ಅಪರೇಷನ್ ಕಮಲಕ್ಕೆ ಅಮಿಷ ಪ್ರಕರಣ: ಯಡಿಯೂರಪ್ಪ ವಿರುದ್ಧ ತನಿಖೆಗೆ ಹೈಕೋರ್ಟ್ ಸಮ್ಮತಿ

ಬೆಂಗಳೂರು, ಮಾ. 31: ರಾಜ್ಯದಲ್ಲಿ ‌ಅಧಿಕಾರದ ಚುಕ್ಕಾಣಿ ಹಿಡಿಯಲು ಆಪರೇಷನ್ ಕಮಲ ನಡೆಸಿದ ಪರಿಣಾಮ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸಂಕಷ್ಟ ಎದುರಾಗಿದ್ದು, ಅಪರೇಷನ್ ಕಮಲಕ್ಕಾಗಿ ಅಮಿಷವೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಸ್ವೈ ವಿರುದ್ದ ತನಿಖೆ ನಡೆಸಲು ಹೈಕೋರ್ಟ್ ಸಮ್ಮತಿ ಸೂಚಿಸಿದೆ.

ಜೆಡಿಎಸ್ ಬಿಟ್ಟು ಬಿಜೆಪಿಗೆ ಬರುವಂತೆ ಅಮಿಷ ಒಡ್ಡಲಾಗಿದೆ ಎಂದು ಆರೋಪಿಸಿ ಶಾಸಕ ನಾಗನಗೌಡ ಪುತ್ರ ಶರಣಗೌಡ ಅವರುಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ಸಿಎಂ ಬಿಎಸ್ ಯಡಿಯೂರಪ್ಪ, ಶಿವನಗೌಡ ನಾಯಕ್, ಶಾಸಕ ಪ್ರೀತಂಗೌಡ, ಎಂ.ಬಿ ಮರಮಕಲ್ ವಿರುದ್ದ ಮೊಕದ್ದಮೆ ದಾಖಲಾಗಿತ್ತು.

ಆದರೆ, ದೇವದುರ್ಗ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾದ ಹಿನ್ನೆಲೆ ಎಫ್ ಐಆರ್ ಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್, ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ತನಿಖೆಗೆ ಅಸ್ತು ಎಂದಿದೆ. ಈ ನಡುವೆ ಪ್ರಕರಣದ ರದ್ದತಿಗೆ ಕೋರಿ ಮುಖ್ಯಮಂತ್ರಿ ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ
ಎಫ್ ಐಆರ್ ಗೆ ತಡೆಯಾಜ್ಞೆ ನೀಡಲಾಗಿತ್ತು. ಆದರೆ ಇದೀಗ ಎಫ್ ಐಆರ್ ತಡೆಯಾಜ್ಞೆ ತೆರವುಗೊಳಿಸಿರುವ ಹೈಕೋರ್ಟ್, ತನಿಖೆಗೆ ಸಮ್ಮತಿ ಸೂಚಿಸಿದೆ.

Exit mobile version