ಅಫ್ಘಾನ್​ ಬಿಕ್ಕಟ್ಟು: ಆಗಸ್ಟ್​ 26ಕ್ಕೆ ಸರ್ವಪಕ್ಷಗಳ ಸಭೆ ಕರೆದ ಕೇಂದ್ರ ಸರ್ಕಾರ

ನವದೆಹಲಿ, ಆ. 23: ಅಫ್ಘಾನಿಸ್ತಾನದಲ್ಲಿ ಇರುವ ಬಿಕ್ಕಟ್ಟಿನ ಪರಿಸ್ಥಿತಿ, ಅಲ್ಲಿನ ಬೆಳವಣಿಗೆಗಳ ಬಗ್ಗೆ ಚರ್ಚಿಸಲು ಕೇಂದ್ರ ಸರ್ಕಾರ ಆಗಸ್ಟ್​ 26ರಂದು ಸರ್ವಪಕ್ಷಗಳ ಸಭೆ ಕರೆದಿದೆ.

ಅಫ್ಘಾನ್​ನಲ್ಲಿ ನಡೆಯುತ್ತಿರುವ ಬೆಳವಣಿಗೆ ಬಗ್ಗೆ ಎಲ್ಲ ಪಕ್ಷಗಳ ನಾಯಕರಿಗೂ ಸರಿಯಾಗಿ ವಿವರಣೆ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಈ ಸಭೆ ಕರೆಯಲಾಗಿದೆ. ಈ ಬಗ್ಗೆ ಟ್ವೀಟ್​ ಮಾಡಿದ್ದ ಸಚಿವ ಜೈಶಂಕರ್​, ಅಫ್ಘಾನ್​ ಬೆಳವಣಿಗೆ ಬಗ್ಗೆ ಪ್ರತಿಪಕ್ಷಗಳ ನಾಯಕರಿಗೆ ವಿವರಿಸುವಂತೆ ನರೇಂದ್ರ ಮೋದಿಯವರು ಸೂಚಿಸಿದ್ದಾರೆ. ಈ ಬಗ್ಗೆ ಇನ್ನಷ್ಟು ಮಾಹಿತಿಗಳನ್ನು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್​ ಜೋಶಿ ನೀಡಲಿದ್ದಾರೆ ಎಂದು ತಿಳಿಸಿದ್ದರು.

ಅಫ್ಘಾನಿಸ್ತಾನ ಅಲ್ಪಸಂಖ್ಯಾತರಾದ ಹಿಂದು ಮತ್ತು ಸಿಖ್​ರಿಗೆ ಆಶ್ರಯ ನೀಡುವುದಾಗಿ ಮತ್ತು ಅಫ್ಘಾನಿಸ್ತಾನದ ಜನರಿಗೆ ನೆರವು ನೀಡಲು ಸಿದ್ಧರಿದ್ದೇವೆಂದು ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್​.ಜೈಶಂಕರ್​ ಹೇಳಿದ್ದಾರೆ.

Exit mobile version