ರಸ್ತೆ ನಿರ್ಮಾಣ ವಿಚಾರಕ್ಕೆ ನಟ ಯಶ್‌ ತಂದೆ-ತಾಯಿ ಹಾಗೂ ಗ್ರಾಮಸ್ಥರ ನಡುವೆ ಗಲಾಟೆ

ಹಾಸನ, ಮಾ. 09: ಜಮೀನಿಗೆ ರಸ್ತೆ ನಿರ್ಮಿಸುವ ವಿಚಾರವಾಗಿ ರಾಕಿಂಗ್‌ ಸ್ಟಾರ್‌ ಯಶ್‌ ತಂದೆ-ತಾಯಿ ಹಾಗೂ ಗ್ರಾಮದ ಜನರ ನಡುವೆ ಗಲಾಟೆ ನಡೆದಿರುವ ಘಟನೆ ನಡೆದಿದೆ.

ಜಮೀನಿಗೆ ರಸ್ತೆ ನಿರ್ಮಿಸಲು ಯಶ್‌ ಪೋಷಕರಾದ ಅರುಣ್‌ ಕುಮಾರ್‌, ಪುಷ್ಪಾ ಅವರು ತಿಮ್ಮೇನಹಳ್ಳಿ ಗ್ರಾಮದ ಜಮೀನಿನಲ್ಲಿ ಜೆಸಿಬಿಯಿಂದ ಕೆಲಸ ಮಾಡಿಸುತ್ತಿದ್ದರು. ಇದನ್ನು ವಿರೋಧಿಸಿ ಗ್ರಾಮಸ್ಥರು ಗಲಾಟೆ ಮಾಡಿದ್ದಾರೆ.

ಈ ವೇಳೆ ನಟ ಯಶ್‌ ತಂದೆ ಹಾಗೂ ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆದಿದೆ. ಮಾತಿಗೆ ಮಾತು ಬೆಳೆದು ಗ್ರಾಮಸ್ಥರು ಮತ್ತು ಯಶ್‌ನ ಕೆಲ ಬೆಂಬಲಿಗರು ಕೈ ಕೈ ಮಿಲಾಯಿಸಿದ್ದಾರೆ. ಬಳಿಕ ಸ್ಥಳಕ್ಕೆ ಪೊಲೀಸರು ಆಗಮಿಸಿ ಮಧ್ಯಸ್ಥಿಕೆಯಿಂದ ಸಮಸ್ಯೆ ಬಗೆಹರಿಸಿದ್ದಾರೆ.

Exit mobile version