ಅಗರ್ತಲಾ, ಆ. 07: ತ್ರಿಪುರ ಮುಖ್ಯಮಂತ್ರಿ ವಿಪ್ಲವ್ ಕುಮಾರ್ ದೇವ್ ಅವರನ್ನು ಕೊಲೆ ಮಾಡಲು ಯತ್ನಿಸಿದ ಆರೋಪದ ಮೇಲೆ ಮೂವರನ್ನು ಬಂಧಿಸಲಾಗಿದೆ.
ಮುಖ್ಯಮಂತ್ರಿ ಅವರು ತಮ್ಮ ಅಧಿಕೃತ ನಿವಾಸದ ಸಮೀಪ ಗುರುವಾರ ಸಂಜೆ ವಾಯುವಿಹಾರ ಮಾಡುತ್ತಿದ್ದಾಗ, ಈ ಮೂವರು ಭದ್ರತೆಯನ್ನು ಭೇದಿಸಿ, ಮುಖ್ಯಮಂತ್ರಿ ಅವರ ಮೇಲೆ ಕಾರು ಹತ್ತಿಸಲು ಪ್ರಯತ್ನಿಸಿದರು. ಈ ವೇಳೆ ಮುಖ್ಯಮಂತ್ರಿಯವರು ಪಕ್ಕಕ್ಕೆ ಜಿಗಿದರು. ಈ ಘಟನೆಯಲ್ಲಿ ಭದ್ರತಾ ಸಿಬ್ಬಂದಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುಖ್ಯಮಂತ್ರಿ ಭದ್ರತೆಗಾಗಿ ನಿಯೋಜಿಸಿದ್ದ ಸಿಬ್ಬಂದಿಯು ಈ ಕಾರನ್ನು ಅಡ್ಡಗಟ್ಟಲು ಪ್ರಯತ್ನಿಸಿದರೂ, ಪ್ರಯೋಜನವಾಗಿಲ್ಲ. ಈ ವೇಳೆ ಆರೋಪಿಗಳು ಪರಾರಿಯಾದರು. ನಂತರ ಈ ಮೂವರನ್ನು ಗುರುವಾರ ತಡರಾತ್ರಿ ಕೆರ್ಚೌಮಹಾನಿಯಲ್ಲಿ ಪೊಲೀಸರು ಬಂಧಿಸಿದ್ದು, ವಾಹನವನ್ನು ವಶಪಡಿಸಿಕೊಂಡಿದ್ದಾರೆ.