• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಗುಡ್ ನ್ಯೂಸ್

`ಆನ’ ಅವತಾರದಲ್ಲಿ ಅದಿತಿ ಪ್ರಭುದೇವ

Sharadhi by Sharadhi
in ಗುಡ್ ನ್ಯೂಸ್, ಮನರಂಜನೆ
`ಆನ’ ಅವತಾರದಲ್ಲಿ ಅದಿತಿ ಪ್ರಭುದೇವ
0
SHARES
0
VIEWS
Share on FacebookShare on Twitter

ಯುಕೆ ಪ್ರೊಡಕ್ಷನ್ಸ್ ಲಾಂಛನದಲ್ಲಿ ಪೂಜಾ ವಸಂತ್‌ಕುಮಾರ್ ನಿರ್ಮಾಣ ಮಾಡಿರುವ, ಮನೋಜ್ ಪಿ ನಡಲುಮನೆ ನಿರ್ದೇಶನದ ‘ಆನ’ ಚಿತ್ರದ ಶೀರ್ಷಿಕೆ ಅನಾವರಣ ಕಾರ್ಯಕ್ರಮ ಮಲ್ಲೇಶ್ವರದ ರೇಣುಕಾಂಬ ಸ್ಟುಡಿಯೋದಲ್ಲಿ ನೆರವೇರಿತು.
ಈಗಾಗಲೇ ಭಾರತದ ಮೊದಲ ಮಹಿಳಾ ಸೂಪರ್ ಹೀರೋ ಪರಿಕಲ್ಪನೆಯ ಸಿನಿಮಾ ಎಂದು ಸುದ್ದಿಯಾಗಿರುವ ಈ ಚಿತ್ರದ ಶೀರ್ಷಿಕೆ ಕೂಡ ಅಷ್ಟೇ ವಿಶೇಷವಾಗಿಯೇ ಇದೆ.
ಚಿತ್ರದಲ್ಲಿ ನಾಯಕಿಯ ಹೆಸರು ಅನರ್ಘ್ಯ'. ಅದೇ ಕಾರಣಕ್ಕೆ ಚಿತ್ರಕ್ಕೆ ಆನ ಎಂದು ಹೆಸರಿಡಲಾಗಿದೆ ಎಂದು ನಾಯಕಿಯಾಗಿ ನಟಿಸುತ್ತಿರುವ ಅದಿತಿ ಪ್ರಭುದೇವಾ ಹೇಳಿದ್ದಾರೆ. ಇದು ನಾನು ಇಷ್ಟಪಟ್ಟು ಮತ್ತು ಕಷ್ಟಪಟ್ಟು ಮಾಡುತ್ತಿರುವ ಸಿನಿಮಾ. ಇಂಥ ಪಾತ್ರ ಸಿಕ್ಕಿದ್ದು ನನ್ನ ಅದೃಷ್ಟ. ಕಥೆ ಕೇಳಿ ಒಂದೇ ಸಲಕ್ಕೆ ನಟಿಸಲು ಒಪ್ಪಿಕೊಂಡಿದ್ದೇನೆ. ಚಿತ್ರದ ಬಹುಪಾಲು ಶೂಟಿಂಗ್ ರಾತ್ರಿ ಹೊತ್ತಿನಲ್ಲಿಯೇ ನಡೆದಿದೆ. ಇನ್ನು ಕೆಲ ಭಾಗದ ಚಿತ್ರೀಕರಣ ಬಾಕಿ ಇದೆ. ನನ್ನ ಸಿನಿಮಾ ಕರಿಯರ್‌ನಲ್ಲಿ ಇಲ್ಲಿಯವರೆಗೂ ನಾನು ಮಾಡದ ವಿಶೇಷ ಪಾತ್ರ ಮಾಡುವ ಅವಕಾಶ ಸಿಕ್ಕಿರುವುದಕ್ಕೆ ಸಹಜವಾಗಿ ನಿರ್ಮಾಪಕರಿಗೆ ಕತಜ್ಞತೆ ಹೇಳಲೇಬೇಕು’ ಎಂದಿದ್ದಾರೆ. ಅದೇ ರೀತಿ ನಿರ್ದೇಶಕ ಮನೋಜ್‌ಗೆ ಇದು ಚೊಚ್ಚಲ ನಿರ್ದೇಶನದ ಸಿನಿಮಾ. ಈ ಹಿಂದೆ ಕಿರುಚಿತ್ರ ಮತ್ತು ಟೆಲಿ ಫಿಲಂಸ್‌ಗಳನ್ನು ನಿರ್ದೇಶನ ಮಾಡಿದ ಅನುಭವದ ಆಧಾರದ ಮೇಲೆಯೇ ಪೂರ್ಣ ಪ್ರಮಾಣದ ಆನ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದಾರೆ. ‘ಲಾಕ್‌ಡೌನ್ ಸಮಯದಲ್ಲಿ ಹೊಳೆದ ಕಥೆ ಇದು. ಸದ್ಯ ಇಡೀ ಭಾರತದಲ್ಲಿ ಲೇಡಿ ಸೂಪರ್ ಹೀರೋ ಪರಿಕಲ್ಪನೆಯಲ್ಲಿ ಯಾವುದೇ ಸಿನಿಮಾ ಬಂದಿಲ್ಲ. ಅದನ್ನೇ ಗಮನದಲ್ಲಿಟ್ಟುಕೊಂಡು ಕಥೆ ಸಿದ್ಧಪಡಿಸಿಕೊಂಡು, ಆರಂಭಿಸಿದ್ದೆ. ಇನ್ನೆರಡು ದಿನದ ಕ್ಲೈಮ್ಯಾಕ್ಸ್ ಶೂಟಿಂಗ್ ಬಾಕಿ ಇದೆ. ಚಿತ್ರದ ಕೊನೆಯ 20 ನಿಮಿಷಗಳು ನಿಮ್ಮನ್ನು ಫ್ಯಾಂಟಸಿ ಲೋಕಕ್ಕೆ ಕರೆದೊಯ್ಯಲಿದೆ. ಹಾರರ್ ಶೈಲಿಯ ಅಂಶಗಳೂ ಈ ಸಿನಿಮಾದಲ್ಲಿವೆ. ತಾಂತ್ರಿಕವಾಗಿ ಇಡೀ ಸಿನಿಮಾ ಶ್ರೀಮಂತವಾಗಿ ಮೂಡಿಬಂದಿದೆ. ಇನ್ನೊಂದು ವಿಶೇಷ ಏನೆಂದರೆ, ಈ ಸಿನಿಮಾ ಮುಂದಿನ ದಿನಗಳಲ್ಲಿ ಚಾಪ್ಟರ್‌ಗಳಾಗಿಯೂ ಸಿದ್ಧವಾಗಲಿದೆ’ ಎಂದು ಮಾಹಿತಿ ನೀಡಿದರು ಮನೋಜ್. ಸಿನಿಮಾದಲ್ಲಿ ಅದಿತಿ ಜತೆಗೆ ನಾಲ್ಕು ಪ್ರಮುಖ ಪಾತ್ರಗಳು ಚಿತ್ರದಲ್ಲಿವೆ. ಸಮರ್ಥ, ವಿಕಾಸ್ ಉತ್ತಯ್ಯ, ವರುಣ್ ಅಮರಾವತಿ ಮತ್ತು ಕಾರ್ತಿಕ್ ನಾಗರಾಜ್ ಆ ಪಾತ್ರಗಳನ್ನು ನಿರ್ವಹಿಸಲಿದ್ದಾರೆ.ಚೂರಿಕಟ್ಟೆ’ ಸಿನಿಮಾದಲ್ಲಿ ನಟಿಸಿದ್ದ ಪ್ರೇರಣಾ, ಆನ ಚಿತ್ರದಲ್ಲಿಯೂ ನಟಿಸಿದ್ದಾರೆ.
ಇನ್ನು ತಾಂತ್ರಿಕ ವರ್ಗ ಮತ್ತು ನಿರ್ದೇಶನದ ತಂಡವೇ ಚಿತ್ರದ ಪ್ರಮುಖ ಆಸ್ತಿ ಎಂದೇ ತಾಂತ್ರಿಕ ವರ್ಗವನ್ನು ಪರಿಚಯ ಮಾಡಿಕೊಟ್ಟರು ನಿರ್ದೇಶಕ ಮನೋಜ್. ಉದಯ್ ಲೀಲಾ ಛಾಯಾಗ್ರಹಣ, ರಿತ್ವಿಕ್ ಮುರಳೀಧರ್ ಸಂಗೀತ ಸಂಯೋಜನೆ, ಸಂಕಲನಕಾರ ವಿಜೇತ ಚಂದ್ರ ತಾಂತ್ರಿಕ ವರ್ಗದ ಹೊಣೆ ಹೊತ್ತಿದ್ದಾರೆ. ಶಿವಮಂಜು ಚಿತ್ರತಂಡದ ಬೆನ್ನುಲುಬಾಗಿದ್ದಾರೆ. ಚಿತ್ರಮಂದಿರಗಳು ಹಿಂದಿನ ಸ್ಥಿತಿಗೆ ಮರಳಿದ ಬಳಿಕ ಬಿಡುಗಡೆಗೊಳಿಸುವ ಯೋಚನೆ ಚಿತ್ರತಂಡದ್ದಾಗಿದೆ.

