- ಸ್ಮಾರ್ಟ್ ಮೀಟರ್ (Smart meter) ಟೆಂಡರ್ ಪ್ರಕ್ರಿಯೆಯಲ್ಲಿ ಬೃಹತ್ ಭ್ರಷ್ಟಾಚಾರ ಆರೋಪ (Massive corruption allegations)
- ಸ್ಮಾರ್ಟ್ ಮೀಟರ್ ಅಳವಡಿಕೆ ಪ್ರಕ್ರಿಯೆಯೇ ವಿಭಿನ್ನ (Allegations in smart meter tender)
- ಟೆಂಡರ್ ಪಾರದರ್ಶಕವಾಗಿ ನಡೆದಿದೆ ಎಂದ ಕೆ.ಜೆ.ಜಾರ್ಜ್ (K.J.George)
Bengaluru: ಸ್ಮಾರ್ಟ್ಮೀಟರ್ ಟೆಂಡರ್ (Smart Meter Tender) ಪ್ರಕ್ರಿಯೆಯಲ್ಲಿ ಬೃಹತ್ ಭ್ರಷ್ಟಾಚಾರ ನಡೆದಿದೆ ಎಂದು ಬಿಜೆಪಿ ಹಾಗೂ ಜೆಡಿಎಸ್ (BJP and JDS) ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದೆ. ಈ ಸ್ಮಾರ್ಟ್ ಮೀಟರ್ ಟೆಂಡರ್ ಕುರಿತು ಇಂಧನ ಸಚಿವರಾದ ಕೆ ಜೆ ಜಾರ್ಚ್ (Minister K J George) ಅವರು ಪ್ರತಿಕ್ರಿಯಿಸಿದ್ದು, ಸ್ಮಾರ್ಟ್ಮೀಟರ್ ಟೆಂಡರ್ ಪ್ರಕ್ರಿಯೆ ಪಾರದರ್ಶಕವಾಗಿ ನಡೆದಿದೆ, ಈ ಕುರಿತ ಬಿಜೆಪಿಯ ಆರೋಪಗಳಲ್ಲಿ ಹುರಳಿಲ್ಲ ಎಂದು ಹೇಳಿದ್ದಾರೆ.
ವಿಧಾನಸೌಧದಲ್ಲಿ (Vidana Souda) ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ ಜೆ ಜಾರ್ಜ್ ಅವರು, ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ (KERC) ಆದೇಶದಂತೆ ರಾಜ್ಯದಲ್ಲಿ ಹೊಸ ಮತ್ತು ತಾತ್ಕಾಲಿಕ ಸಂಪರ್ಕಗಳಿಗೆ (Temporary connections) ಮಾತ್ರ ಮೀಟರ್ ಅಳವಡಿಸಲಾಗುತ್ತಿದೆ. ಅದಕ್ಕಾಗಿ ಕೆಟಿಪಿಪಿ ಕಾಯ್ದೆ (KTPP Act) ಅನುಸಾರ ಟೆಂಡರ್ ಕರೆದು ನಂತರ ಪ್ರಿಬಿಡ್ ಸಭೆಯಲ್ಲಿ (Prebid meeting) ಆಸಕ್ತ ಬಿಡ್ಡುದಾರರ ಪ್ರಶ್ನೆಗಳಿಗೆ ಉತ್ತರಿಸಲಾಗಿತ್ತು. ಬಳಿಕ ಅತಿ ಕಡಿಮೆ ಬಿಡ್ (Low bid) ಮಾಡಿದ್ದ ರಾಜಶ್ರೀ ಎಂಟರ್ ಪ್ರೈಸಸ್ನವರಿಗೆ ಗುತ್ತಿಗೆ ನೀಡಲಾಗಿದೆ ಎಂದು ಹೇಳಿದರು.
