ಅಗ್ನಿ ಅವಘಡ; ಬೆಂಕಿ ನಂದಿಸಲು ಹರಸಾಹಸ

ಬೆಂಗಳೂರು, ನ. 10: ಬೆಂಗಳೂರಿನ ಬಾಪೂಜಿ ನಗರದ ಹೊಸಗುಡ್ಡದ ಹಳ್ಳಿಯಲ್ಲಿರುವ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದು, ಅಕ್ಕಪಕ್ಕದಲ್ಲಿನ ಜನರಲ್ಲಿ ಆತಂಕ ಮೂಡಿದೆ.

ಕಾರ್ಖಾನೆಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಮಾತ್ರದಲ್ಲಿ ಬೆಂಕಿ ಎಲ್ಲೆಡೆ ಆವರಿಸಿದ್ದು, ಎಷ್ಟೇ ಪ್ರಯತ್ನ ಪಡುತ್ತಿದ್ದರೂ ನಿಯಂತ್ರಣಕ್ಕೆ ಸಿಗುತ್ತಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಬ್ಯಾಟರಾಯನಪುರ ಪೊಲೀಸರು ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಬೃಹತ್ ಪ್ರಮಾಣದಲ್ಲಿ ಬೆಂಕಿ ಆವರಿಸಿದ್ದು, ಅಕ್ಕಪಕ್ಕದ ಮನೆಗಳಿಗೂ ಬೆಂಕಿ ವ್ಯಾಪಿಸುತ್ತಿದೆ. ಫ್ಯಾಕ್ಟರಿ ಸಮೀಪ ನಿಲ್ಲಿಸಿದ್ದ ವಾಹನಗಳೂ ಬೆಂಕಿಗೆ ಆಹುತಿಯಾಗುತ್ತಿವೆ. ಸದ್ಯಕ್ಕೆ ಅಕ್ಕಪಕ್ಕದ ಮನೆಯವರನ್ನು ಪೊಲೀಸರು ಸ್ಥಳಾಂತರಿಸುತ್ತಿದ್ದಾರೆ. ಇಡೀ ರಸ್ತೆಯಲ್ಲಿ ಎಲ್ಲಿ ನೋಡಿದರೂ ಹೊಗೆ ಆವರಿಸಿದ್ದು, ಸ್ಥಳೀಯರು ಆತಂಕಕ್ಕೊಳಗಾಗಿದ್ದಾರೆ.

Exit mobile version