Related News

ಅರ್ಜುನ್​ ಸರ್ಜಾ ವಿರುದ್ಧ ಮೀ ಟೂ ಕೇಸ್‌ಗೆ ಬಿಗ್ ಟ್ವಿಸ್ಟ್ : ಶ್ರುತಿ ಹರಿಹರನ್‌ಗೆ ನೋಟಿಸ್​ ಜಾರಿ ಮಾಡಿದ ಖಾಕಿ
ಮನರಂಜನೆ

ಅರ್ಜುನ್​ ಸರ್ಜಾ ವಿರುದ್ಧ ಮೀ ಟೂ ಕೇಸ್‌ಗೆ ಬಿಗ್ ಟ್ವಿಸ್ಟ್ : ಶ್ರುತಿ ಹರಿಹರನ್‌ಗೆ ನೋಟಿಸ್​ ಜಾರಿ ಮಾಡಿದ ಖಾಕಿ

June 9, 2023
dashan
ಮನರಂಜನೆ

ಅಭಿಷೇಕ್ ಅಂಬರೀಶ್-ಅವಿವಾ ರಿಸೆಪ್ಷನ್ ಗೆ ಯಾರ್ಯಾರು ಬಂದಿದ್ದರು ಗೊತ್ತಾ ?

June 8, 2023
ಒಟಿಟಿಗೆ ಈ ವಾರ ಬರುತ್ತಿವೆ ಸೂಪರ್ ಹಿಟ್ ಸಿನಿಮಾಗಳು
ಮನರಂಜನೆ

ಒಟಿಟಿಗೆ ಈ ವಾರ ಬರುತ್ತಿವೆ ಸೂಪರ್ ಹಿಟ್ ಸಿನಿಮಾಗಳು

June 8, 2023
ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’
ಪ್ರಮುಖ ಸುದ್ದಿ

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’

June 5, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.