ಮೈಸೂರು ಡಿ 4 : ಅಂಬೇಡ್ಕರ್ ಪ್ರತಿಮೆಗೆ ಪೊಲೀಸರು ತಡೆ ಒಡ್ಡಿದ ಹಿನ್ನಲೆಯಲ್ಲಿ ಯುವಕನೊಬ್ಬ ಕತ್ತು ಕೊಯ್ದುಕೊಂಡ ಘಟನೆ ಮೈಸೂರಿನ ಪಡುವಾರಹಳ್ಳಿಯ ಮಾತೃ ಮಂಡಳಿ ವೃತ್ತದಲ್ಲಿ ನಡೆದಿದೆ.
ಶುಕ್ರವಾರ ತಡರಾತ್ರಿ ಕೆಲ ಯುವಕರು ಅನುಮತಿ ಇಲ್ಲದೆ ಮಾತೃ ಮಂಡಳಿ ವೃತ್ತದಲ್ಲಿ ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಮಾಡಲು ಮುಂದಾಗಿದ್ದರು. ಯಾವುದೇ ಅನುಮತಿ ಇಲ್ಲದ ಕಾರಣ ಪೊಲೀಸರು ಯುವಕರನ್ನು ತಡೆದಿದ್ದಾರೆ. ಪಾಲಿಕೆ ಸಿಬ್ಬಂದಿ ಪ್ರತಿಮೆಯನ್ನು ವಶಕ್ಕೆ ಪಡೆದಿದ್ದಾರೆ.
ಈ ವೇಳೆ ಯುವಕರ ಗುಂಪಿನಲ್ಲಿದ್ದ ಪಡುವಾರಹಳ್ಳಿಯ ಸತೀಶ್ (29) ಎನ್ನುವಾತ ಪ್ರತಿಮೆ ವಶಕ್ಕೆ ಪಡೆದನ್ನು ಖಂಡಿಸಿ ಕತ್ತು ಕೊಯ್ದುಕೊಂಡಿದ್ದಾರೆ. ಕೂಡಲೇ ಸ್ಥಳದಲ್ಲಿದ್ದವರು ಯುವಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.