Karwar: ಸಿದ್ದರಾಮುಲ್ಲ ಖಾನ್ ಗೆ ಸರ್ಕಾರದ ನೌಕರರಿಗೆ ಸಂಬಳ ಕೊಡಲು ಹಣವಿಲ್ಲ, ಅಭಿವೃದ್ಧಿಗೆ ಹಾಗೂ ಶಾಸಕರಿಗೆ ಕೊಡಲು ಪಗಾರ ಇಲ್ಲ ಅಂತಾರೆ. ಹಿಂದುಳಿದವರಿಗೆ ಕೊಟ್ಟ 11 ಸಾವಿರ ಕೋಟಿ ನಾಪತ್ತೆಯಾಗಿಬಿಟ್ಟಿದೆ. ರಾಜ್ಯ ಸರ್ಕಾರ ದಿವಾಳಿಯಾಗಿಬಿಟ್ಟಿದೆ. ಸಿದ್ದರಾಮಯ್ಯನ ಸರ್ಕಾರದ ತರ ಮೋದಿ ಸರ್ಕಾರ ದಿವಾಳಿ ಆಗಿಲ್ಲ ಎಂದು ಸಂಸದ ಅನಂತ್ ಕುಮಾರ್ ಹೆಗಡೆ (Ananth Kumar Hegde) ಕಿಡಿಕಾರಿದ್ದಾರೆ.
ಉತ್ತರ ಕನ್ನಡ (Uttara Kannada) ಜಿಲ್ಲೆಯ ಮುಂಡಗೋಡಿನಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ಯೋಜನೆಗಳಿಗೆ, ಶಾಸಕರಿಗೆ ಕೊಡಲು ಹಣ ಇಲ್ಲ ಅಂತಾರೆ. ಹಿಂದುಳಿದವರು, ಎಸ್ಸಿ, ಎಸ್ಟಿ ವರ್ಗದವರಿಗೆ ನೀಡಿದ್ದ 11 ಸಾವಿರ ಕೋಟಿ ರೂ. ನಾಪತ್ತೆಯಾಗಿದೆ. ರಾಜ್ಯ ಸರ್ಕಾರ (Karnataka Government) ದಿವಾಳಿಯಾಗಿದೆ, ಮೋದಿ ಸರ್ಕಾರ ದಿವಾಳಿಯಾಗಿಲ್ಲ ಎಂದು ಹೇಳಿದ್ದಾರೆ.
ಮಸೀದಿಗೆ ಹಣ ಕೊಡುತ್ತೀರಿ, ಅಲ್ಪಸಂಖ್ಯಾತರ ತುಷ್ಟೀಕರಣಕ್ಕೆ ಹಣ ಕೊಡುತ್ತೀರಿ. ನಮ್ಮ ದೇವರು ಏನು ಅಪರಾಧ ಮಾಡಿದ್ದಾನೆ. ಹಿಂದೂಗಳು ಕಟ್ಟಿರುವ ತೆರಿಗೆ ಹಣದಿಂದ ರಾಜ್ಯ ಸರ್ಕಾರ ನಡೆಯುತ್ತಿದೆ. ಹಿಂದೂಗಳ ತೆರಿಗೆ, ಹಿಂದೂಗಳ ಹಕ್ಕು ಅಂತಾ ನಾವು ಕುಳಿತರೇ ಸ್ಥಿತಿ ಏನಾಗುತ್ತೆ? ಸಣ್ಣಬುದ್ಧಿ ಮಾಡಲ್ಲ, ಹಿಂದೂ ಸಮಾಜದ ಬಗ್ಗೆ ಹೇಳುವವರು, ಕೇಳುವವರು ಇಲ್ಲವಾ? ಎಂದು ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ (Congress) ಮಾಡಿದ ಅಪಪ್ರಚಾರ ಇದು. ಪ್ರಚಾರ ಯಾವತ್ತೂ ಕಾಂಗ್ರೆಸ್ ಮಾಡಿಲ್ಲ, ಸ್ವಾತಂತ್ರ ಬಂದ ನಂತರ ಎಲ್ಲಾ ರಸ್ತೆಗಳು, ಸರ್ಕಲ್, ಯೋಜನೆಗಳು ಗಾಂಧಿ ಹೆಸರುಗಳೇ ಇಟ್ಟಿದ್ದಾರೆ. ಅಪ್ಪ ಗಾಂಧಿ, ಮಗ ಗಾಂಧಿ, ಅಜ್ಜ ಗಾಂಧಿ, ಮೊಮ್ಮಗ ಗಾಂಧಿ ಎಲ್ಲಾ ಗಾಂಧಿ ಹೆಸರುಗಳೇ. ಮೋದಿಯವರು (Narendra Modi) ಎಲ್ಲಿಯಾದರೂ ಒಂದು ಹೆಸರು ಇಟ್ಟುಕೊಂಡಿದ್ದಾರಾ..? ನಮಗೆ ಕೆಲಸ ಮಾಡುವುದು ಮಾತ್ರ ಬೇಕು. ಅವರಿಗೆ ಹೆಸರು ಮಾತ್ರ ಬೇಕು.
ಬ್ರಾಂಡ್ ಬ್ರಾಂಡ್ (Brand) ನೋಡೇ ವೋಟು ಹಾಕಬೇಕು, ಅಪಪ್ರಚಾರ ಮಾಡುತ್ತಾ ದೇಶವನ್ನು ಲೂಟಿ ಹೊಡೆದ ಕುಟುಂಬವನ್ನೇ ಎಲ್ಲಾಕಡೆ ಇಟ್ಟುಕೊಂಡು ತಿರುಗುತ್ತಾರಲ್ಲ ಅವರಿಗೇ ಧೈರ್ಯ ಇರಬೇಕಾದರೇ ನಮಗೆ ಎಷ್ಟಿರಬೇಡ ಎಂದು ಕಾಂಗ್ರೆಸ್ ವಿರುದ್ಧ ಗುಡುಗಿದ್ದಾರೆ.