Lucknow: ಕೋವಿಶಿಲ್ಡ್ ಲಸಿಕೆಯ (Covishield) ಅಡ್ಡಪರಿಣಾಮದ ಬಗ್ಗೆ ಉಂಟಾಗಿರುವ ವಿವಾದದ ಬಗ್ಗೆ (Akhilesh Yadav Against BJP) ಪ್ರತಿಕ್ರಿಯಿಸಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್
ಯಾದವ್ (Akhilesh Yadav), ಲಸಿಕೆ ತಯಾರಿಕಾ ಕಂಪನಿಗಳಿಂದ ರಾಜಕೀಯ ದೇಣಿಗೆ ಪಡೆಯಲು ಬಿಜೆಪಿ ಜನರ ಜೀವವನ್ನೇ ಅಡವಿಟ್ಟಿದೆ. ಜನರ ಬದುಕಿನ ಜೊತೆ ಚೆಲ್ಲಾಟವಾಡಿದೆ .
ಮುಂದಿನ ದಿನಗಳಲ್ಲಿ ಈ ಬಗ್ಗೆ ಉನ್ನತ ಮಟ್ಟದ ನ್ಯಾಯಾಂಗ ತನಿಖೆ ನಡೆಸಬೇಕು ಇಂಥ ಮಾರಕ ಔಷಧಗಳಿಗೆ ಅನುಮತಿ ನೀಡುವ ಮೂಲಕ ಜನರ ಬದುಕನ್ನು ಅಪಾಯಕ್ಕೆ ಸಿಲುಕಿಸುವ ಹುನ್ನಾರ ನೆಡೆಸಿದಂತೆ.
ಇದಕ್ಕೆ ಕಾರಣರಾದವರನ್ನು ಶಿಕ್ಷಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಕರೋನಾ ಸಮಯದಲ್ಲಿ 80 ಕೋಟಿ ಭಾರತೀಯರಿಗೆ ಕೋವಿಶಿಲ್ಡ್ ಲಸಿಕೆ ನೀಡಲಾಗಿದೆ. ಪ್ರತಿಯೊಬ್ಬರಿಗೆ 2 ಡೋಸ್ (Dose) ನೀಡಲಾಗಿದೆ.
ಲಸಿಕೆಯಿಂದ ಹೃದಯಾಘಾತ ಸಂಭವಿಸುವ ಸಾಧ್ಯತೆ ಇದೆ ಎಂದು ಇದೀಗ (Akhilesh Yadav Against BJP) ತಯಾರಕ ಕಂಪನಿ ಹೇಳಿದೆ.
ಲಸಿಕೆಯ ಅಡ್ಡಪರಿಣಾಮದಿಂದಾಗಿ ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡವರ ಹಾಗೂ ಲಸಿಕೆಯ ದುಷ್ಪರಿಣಾಮಗಳ ಬಗ್ಗೆ ಭಯ ವ್ಯಕ್ತಪಡಿಸಿದವರ ಅನುಮಾನಗಳು ಮತ್ತು ಭಯಗಳು ಈಗ ನಿಜ ಎಂದು
ಸಾಬೀತಾಗಿದೆ ಎಂದು ಅವರು ಸಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.ತಮ್ಮ ಜೀವದ ಜೊತೆ ಆಟವಾಡಿದರನ್ನು ಜನರು ಎಂದಿಗೂ ಕ್ಷಮಿಸುವುದಿಲ್ಲ ಎಂದು ಕಿಡಿ ಕಾರಿದ್ದಾರೆ.
ಇಡೀ ಜಗತ್ತನ್ನು ಕಾಡಿದ ಕೋವಿಡ್ ಸಾಂಕ್ರಾಮಿಕ ತಡೆಗೆ ಅಸ್ಟ್ರಾಜೆನೆಕಾ (AstraZeneca) ಮತ್ತು ಆಕ್ಸ್ಫರ್ಡ್ ವಿಶ್ವವಿದ್ಯಾನಿಲಯದಿಂದ ಅಭಿವೃದ್ಧಿಪಡಿಸಲಾದ ಕೋವಿಶೀಲ್ಡ್ ಅನ್ನು ಸೀರಮ್ ಇನ್ಸ್ಟಿಟ್ಯೂಟ್
ಆಫ್ ಇಂಡಿಯಾ ಉತ್ಪಾದಿಸಿತ್ತು. ದೇಶದಲ್ಲಿ ವ್ಯಾಪಕವಾಗಿ ಅದನ್ನು ನೀಡಲಾಗಿತ್ತು ಕೂಡ. ಇದೀಗ ಕೋವಿಡ್ – 19 ವೈರಸ್ (Covid-19 Virus) ಪ್ರತಿರೋಧಕ ಲಸಿಕೆ ಕೋವಿಶೀಲ್ಡ್ ಅಪರೂಪದ ಪ್ರಕರಣಗಳಲ್ಲಿ
ಅಡ್ಡ ಪರಿಣಾಮ ಬೀರಬಲ್ಲದು ಎಂದು ಲಸಿಕೆ ತಯಾರಿಕಾ ಕಂಪನಿ ಆಕ್ಸ್ಫರ್ಡ್- ಆಸ್ಟ್ರಾ ಜೆನಿಕಾ ಬ್ರಿಟನ್ ನ್ಯಾಯಾಲಯದಲ್ಲಿ (Britain Court) ಒಪ್ಪಿಕೊಂಡಿದೆ.
ಆಕ್ಸ್ಫರ್ಡ್ ವಿಶ್ವವಿದ್ಯಾಲಯದ (Oxford University) ಸಹಯೋಗದಲ್ಲಿ ಆಸ್ಟ್ರಾ ಜೆನಿಕಾ ಕಂಪನಿ ಕೋವಿಶೀಲ್ಡ್ ಲಸಿಕೆಯನ್ನು ಅಭಿವೃದ್ಧಿಪಡಿಸಿತ್ತು. ಲಸಿಕೆ ಪಡೆದ ಹಲವರು ಜನ ಕಂಪನಿ ವಿರುದ್ಧ ಬ್ರಿಟನ್
ಕೋರ್ಟ್ನಲ್ಲಿ ದಾವೆ ಹೂಡಿದ್ದರು. ಅಪಾರೂಪದ ಪ್ರಕರಣಗಳಲ್ಲಿ ಇದೀಗ ರಕ್ತ ಕಣಗಳ ಸಂಖ್ಯೆ ಕಡಿಮೆ ಆಗುವುದು ಹಾಗೂ ರಕ್ತ ಹೆಪ್ಪುಗಟ್ಟುವಿಕೆಗೆ ಕಾರಣವಾಗಬಹುದು ಎಂದು ಹೇಳಿದೆ.
ಇದನ್ನು ಓದಿ: ದೇಣಿಗೆ ಪಡೆಯಲು ಬಿಜೆಪಿ ಜನರ ಜೀವವನ್ನೇ ಅಡವಿಟ್ಟಿತು: ಅಖಿಲೇಶ್ ಯಾದವ್