ನವದೆಹಲಿ ಡಿ 10 : ಸೇನಾ ಹೆಲಿಕಾಪ್ಟರ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ಹೆಲಿಕಾಪ್ಟರ್ ಅಪಘಾತಗೊಂಡು ಭಾರತೀಯ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ 13 ಮಂದಿ ಯೋಧರ ಸಾವಿಗೆ ಕಾರಣವಾದ ತಮಿಳುನಾಡಿನಲ್ಲಿ ನಡೆದ ಹೆಲಿಕಾಪ್ಟರ್ ದುರಂತದ ಬಗ್ಗೆ ತನಿಖೆ ನಡೆಸಲು ಭಾರತೀಯ ವಾಯುಸೇನೆ ತ್ರಿ- ಸೇವಾ ನ್ಯಾಯಾಲಯ ತನಿಖೆಯನ್ನು ನಡೆಸುತ್ತಿದೆ. ವಿಚಾರಣೆಯನ್ನು ತ್ವರಿತವಾಗಿ ಪೂರ್ಣಗೊಳಿಸಲಾಗುವುದು ಮತ್ತು ಸತ್ಯಗಳನ್ನು ಹೊರತರಲಾಗುವುದು. ಅಲ್ಲಿಯವರೆಗೆ, ಎಲ್ಲರೂ ಮಾಹಿತಿಯಿಲ್ಲದ ಊಹಾಪೋಹಗಳನ್ನು ನಿರ್ಲಕ್ಷ್ಯ ಮಾಡಿ ಎಂದು ವಾಯುಸೇನೆ ಇಂದು ಟ್ವಿಟ್ ಮೂಲಕ ಮನವಿ ಮಾಡಿದೆ.
ಹೆಲಿಕಾಪ್ಟರ್ ಪತನದ ಪ್ರಕರಣವನ್ನು ತ್ರಿ-ಸೇವಾ ತನಿಖೆಗೆ ಐಎಫ್ ಆದೇಶ ನೀಡಿದೆ. ಇದರ ಮುಂದಾಳತ್ವವನ್ನು ಏರ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ ಟ್ರೈನಿಂಗ್ ಕಮಾಂಡ್ ಏರ್ ಮಾರ್ಷಲ್ ಮನ್ವೇಂದ್ರ ಸಿಂಗ್ ನೇತೃತ್ವ ವಹಿಸಲಿದ್ದಾರೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರ ಸಂಸತ್ತಿಗೆ ತಿಳಿಸಿದ್ದರು. ಏರ್ ಮಾರ್ಷಲ್ ಮನ್ವೇಂದ್ರ ಸಿಂಗ್ ಅವರು ವಾಯುಸೇನೆಯ ಹಿರಿಯ ಹೆಲಿಕಾಪ್ಟರ್ ಪೈಲಟ್ ಆಗಿದ್ದಾರೆ.
ಇಂದು ಸಂಜೆ ದೆಹಲಿಯಲ್ಲಿ ಸೇನಾ ಗೌರವಗಳೊಂದಿಗೆ ಜನರಲ್ ರಾವತ್ ಅವರ ಅಂತ್ಯಕ್ರಿಯೆ ನಡೆದಿದ್ದು, ಕೇಂದ್ರ ಸಚಿವ ಅಮಿತ್ ಶಾ ಹಾಗೂ ಹಲವು ಪ್ರಮುಖ ನಾಯಕರು ಜನರಲ್ ರಾವತ್ ಅವರ ಅಂತಿಮ ದರ್ಶನ ಪಡೆದು ಕುಟುಂಬಕ್ಕೆ ಸಾಂತ್ವನ ಹೇಳಿದರು.