ಸಾಹಸ ಕಲಾವಿದ ಸಾವಿನ ಹಿನ್ನಲೆ : ತಲೆ ಮರೆಸಿಕೊಂಡಿರುವ ನಿರ್ಮಾಪಕ

ಬೆಂಗಳೂರು, ಆ. 10: ಸಾಹಸ ದೃಶ್ಯ ಸೆರೆಹಿಡಿಯವ ವೇಳೆ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಸಹಾಸ ಕಲಾವಿದ ಅಸುನೀಗಿದ ಹಿನ್ನಲೆಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿರುವ ಬಿಡದಿ ಪೋಲಿಸರು 5 ಜನರ ವಿರುದ್ದ ದೂರು ದಾಖಲಿಸಿಕೊಂಡಿದ್ದಾರೆ. ನಿರ್ದೇಶಕ ಶಂಕರ್ ರಾಜ್, ಸಾಹಸ ಕಲಾವಿದ ವಿನೋದ್, ಕ್ರೇನ್ ಚಾಲಕ ಮುನಿಯಪ್ಪ, ಪ್ರೊಡಕ್ಷನ್ ಮ್ಯಾನೇಜರ್ ಫರ್ನಾಂಡಿಸ್ ಮತ್ತು ನಿರ್ಮಾಪಕ ಗುರು ದೇಶಪಾಂಡೆ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ.

ಲವ್ ಯು ರಚ್ಚು ಸಿನಿಮಾದ ಸಾಹಸ ದೃಶ್ಯ ಚಿತ್ರೀಕರಣ ಬಿಡದಿಯ ಜೋಗರಪಾಳ್ಯ ಗ್ರಾಮದಲ್ಲಿ ನಡೆಯುತ್ತಿತ್ತು. ಹೈ ಟೆನ್ಷನ್ ವಿದ್ಯುತ್ ಲೈನ್ ಕೆಳಗೆ ಅನುಮತಿ ಪಡೆಯದೆ ಚಿತ್ರೀಕರಣ ಮಾಡಲಾಗುತ್ತಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ವಿದ್ಯುತ್ ತಂತಿಗೆ ರೋಪ್ ತಗುಲಿದ ಪರಿಣಾಮ ಈ ದುರಂತ ಸಂಭವಿಸಿದೆ.

ಈ ಸಂಬಂಧ ಲವ್ ಯು ರಚ್ಚು ಸಿನಿಮಾದ ಸಹಾಸ ಕಲಾವಿದ ವಿನೋದ್, ನಿರ್ದೇಶಕ ಶಂಕರ್ ರಾಜ್, ಕ್ರೇನ್ ಚಾಲಕ ಮುನಿಯಪ್ಪ ಅವರನ್ನು ಇಗಾಗಲೇ ವಶಕ್ಕೆ ಪಡೆದಿರುವ ಪೋಲಿಸರು ವಿಚಾರಣೆ ನಡೆಸುತ್ತಿದ್ದಾರೆ. ಗುರು ದೇಶಪಾಂಡೆ ಮತ್ತು ಪ್ರೋಡಕ್ಷನ್ ಮ್ಯಾನೇಜರ್ ಫರ್ನಾಂಡಿಸ್ ಪರಾರಿಯಾಗಿದ್ದು ಅವರಿಗಾಗಿ ಬಿಡದಿ ಪೋಲಿಸರು ಬಲೆ ಬೀಸಿದ್ದಾರೆ.

Exit mobile version