ಆರಗ ಜ್ಞಾನೇಂದ್ರ ರಾಜೀನಾಮೆ ನೀಡಲಿ – ಮಾಲವಿಕ ಗುಬ್ಬಿವಾಣಿ

ಮೈಸೂರು ಆ 27 : ಅತ್ಯಾಚಾರ  ಮಾಡಿದ ಆರೋಪಿಗಳನ್ನು ಬಿಟ್ಟು ಸಂತ್ರಸ್ತೆಯೆ ವಿರುದ್ದವೇ ಹೇಳಿಕೆ ನೀಡಿರುವ ಗೃಹ ಮಂತ್ರಿಗಳು ಈ ಕೂಡಲೇ ರಾಜೀನಾಮೆ ನೀಡಬೇಕೆಂದು ಆಮ್ ಆದ್ಮಿ ಪಕ್ಷದ ಜಿಲ್ಲಾ ಸಂಚಾಲಕಿ ಮಾಲವಿಕ ಗುಬ್ಬಿವಾಣಿ ತಮ್ಮಆಕ್ರೋಶವನ್ನು ವ್ಯೆಕ್ತ ಪಡಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು ಗೃಹಮಂತ್ರಿಗಳು ಆರೋಪಿಗಳನ್ನು ಶೀಘ್ರವಾಗಿ ಬಂಧಿಸುತ್ತಾರೆ ಮತ್ತು ಸಂತ್ರಸ್ತೆಗೆ ನ್ಯಾಯ ಕೊಡಿಸುತ್ತಾರೆ ಹಾಗೂ ಭವಿಷ್ಯದಲ್ಲಿಇಂತಹ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳುತ್ತಾರೆ ಎಂದು ನಂಬಿದ್ದೇವು ಆದರೆ ಗೃಹ ಮಂತ್ರಿಗಳು ಉಡಾಫೆಯ ಹೇಳಿಕೆ ನೀಡಿದ್ದಾರೆ ಆದ್ದರಿಂದ ಅವರು ಅವರು ಗೃಹ ಸಚಿವ ಹುದ್ದೆಯಲ್ಲಿ ಮುಂದುವರಿಯುವುದಕ್ಕಿಂತ ರಾಜೀನಾಮೆ ನೀಡುವುದೇ ಮಹಿಳೆಯರ ಪಾಲಿಗೆ ಒಳ್ಳೆಯದು ಎಂದು ಆರೋಪಿಸಿದ್ದಾರೆ.

ಗೃಹ ಮಂತ್ರಿಗಳ ವಿವಾದಾತ್ಮಕ ಹೇಳಿಕೆ : ಯುವತಿ ಮತ್ತು ಯುವಕ ಆ ಸಮಯದಲ್ಲಿ ಅಲ್ಲಿಗೆ ಹೋಗಿದ್ದೇ ತಪ್ಪು, ಯುವತಿ ಸಂಜೆ ಅಲ್ಲಿಗೆ ಹೋಗಬಾರದಿತ್ತು ಎಂದು ಬೇಜವಾಬ್ದಾರಿಯುತವಾದ ಹೇಳಿಕೆಯನ್ನು ನೀಡಿದ್ದಾರೆ.  ಸಂಜೆ ನಂತರ ಮಹಿಳೆ ಮನೆಯಿಂದ ಹೊರಗೆ ಬಂದಿದ್ದೇ ತಪ್ಪು ಎಂಬಂತಹ ಹೇಳಿಕೆ ನೀಡಿದ್ದು, ಈ ಹೇಳಿಕೆಗೆ ಗೃಹ ಸಚಿವರ ವಿರುದ್ದ ಭಾರೀ ವಿರೋಧ ವ್ಯಕ್ತವಾಗಿದೆ.

Exit mobile version