ಕೇಂದ್ರ ಸರ್ಕಾರದ (Central Govt) ಪರಿಷ್ಕೃತ ವಿತರಣಾ ವಲಯ ಯೋಜನೆ (RDSS) ಜಾರಿಗೊಳಿಸಿದ್ದರೆ ಅಥವಾ ಕೇಂದ್ರ ಸರ್ಕಾರದ ನಿರ್ದೇಶನದಂತೆ ನಾವು ಮುಂದುವರಿದಿದ್ದರೆ (Continue) ಹೊಸ ಮತ್ತು ತಾತ್ಕಾಲಿಕ ಸ್ಥಾಪನಗಳ ಜತೆಗೆ ಹಾಲಿ ಸ್ಥಾಪನಗಳಿಗೂ ಸ್ಮಾರ್ಟ್ ಮೀಟರ್ (Smart meters for existing installations ) ಅಳವಡಿಸಬೇಕಿತ್ತು. ಆದರೆ, ಗ್ರಾಹಕರ ಮೇಲೆ ಹೊರೆಯಾಗಬಾರದು ಎಂಬ ಕಾರಣಕ್ಕೆ ಅದನ್ನು ಜಾರಿಗೊಳಿಸಲಿಲ್ಲ. ಕೆಇಆರ್ಸಿ (KERC) ಆದೇಶದಂತೆ ಹೊಸ ಮತ್ತು ತಾತ್ಕಾಲಿಕ ಸ್ಥಾಪನಗಳಿಗೆ ಮಾತ್ರ ಸ್ಮಾರ್ಟ್ ಮೀಟರ್ ಅಳವಡಿಸಲಾಗುತ್ತಿದೆ. ನಮಗೆ ಜನಹಿತ ಮುಖ್ಯವಾಗಿದ್ದರಿಂದ ಈ ನಿರ್ಧಾರ ಕೈಗೊಂಡೆವು ಎಂದು ಹೇಳಿದ್ದಾರೆ.

ಆರ್ ಡಿಎಸ್ಎಸ್ (R DSS) ಅನುಷ್ಠಾನಗೊಳಿಸಿರುವ ರಾಜ್ಯಗಳ ವಿದ್ಯುತ್ ಸರಬರಾಜು ಕಂಪನಿಗಳು (State electricity supply companies) ಎಲ್ಲಾ ಮನೆಗಳಲ್ಲಿ ಏಕ ಕಾಲದಲ್ಲಿ (Bulk replacement) ಸ್ಮಾರ್ಟ್ ಮೀಟರ್ ಅಳವಡಿಸಿ ಅದಕ್ಕೆ ಪೂರಕವಾದ ತಾಂತ್ರಿಕ ನಿರ್ವಹಣೆ ವೆಚ್ಚವನ್ನು (Technical maintenance costs) ಪ್ರತಿ ತಿಂಗಳ ಬಿಲ್ನಲ್ಲಿ ಹೊಂದಾಣಿಕೆ ಮಾಡಿಕೊಳ್ಳುತ್ತವೆ. ಅಂದರೆ, ಕಂತಿನಲ್ಲಿ ಸ್ಮಾರ್ಟ್ಮೀಟರ್ (Smart meter in installments) ಹಾಗೂ ತಾಂತ್ರಿಕ ನಿರ್ವಹಣೆ ವೆಚ್ಚವನ್ನು ಗ್ರಾಹಕರಿಂದ ವಸೂಲಿ ಮಾಡುತ್ತವೆ. ಆದರೆ, ನಮ್ಮ ರಾಜ್ಯದಲ್ಲಿ (State) ಇರುವ ನಿಯಮದ ಪ್ರಕಾರ, ವಿದ್ಯುತ್ ಮೀಟರ್ಗಳನ್ನು ಗ್ರಾಹಕರೇ (Electricity meters) ಭರಿಸಬೇಕು.
