ರಾಯಚೂರು ಅ 30 : ಸ್ಯಾಂಡಲ್ವುಡ್ ನಟ ಪುನೀತ್ ರಾಜ್ಕುಮಾರ್ ನಿಧನದ ಸುದ್ದಿ ಕೇಳಿ ಮನನೊಂದ ಅಭಿಮಾನಿಗಳಿಬ್ಬರು ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ
ಪುನೀತ್ ಸಾವಿನಿಂದ ನೊಂದು ಇಬ್ಬರು ಆತ್ಮಹತ್ಯೆಗೆ ಯತ್ನಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ನಡೆದಿದ್ದು, ಹಾರಪೂರ ಗ್ರಾಮದ ಬಸವನಗೌಡ (28), ಯಪಲಪರ್ವಿ ಗ್ರಾಮದ ಮಹ್ಮದ್ ರಫಿ (28) ಆತ್ಮಹತ್ಯೆಗೆ ಯತ್ನಿಸಿದವರು.
ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದ ಈ ಇಬ್ಬರು ಯುವಕರನ್ನು ಸಿಂಧನೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದೀಗ ಇಬ್ಬರು ಚೇತರಿಸಿಕೊಳ್ಳುತ್ತಿದ್ದು, ಪೊಲೀಸರು ಸಹ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇವರಿಬ್ಬರು ಪವರ್ ಸ್ಟಾರ್ ಅವರ ಅಪ್ಪಟ ಅಭಿಮಾನಿಗಳಾಗಿದ್ದು, ನಿನ್ನೆ ಪುನೀತ್ ಅವರ ನಿಧನದ ಸುದ್ದಿಕೇಳಿ ಮಾನಸಿಕ ಆಘಾತಕ್ಕೊಳಗಾಗಿದ್ದಾರೆ. ಎಂದು ತಿಳಿದು ಬಂದಿದೆ.