- ಅನ್ಯರಾಜ್ಯಗಳ ತೋತಾಪುರಿ ಮಾವು ಬ್ಯಾನ್ ಮಾಡಿರುವ ಆಂಧ್ರ
- ಜೂನ್ 7ರಂದು ಚಿತ್ತೂರು ಜಿಲ್ಲಾಧಿಕಾರಿಯಿಂದ ನಿರ್ಬಂಧಕ್ಕೆ ಆದೇಶ
- ಕರ್ನಾಟಕ ಗಡಿಭಾಗದ ಮಾವು ಬೆಳೆದ ರೈತರಿಗೆ ತೊಂದರೆ (Andra bans Totapuri mangoes)
Bengaluru: ಕರ್ನಾಟಕದ ತೋತಾಪುರಿ ಮಾವಿಗೆ (Totapuri mango) ಆಂಧ್ರದ ಚಿತ್ತೂರು ಜಿಲ್ಲಾಧಿಕಾರಿ ನಿರ್ಬಂಧ ಹೇರಿದ್ದಾರೆ (Restricted) .
ಇದರಿಂದ ತೋತಾಪುರಿ ಮಾವಿನ ಬೆಲೆ ಕುಸಿದು ಬಿದ್ದಿದ್ದು, ರೈತರು (Farmers) ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಆಂಧ್ರಪ್ರದೇಶ (AndraPradesha) ಸರ್ಕಾರದ ನಿರ್ಬಂಧ ಹಿನ್ನೆಲೆಯಲ್ಲಿ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಪತ್ರ ಬರೆದಿದ್ದಾರೆ.
ತೋತಾಪುರಿ ಮಾವಿಗೆ ವಿಧಿಸಿರುವ ನಿರ್ಬಂಧ ಹಿಂಪಡೆಯಲು (Withdraw a bond) ಆಂಧ್ರಪ್ರದೇಶ ಸಿಎಂಗೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಚಿತ್ತೂರು ಜಿಲ್ಲಾಧಿಕಾರಿ (Chittoor District Collector) ಕರ್ನಾಟಕದ ತೋತಾಪುರಿ ಮಾವು ನಿರ್ಬಂಧ ಹೇರಿದ್ದಾರೆ.
ಇದರಿಂದ ಕರ್ನಾಟಕ ಗಡಿಭಾಗದ ಮಾವು (Border mango) ಬೆಳೆದ ರೈತರಿಗೆ ತೊಂದರೆ ಉಂಟು ಮಾಡಿದೆ.
ಹೀಗಾಗಿ ಈ ನಿರ್ಬಂಧವನ್ನ ತೆರವುಗೊಳಿಸಿ ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಗೆ (Chief Minister Chandrababu Naidu) ಪತ್ರ ಬರೆದು ಮನವಿ ಮಾಡಿದ್ದಾರೆ.
ಇತರ ರಾಜ್ಯಗಳಿಂದ ತೋತಾಪುರಿ ಮಾವಿನ ಹಣ್ಣುಗಳನ್ನು (Totapuri mangoes) ಜಿಲ್ಲೆಗೆ ಪ್ರವೇಶಿಸುವುದನ್ನು ನಿಷೇಧಿಸಿ ಚಿತ್ತೂರು ಜಿಲ್ಲಾಧಿಕಾರಿಗಳು (Chittoor District Magistrate) ಜೂನ್ 07 ರಂದು ಆದೇಶ ಹೊರಡಿಸಿರುವುದು ತಿಳಿದುಬಂದಿದೆ.

ಈ ಹಠಾತ್ ಮತ್ತು ಏಕಪಕ್ಷೀಯ ಕ್ರಮವು (Sudden and unilateral action) ಕರ್ನಾಟಕದ ಮಾವು ಬೆಳೆಗಾರರಿಗೆ, ವಿಶೇಷವಾಗಿ ಗಡಿ ಪ್ರದೇಶಗಳಲ್ಲಿ ಗಣನೀಯ ಪ್ರಮಾಣದಲ್ಲಿ (considerable extent) ತೋತಾಪುರಿ ಮಾವನ್ನು ಬೆಳೆಯುವವರಿಗೆ ಹೆಚ್ಚಿನ ತೊಂದರೆಯನ್ನುಂಟು ಮಾಡಿದೆ.
ಈ ರೈತರು ಉತ್ಪನ್ನಗಳನ್ನು (Farmers produce) ಮಾರಾಟ ಮಾಡಲು ಚಿತ್ತೂರು (Chittoor) ಮೂಲದ ಸಂಸ್ಕರಣಾ ಘಟಕಗಳೊಂದಿಗೆ ದೀರ್ಘಕಾಲದಿಂದ ಸಂಪರ್ಕ ಹೊಂದಿದ್ದಾರೆ.
