• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ರಾಜ್ಯಸಭೆಯಲ್ಲಿ ‘ಕೃಷಿ ಕಾನೂನು’ ಕೋಲಾಹಲ; ವಿಪಕ್ಷಗಳಿಂದ ಸಭಾತ್ಯಾಗ,

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ
ರಾಜ್ಯಸಭೆಯಲ್ಲಿ ‘ಕೃಷಿ ಕಾನೂನು’ ಕೋಲಾಹಲ; ವಿಪಕ್ಷಗಳಿಂದ ಸಭಾತ್ಯಾಗ,
0
SHARES
0
VIEWS
Share on FacebookShare on Twitter

ನವದೆಹಲಿ, ಫೆ. 02: ಸಂಸತ್ ಕಲಾಪದಲ್ಲಿ ಕೇಂದ್ರ ಸರ್ಕಾರದ ವಿವಾದಿತ ‘ಕೃಷಿ ಕಾನೂನು’. ಮತ್ತು ರೈತರ ಪ್ರತಿಭಟನೆ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ನಡೆಯನ್ನು ವಿರೋಧಿಸಿ ರಾಜ್ಯಸಭೆಯಲ್ಲಿ ವಿಪಕ್ಷಗಳು ಸಭಾತ್ಯಾಗ ಮಾಡಿದವು. ರೈತರ ಪ್ರತಿಭಟನೆ ಕುರಿತು ಚರ್ಚಿಸಲು ಅವಕಾಶ ನೀಡುವಂತೆ ಒತ್ತಾಯಿಸಿ ವಿರೋಧ ಪಕ್ಷಗಳು ಗದ್ದಲ, ಕೋಲಾಹಲ ವೆಬ್ಬಿಸಿದ್ದರಿಂದ ರಾಜ್ಯಸಭೆಯ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ.

ರಾಷ್ಟ್ರಪತಿಗಳ ಭಾಷಣದಲ್ಲಿ ರೈತರ ಹೋರಾಟದ ಉಲ್ಲೇಖದ ಕುರಿತು ವಿಪಕ್ಷ ನಾಯಕರು ಪ್ರತಿಭಟನೆ ನಡೆಸಿದರು. ಈ ವೇಳೆ ಸಭಾಧ್ಯಕ್ಷರಾದ ವೆಂಕಯ್ಯನಾಯ್ಡು ಅವರು ಸದಸ್ಯರನ್ನು ಸಮಾಧಾನಗೊಳಿಸುವ ಪ್ರಯತ್ನ ಮಾಡಿದರಾದರೂ, ಇದಕ್ಕೆ ಬೆಲೆ ನೀಡದ ಕಾಂಗ್ರೆ,ಸ್ ಪಕ್ಷದ ಸದಸ್ಯರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಕಲಾಪಕ್ಕೆ ಅಡ್ಡಿಪಡಿಸಿದರು.

ಈ ವೇಳೆ ಸದಸ್ಯರನ್ನು ಉದ್ದೇಶಿಸಿ ಮಾತನಾಡಿ ವೆಂಕಯ್ಯ ನಾಯ್ಡು ಅವರು, ರಾಷ್ಟ್ರಪತಿಗಳು ತಮ್ಮ ಭಾಷಣದಲ್ಲಿ ರೈತರ ಆಂದೋಲನವನ್ನು ಉಲ್ಲೇಖಿಸಿದ್ದಾರೆ. ಚರ್ಚೆ ಇಂದು ಪ್ರಾರಂಭವಾಗಬೇಕೆಂದು ನಾನು ಬಯಸಿದ್ದೆ. ಆದರೆ ಚರ್ಚೆಯು ಮೊದಲು ಲೋಕಸಭೆಯಲ್ಲಿ ಪ್ರಾರಂಭವಾಗುತ್ತದೆ ಎಂದು ನನಗೆ ತಿಳಿಸಲಾಯಿತು. ಇದನ್ನು ಗಮನದಲ್ಲಿಟ್ಟುಕೊಂಡು ನಾಳೆ ರಾಷ್ಟ್ರಪತಿಗಳ ಭಾಷಣ ಕುರಿತು ಚರ್ಚಿಸಲು ನಾವು ಒಪ್ಪಿದ್ದೇವೆ ಎಂದು ಹೇಳಿದರು.