ಆರ್ಡಿಎಸ್ಎಸ್ (RDSS) ಅನುಷ್ಠಾನಗೊಳಿಸದ ಕಾರಣ ನಮ್ಮಲ್ಲಿ ಹೊಸ ಮತ್ತು ತಾತ್ಕಲಿಕ ಸಂಪರ್ಕಗಳಿಗೆ ಮಾತ್ರ ಸ್ಮಾರ್ಟ್ ಮೀಟರ್ ಅಳವಡಿಸುತ್ತಿರುವುದರಿಂದ ಮೀಟರ್ ದರವನ್ನು (ಸಿಂಗಲ್ ಫೇಸ್ – 4,998 ರೂ.) (Single phase – Rs. 4,998)) ಆ ಗ್ರಾಹಕರೇ ಭರಿಸಬೇಕಾಗುತ್ತದೆ. ಪ್ರತಿ ತಿಂಗಳ ತಾಂತ್ರಿಕ ನಿರ್ವಹಣೆ ವೆಚ್ವವನ್ನು ಬೆಸ್ಕಾಂ ಭರಿಸಿ (Pay BESCOM) , ನಂತರ ದರ ಹೊಂದಾಣಿಕೆ ಮಾಡಿಕೊಳ್ಳಲಾಗುವುದು. ತಾತ್ಕಾಲಿಕ ಸಂಪರ್ಕಕ್ಕೆ ಪ್ರಿ-ಪೇಯ್ಡ್ಗೆ (Prepaid) ಮಾತ್ರ ಅವಕಾಶವಿದ್ದು, ಪೋಸ್ಟ್ ಪೇಯ್ಡ್ (Postpaid) ಆಯ್ಕೆ ಇರುವುದಿಲ್ಲ. ಹೊಸ ಸಂಪರ್ಕಗಳಿಗೆ ಪ್ರಿ-ಪೇಯ್ಡ್ ಹಾಗೂ ಪೋಸ್ಟ್-ಪೇಯ್ಡ್ ಆಯ್ಕೆ ಲಭ್ಯವಿರುತ್ತದೆ ಎಂದು ಹೇಳಿದರು.
ಕೇಂದ್ರ ಇಂಧನ ಪ್ರಾಧಿಕಾರದ ನಿರ್ದೇಶನದಂತೆ (Directions of Central Energy Authority) 2021-22ನೇ ಸಾಲಿನಲ್ಲಿ ಆರ್ಡಿಎಸ್ (RDSS- Revamped Distribution Sector Scheme) ಯೋಜನೆ ರೂಪಿಸಿದ್ದು, ಕೇಂದ್ರದ ಇಂಧನ ಸಚಿವಾಲಯವು ಮಾರ್ಗಸೂಚಿ (Ministry Guidelines) ಹೊರಡಿಸಿ, ವಿದ್ಯುತ್ ಸರಬರಾಜು ತಮ್ಮ ಸಬ್ಸಿಡಿ ಸೇರಿದಂತೆ (Including subsidy) ಎಲ್ಲಾ ಬಾಕಿಗಳನ್ನು ಪಾವತಿಸಿದ್ದರೆ ಸ್ಮಾರ್ಟ್ ಮೀಟರ್ ಅಳವಡಿಸಲು ಕೇಂದ್ರದಿಂದ ಪ್ರತಿ ಮೀಟರ್ಗೆ ಗರಿಷ್ಠ 900 ರೂ. ಅಥವಾ (Rs. 900) ಮೀಟರ್ ದರದ ಶೇ.15ರಷ್ಟನ್ನು (15 percent) ಸಬ್ಸಿಡಿಯಾಗಿ ನೀಡುವುದಾಗಿ ಹೇಳಿತ್ತು.
ಇದನ್ನೂ ಓದಿ: http://ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ,ಸತ್ಯವಂತರಿಗಿದು ಕಾಲವಲ್ಲ- ಯತ್ನಾಳ್ ಟ್ವೀಟ್
ಅದರಂತೆ ದೇಶದ ಇತರೆ ರಾಜ್ಯಗಳು ಯೋಜನೆಯಡಿ, ಏಕಕಾಲದಲ್ಲಿ ಎಲ್ಲಾ ಗ್ರಾಹಕರ ಸ್ಥಾಪನಗಳಿಗೂ (Allegations in smart meter tender) ಸ್ಮಾರ್ಟ್ ಮೀಟರ್ ಅಳವಡಿಸಿದ್ದವು (Smart meter installed) . ಆದರೆ, ನಮ್ಮ ರಾಜ್ಯ ಆಗ ಯೋಜನೆ (Plan) ಅಳವಡಿಸಿಕೊಂಡಿರಲಿಲ್ಲ ಎಂದು ತಿಳಿಸಿದ್ದಾರೆ.