ಪ್ರಸ್ತುತ ನಿರ್ಬಂಧವು (Restriction) ಈ ಸುಸ್ಥಾಪಿತ ಪೂರೈಕೆ ಸರಪಳಿಯನ್ನು ಅಡ್ಡಿಪಡಿಸಿದೆ ಮತ್ತು ಕೊಯ್ಲಿನ (Interrupted and harvest) ನಂತರದ ಗಮನಾರ್ಹ ನಷ್ಟವನ್ನುಂಟುಮಾಡಿದೆ,
ಇದು ಸಾವಿರಾರು ರೈತರ (Farmers) ಜೀವನೋಪಾಯದ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ ಎಂದು ಆಂಧ್ರ ಸಿಎಂಗೆ (Andhra CM) ಬರೆದ ಪತ್ರದಲ್ಲಿ ಸಿದ್ದರಾಮಯ್ಯ ಉಲ್ಲೇಖಿಸಿದ್ದಾರೆ.
ಪೂರ್ವ ಸಮಾಲೋಚನೆ ಅಥವಾ ಸಮನ್ವಯವಿಲ್ಲದೆ ತೆಗೆದುಕೊಳ್ಳುವ ಈ ರೀತಿಯ ಕ್ರಮಗಳು ಸಹಕಾರಿ ಒಕ್ಕೂಟ ವ್ಯವಸ್ಥೆಯ (Co-operative Union System) ಮನೋಭಾವಕ್ಕೆ ವಿರುದ್ಧವಾಗಿವೆ.
ಇದು ಉದ್ವಿಗ್ನತೆ ಮತ್ತು ಪ್ರತೀಕಾರದ ಕ್ರಮಗಳಿಗೆ ಕಾರಣವಾಗಬಹುದು (Lead to actions) ಎಂದು ಕಳವಳ ವ್ಯಕ್ತಪಡಿಸುತ್ತೇನೆ.
ಪಾಲುದಾರರು ಈಗಾಗಲೇ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ (Expressing) , ಇದು ತರಕಾರಿಗಳು ಮತ್ತು ಇತರ ಕೃಷಿ ಸರಕುಗಳ ಅಂತರ-ರಾಜ್ಯ (Interstate) ಸಾಗಣೆಯನ್ನು ಅಡ್ಡಿಪಡಿಸಬಹುದು.
ಈ ವಿಷಯದಲ್ಲಿ ಚಂದ್ರಬಾಬು ನಾಯ್ಡು ಮಧ್ಯಪ್ರವೇಶಿಸಬೇಕೆಂದು (Intervene) ಒತ್ತಾಯಿಸುತ್ತೇನೆ ಮತ್ತು ಚಿತ್ತೂರು ಜಿಲ್ಲಾಡಳಿತದ ಆದೇಶವನ್ನು ತಕ್ಷಣವೇ ರದ್ದುಗೊಳಿಸಲು ಜಿಲ್ಲೆಯ ಅಧಿಕಾರಿಗಳಿಗೆ (District Officers) ಅಗತ್ಯ ನಿರ್ದೇಶನಗಳನ್ನು ನೀಡಬೇಕೆಂದು ವಿನಂತಿಸುತ್ತೇನೆ ಎಂದು ಸಿದ್ದರಾಮಯ್ಯ ಪತ್ರದಲ್ಲಿ ಬರೆದಿದ್ದಾರೆ.
ಇದನ್ನು ಓದಿ : ಕಡಲ ತೀರದಲ್ಲಿ ಸಿಂಗಾಪುರದ ಕಾರ್ಗೋ ಶಿಪ್ ಅಗ್ನಿಗಾಹುತಿ: ಇನ್ನು ಪತ್ತೆಯಾಗದ ನಾಲ್ವರು ಸಿಬ್ಬಂದಿಗಾಗಿ ಮುಂದುವರೆದ ಕಾರ್ಯಾಚರಣೆ
ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು ಮತ್ತು ರೈತರ ಕಲ್ಯಾಣದ ಹಿತದೃಷ್ಟಿಯಿಂದ (Farmers’ welfare) ಕೃಷಿ ಉತ್ಪನ್ನಗಳ ಸರಾಗ ಸಾಗಣೆಯನ್ನು (Andra bans Totapuri mangoes) ಪುನಃಸ್ಥಾಪಿಸಲು ತ್ವರಿತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.