ಮುಂಬೈ, ಜು. 03: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 5ರಂದು ವಿಚಾರಣೆಗೆ ಹಾಜರಾಗುವಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರಿಗೆ ಸಮನ್ಸ್ ನೀಡಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ತಿಳಿಸಿದ್ದಾರೆ.
ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ದೇಶಮುಖ್ ಅವರಿಗೆ ನೀಡಿರುವ ಮೂರನೇ ಸಮನ್ಸ್ ಇದಾಗಿದ್ದು, ಈ ಹಿಂದೆ ಎರಡು ಬಾರಿ ಕೋವಿಡ್ ಬಗ್ಗೆ ಆತಂಕ ವ್ಯಕ್ತಪಡಿಸಿ ವಿಚಾರಣೆಯಿಂದ ಹಿಂದೆ ಸರಿದಿದ್ದರು. ಇದರ ಬದಲಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಹೇಳಿಕೆ ದಾಖಲಿಸಲು ಅನುಮತಿ ನೀಡುವಂತೆ ಕೋರಿದ್ದರು. ದಕ್ಷಿಣ ಮುಂಬೈನಲ್ಲಿರುವ ಇ.ಡಿ ಕಚೇರಿಯಲ್ಲಿ ಸೋಮವಾರ ಹೇಳಿಕೆ ದಾಖಲಿಸುವಂತೆ ಅವರಿಗೆ ಸೂಚನೆ ನೀಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.