ಅಂತೆಯೇ ಕೃಷಿ ಕಾನೂನುಗಳ ಕುರಿತು ಸದನದಲ್ಲಿ ಚರ್ಚೆಗೆ ಅವಕಾಶ ಇದೆ ಎಂದು ನಾನು ಮತ್ತೆ ಮತ್ತೆ ಹೇಳುತ್ತಿದ್ದೇನೆ. ಈ ಕುರಿತು ಸದನದಲ್ಲಿ ಯಾವುದೇ ಚರ್ಚೆ ನಡೆದಿಲ್ಲ ಎಂಬುದು ತಪ್ಪು ಅಭಿಪ್ರಾಯ. ಮತದಾನಕ್ಕೆ ಸಂಬಂಧಿಸಿದಂತೆ, ಜನರು ತಮ್ಮದೇ ಆದ ವಾದಗಳನ್ನು ಹೊಂದಿರಬಹುದು ಆದರೆ ಪ್ರತಿ ಪಕ್ಷವು ತಮ್ಮ ಭಾಗವನ್ನು ಪೂರ್ಣಗೊಳಿಸಿ ಸಲಹೆಗಳನ್ನು ನೀಡಿತ್ತು. ಆದಾಗ್ಯೂ ಸದಸ್ಯರ ಪ್ರತಿಭಟನೆ ಸರಿಯಲ್ಲ ಎಂದು ಹೇಳಿದರು.

ಪ್ರತಿಪಕ್ಷಗಳ ಸಭಾತ್ಯಾಗ:

ಇನ್ನು ಅತ್ತ ಸಭಾಧ್ಯಕ್ಷರು ಸದಸ್ಯರನ್ನು ಉದ್ದೇಶಿಸಿ ಮಾತನಾಡುತ್ತಿದ್ದಂತೆಯೇ ಇತ್ತ ಕಾಂಗ್ರೆಸ್ ಸೇರಿದಂತೆ ವಿಪಕ್ಷ ಸದಸ್ಯರು ಸಭಾತ್ಯಾಗ ಮಾಡಿದರು. ಕೆಲ ಸದಸ್ಯರಂತೂ ಸಭಾಧ್ಯಕ್ಷ ಮಾತಿಗೂ ಜಗ್ಗದೇ ಪ್ರತಿಭಟನೆ ಮುಂದುವರೆಸಿದ ಹಿನ್ನಲೆಯಲ್ಲಿ ವೆಂಕಯ್ಯನಾಯ್ಡು ಅವರು 2 ಬಾರಿ ಸದನವನ್ನು ಮುಂದೂಡಿದರು ಗದ್ದಲ, ಕೋಲಾಹಲ ಹೆಚ್ಚಾದಾಗ ಸಭಾಪತಿಯವರು ಕಲಾಪವನ್ನು 10.30ರವರೆಗೆ ಮುಂದೂಡಿದರು. ಬಳಿಕ ಸದನ ಸಮಾವೇಶಗೊಂಡಾಗಲೂ ವಿಪಕ್ಷ ಸದಸ್ಯರು ಅದೇ ಬೇಡಿಕೆಯನ್ನು ಮುಂದಿಟ್ಟು ಗದ್ದಲವೆಬ್ಬಿಸಿದ್ದರಿಂದ ಮತ್ತೆ 11.30ರವರೆಗೆ ಕಲಾಪವನ್ನು ಸಭಾಪತಿ ಮುಂದೂಡಿದರು. ಮತ್ತೆ ಕಲಾಪ ಸೇರಿದಾಗಲೂ ಅದೇ ಪರಿಸ್ಥಿತಿ ಮುಂದುವರಿದಿದ್ದರಿಂದಾಗಿ ಕಲಾಪವನ್ನು ನಾಳೆಗೆ ಮುಂದೂಡಲಾಯಿತು.

Related News

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !
ರಾಜಕೀಯ

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !

March 20, 2023
ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!
ರಾಜಕೀಯ

ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!

March 20, 2023
ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ
ದೇಶ-ವಿದೇಶ

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ

March 20, 2023
ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ
ರಾಜಕೀಯ

ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ

March 20, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.