳ ಸಮನ್ವಯದೊಂದಿಗೆ ಒಪ್ಪಂದ ನಡೆಯಲಿದೆ ಎಂದು ಹೇಳಿದರು.

ಡೇಟಾ ಸೈನ್ಸ್ ಮತ್ತು ಕೃತಕ ಬುದ್ಧಿಮತ್ತೆಗೆ ಫಿನ್ ಲ್ಯಾಂಡ್ ಜತೆ ಒಪ್ಪಂದ ಮಾಡಿಕೊಂಡಿದ್ದೇವೆ. ಸ್ಕಿಲ್ ಅಪ್ರೇಡೇಷನ್ ಆಗುತ್ತಿರಬೇಕು. ಸದ್ಯದಲ್ಲೇ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಆರ್ಟಿಫಿಶಿಯಲ್ ಇಂಟಲಿಜೆನ್ಸಿ ಕೇಂದ್ರ ಆರಂಭ ಮಾಡಲಿದ್ದೇವೆ. ಕೃಷಿ, ಸಾರಿಗೆ, ಸೇವಾ ವಿಭಾಗ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಹೆಚ್ಚಿನ ಅನುಕೂಲ ಆಗಲಿದೆ ಎಂದು ಹಜೊತೆ ಇಂಟರ್ ನೆಟ್ ಆಫ್ ಥಿಂಗ್ಸ್ (ಐಒಟಿ) ಗಾಗಿ ಒಪ್ಪಂದ ಮಾಡುತ್ತಿದ್ದೇವೆ. ಸ್ಮಾರ್ಟ್ ಸಿಟಿ, ಹೆಲ್ತ್, ಉತ್ಪಾದನಾ ವಲಯ ಹಾಗೂ ಕೃಷಿಗೆ ಸಹಕಾರಿ ಆಗಲಿದೆ. ಸೆಮಿಕಂಡಕ್ಟರ್ ಕುರಿತು ಜರ್ಮನಿ ಮತ್ತು ಯುನೈಟೆಡ್ ಕಿಂಗ್ ಡಮ್ ಜತೆ ಒಪ್ಪಂದ ಮಾಡಿಕೊಂಡಿದ್ದೇವೆ ಎಂದು ಹೇಳಿದರು.

Exit mobile version