Bengaluru : ಸೋಮವಾರ ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi)ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ತಮ್ಮನ್ನು ತಾವು ಹಿಂದೂ ಎಂದು ಕರೆದುಕೊಳ್ಳುವವರು ಸದಾ ಹಿಂಸಾಚಾರದಲ್ಲಿ ತೊಡಗಿದ್ದಾರೆ ಎಂದಿದ್ದರು. ಪ್ರಧಾನಿ ಮೋದಿ ಎದ್ದು ನಿಂತು ಈ ಹೇಳಿಕೆಯನ್ನು ಖಂಡಿಸುವ ಪ್ರಯತ್ನ ಮಾಡಿದ್ದರು. ಆದರೆ ರಾಹುಲ್ ಗಾಂಧಿ ಹೇಳಿಕೆಯನ್ನು ಹಲವರು ಸಮರ್ಥಿಸಿಕೊಂಡಿದ್ದಾರೆ. ರಾಹುಲ್ ಹೇಳಿದ್ದರಲ್ಲಿ ತಪ್ಪಿಲ್ಲ, ಅವರ ಭಾಷಣದಲ್ಲಿ ಹಿಂದೂ ಧರ್ಮವನ್ನು ಅವಮಾನಿಸಿದ್ದಾ? ಸತ್ಯ ಹೇಳಿದ್ದಾ?ಎಂದು ಕೇಳುತ್ತಿದ್ದಾರೆ.
![](https://sp-ao.shortpixel.ai/client/to_webp,q_glossy,ret_img,w_1024,h_576/https://vijayatimes.com/wp-content/uploads/2024/05/rahulgandhi2-1689922335-1024x576.jpg)
ಇದೀಗ ಇದೇ ವಿಚಾರದ ಬಗ್ಗೆ ನಟ ಕಿಶೋರ್ (Actor Kishore) ಪ್ರತಿಕ್ರಿಯಿಸಿದ್ದು ರಾಹುಲ್ ಗಾಂಧಿ ಭಾಷಣದ ವೇಳೆ ಪ್ರಧಾನಿ ಮೋದಿ ಎದ್ದು ನಿಂತು ಖಂಡಿಸಿದ ವೀಡಿಯೋ ತುಣುಕನ್ನು ತಮ್ಮ ಸಾಮಾಜಿಕ ಜಾಲ ತಾಣಗಳಲ್ಲಿ ಹಂಚಿಕೊಂಡು ತನ್ನ ಅಯೋಗ್ಯತೆಯನ್ನು ಮುಚ್ಚಲು, ಇನ್ನೊಬ್ಬರನ್ನು ಕೀಳೆಂದು ತೋರಿಸಲು, ರಾಜಾರೋಷವಾಗಿ ಮಾತು ತಿರುಚುವ ಹಸೀ ಸುಳ್ಳು ಹೇಳುವ, ಹರಡುವ ಅತ್ಯಂತ ಕೀಳುಮಟ್ಟಕ್ಕೂ ಇಳಿಯಬಲ್ಲ, ಘನತೆ ಹೀನ ನಾಚಿಕೆಗೇಡು ಸುಳ್ಳನೆಂದು ತನ್ನನ್ನು ತಾನು ತುಂಬಿದ ಸಭೆಯಲ್ಲಿ ಮತ್ತೆ ರುಜುವಾತು ಮಾಡಿಕೊಂಡ ಮೋದಿ (Modi). ಇದೆಂಥಾ ವಿಕೃತ ಮನಸ್ಥಿತಿ ಮನುಷ್ಯ ಎಂದು ಕಿಡಿ ಕಾರಿದ್ದಾರೆ.
ಇನ್ನು ಅದರ ಅಡಿಯಲ್ಲಿ ಸತ್ಯಕ್ಕೆ ಶಾಂತಿಗೆ ಹೆಸರಾದ ದೇಶಕ್ಕೆ ಎಂಥ ಪ್ರಧಾನಿ ನಾಚಿಕೆಗೇಡು .ಭಾರತ ದೇಶಕ್ಕೇ ಅವಮಾನ ಎಂದು ಬರೆದುಕೊಂಡಿದ್ದಾರೆ. ಕಿಶೋರ್ ಪೋಸ್ಟ್ ಬಗ್ಗೆ ಪರ ವಿರೋಧ ಚರ್ಚೆ ನಡೆಯುತ್ತಿದೆ. ಕೆಲವರು ಅವರನ್ನು ಬೆಂಬಲಿಸಿದರೆ ಮತ್ತೆ ಕೆಲವರು ವಿರೋಧಿಸಿ ಕಾಮೆಂಟ್ ಮಾಡಿದ್ದಾರೆ. ಸಾಮಾನ್ಯವಾಗಿ ನಟ ಕಿಶೋರ್ ಸೋಶಿಯಲ್ ಮೀಡಿಯಾದಲ್ಲಿ (Social Media) ಆಕ್ಟೀವ್ ಆಗಿರುತ್ತಾರೆ. ದೇಶದ ಆಗುಹೋಗುಗಳ ಬಗ್ಗೆ ಸೂಕ್ಷ್ಮವಾಗಿ ಸ್ಪಂದಿಸುತ್ತಿರುತ್ತಾರೆ.
ಮುಖ್ಯವಾಗಿ ಕೇಂದ್ರ ಬಿಜೆಪಿ (BJP) ಸರ್ಕಾರ ಹಾಗೂ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಇರುತ್ತಾರೆ. ಇದೇ ಕಾರಣಕ್ಕೆ ಸಾಕಷ್ಟು ವಿರೋಧ ಎದುರಿಸುತ್ತಾ ಬರುತ್ತಿದ್ದಾರೆ. ಆದರೂ ತಮ್ಮ ಅಭಿಪ್ರಾಯವನ್ನು ಸಾಮಾಜಿಕ ಜಾಲ ತಾಣಗಳಲ್ಲಿ ವ್ಯಕ್ತಪಡಿಸುತ್ತಲೇ ಬಂದಿದ್ದಾರೆ.