Kolkata: 2024ರ ಲೋಕಸಭಾ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ (Adhir Ranjan Viral News) ನೇತೃತ್ವದ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕುವುದಕ್ಕಿಂತ ಬಿಜೆಪಿಗೆ ಮತ
ಹಾಕುವುದು ಉತ್ತಮ ಎಂದು ಲೋಕಸಭೆ ವಿಪಕ್ಷ ನಾಯಕ ಅಧೀರ್ ರಂಜನ್ ಚೌಧರಿ (Adhir Ranjan Chaudhary) ನೀಡಿರುವ ಹೇಳಿಕೆಯೊಂದು ಈಗ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಆ ವಿಡಿಯೋ
ಇದೀಗ (Adhir Ranjan Viral News) ಎಲ್ಲೆಡೆ ವೈರಲ್ ಆಗುತ್ತಿದೆ.
ಪಶ್ಚಿಮ ಬಂಗಾಳ ಬೆಹರಂಪುರನಲ್ಲಿ ಸಾರ್ವಜನಿಕ ರ್ಯಾ ಲಿ ಉದ್ದೇಶಿಸಿ ಮಾತನಾಡಿದ ಅಧೀರ್ ರಂಜನ್ ಚೌಧರಿ ಅವರು, ನೀವು ತೃಣಮೂಲ ಕಾಂಗ್ರೆಸ್ (Congress) ಪಕ್ಷಕ್ಕೆ ಯಾಕೆ ಮತ ಹಾಕುತ್ತೀರಿ.
ಅದಕ್ಕಿಂತ ಬಿಜೆಪಿಗೆ ಮತ ಹಾಕೋದು ಉತ್ತಮ. ತೃಣಮೂಲ ಕಾಂಗ್ರೆಸ್ ಬಿಜೆಪಿ (BJP)ಗಿಂತ ಅಪಾಯಕಾರಿಯಾಗಿದೆ ಎಂದು ಟೀಕಿಸಿದ್ದಾರೆ.
ಇನ್ನು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಹೇಳಿಕೆಗೆ, ಟಿಎಂಸಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಮಾತುಗಳನ್ನು ಕೇಳ್ತಿದ್ದೀರಾ ಅಲ್ವಾ? ಅಧೀರ್ ರಂಜನ್
ನಿಜವಾಗಿಯೂ ಕಾಂಗ್ರೆಸ್ಸಿಗರೇ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಶ್ನಿಸಿದ್ದಾರೆ.
ಇನ್ನು ತೃಣಮೂಲ ಕಾಂಗ್ರೆಸ್ ಪಕ್ಷದ ನಾಯಕಿ ಸುಷ್ಮಿತಾ ದೇವ್ (Sushmita Dev) ಕಾಂಗ್ರೆಸ್ ನಾಯಕ ಅಧೀರ್ ರಂಜನ್ ವಿಡಿಯೋ ಹಂಚಿಕೊಂಡು, ಬಿಜೆಪಿ ಪರ ಪ್ರಚಾರ ನಡೆಸುತ್ತಿರುವ ಕಾಂಗ್ರೆಸ್ ಪಕ್ಷದ ಸ್ಟಾರ್
ಪ್ರಚಾರಕ ಎಂದು ಎಂದು ವ್ಯಂಗ್ಯವಾಡಿದ್ದಾರೆ.
ಈ ಬಾರಿ ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧೆ ಮಾಡುತ್ತಿದೆ. ಸೀಟು ಹಂಚಿಕೆಯ ವಿಚಾರದಲ್ಲಿ ಉಂಟಾದ ಭಿನ್ನಾಭಿಪ್ರಾಯದಿಂದಾಗಿ ಟಿಎಂಸಿ (TMC) ಕಾಂಗ್ರೆಸ್ನೊಂದಿಗಿನ
ಮೈತ್ರಿಯಿಂದ ಹೊರಬಂದು ಏಕಾಂಗಿಯಾಗಿ ಸ್ಪರ್ಧೆಗೆ ಇಳಿದಿದೆ. ಇನ್ನೊಂದೆಡೆ ಕಾಂಗ್ರೆಸ್-ಕಮ್ಯೂನಿಷ್ಟ ಮೈತ್ರಿಕೂಟ ಒಂದಾಗಿ ಸ್ಪರ್ಧೆಗೆ ಇಳಿದಿದೆ. ಈ ನಡುವೆ ಬಿಜೆಪಿಯೂ ಕೂಡಾ ಏಕಾಂಗಿಯಾಗಿ ಎಲ್ಲಾ ಕ್ಷೇತ್ರಗಳಲ್ಲಿ
ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.
ಇದನ್ನು ಓದಿ: ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪುರಾಣ: ಅಶ್ಲೀಲ ವಿಡಿಯೋದಲ್ಲಿದ್ದಾರೆ ಎನ್ನಲಾಗುತ್ತಿರುವ ನ್ಯೂಸ್ ಆಂಕರ್ಸ್ಗಳು ಯಾರು?