• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಮೈಸೂರು ಮೃಗಾಲಯದಲ್ಲಿ ಪ್ರಾಣಿಗಳು ಕೂಲ್ ಕೂಲ್: ಬಿಸಿಲ ತಾಪ ತಗ್ಗಿಸಲು ಸ್ಪ್ರಿಂಕ್ಲರ್ ಅಳವಡಿಕೆ

Sharadhi by Sharadhi
in ಪ್ರಮುಖ ಸುದ್ದಿ
ಮೈಸೂರು ಮೃಗಾಲಯದಲ್ಲಿ ಪ್ರಾಣಿಗಳು ಕೂಲ್ ಕೂಲ್: ಬಿಸಿಲ ತಾಪ ತಗ್ಗಿಸಲು ಸ್ಪ್ರಿಂಕ್ಲರ್ ಅಳವಡಿಕೆ
0
SHARES
0
VIEWS
Share on FacebookShare on Twitter

ಮೈಸೂರು ಮಾ 20: ಬೇಸಿಗೆಯ ಬಿಸಿ ಹೆಚ್ಚಾಗಿದ್ದು. ಮೈಸೂರಿನಲ್ಲಿ ಸೂರ್ಯನ ಪ್ರಖರತೆ ಮಿತಿಮೀರಿ ದಿನೇದಿನೆ ಬಿಸಿಲಿನ ತಾಪ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನ ಮೃಗಾಲಯದಲ್ಲಿ ವನ್ಯಜೀವಿಗಳು ಕೂಲ್ ಆಗಲು ವಾಟರ್ ಸ್ಪ್ರಿಂಕ್ಲರ್ ನಿರ್ಮಿಸಲಾಗಿದೆ.

ದಿನೇ ದಿನೇ ಹೆಚ್ಚುತ್ತಿರುವ ಉಷ್ಣಾಂಶದಿಂದ ಪ್ರಾಣಿಗಳನ್ನ ಬಿಸಿಲಿನ ತಾಪದಿಂದ ತಪ್ಪಿಸಲು ನೀರಿನ ಸಿಂಪಡಣೆ ಮಾಡಲಾಗಿದ್ದು, ನೀರಿನಲ್ಲಿ ಚಿನ್ನಾಟವಾಡ್ತಾ ಬೇಸಿಗೆಯ ಬೇಗೆಯಿಂದ ಪ್ರಾಣಿಗಳು ರಿಲ್ಯಾಕ್ಸ್ ಆಗುತ್ತಿವೆ. ನೀರು ಸಿಂಪಡಣೆ ಜೊತೆಗೆ ಪ್ರಾಣಿಗಳಿಗೆ ದ್ರವ ಆಹಾರವನ್ನು ವಿತರಣೆ ಮಾಡಲಾಗುತ್ತಿದ್ದು, ಬಿಸಿಲಿನಿಂದ ವನ್ಯಜೀವಿಗಳು ಕೂಲ್ ಆಗಿರುವಂತೆ ಮೃಗಾಲಯ ಸಿಬ್ಬಂದಿ ಕ್ರಮವಹಿಸಿದ್ದಾರೆ.

ಬಿಸಿಲಿನಿಂದ ವನ್ಯಜೀವಿಗಳು ಬಳಲಬಾರದು ಎಂಬ ಉದ್ದೇಶದಿಂದ ಎಳನೀರು, ತಾಜಾ ಹಣ್ಣಿನ ರಸ ನೀಡುವುದರೊಂದಿಗೆ ಮಣ್ಣಿನ ಬಾತ್ ಮೂಲಕ ವಿಶೇಷ ಆರೈಕೆ ಮಾಡಲಾಗುತ್ತಿದೆ. ಪ್ರಾಣಿ ಪಕ್ಷಿಗಳ ಗೂಡುಗಳಲ್ಲಿ ನೀರಿನ ಕೊಳ, ನೆರಳು ಇರುವಂತೆ ನೋಡಿಕೊಳ್ಳಲಾಗುತ್ತಿದೆ.
ಪ್ರತಿಸಲಕ್ಕಿಂತ ಈ ಬಾರಿ ಬೇಸಿಗೆಯ ಬಿಸಿ ತೀವ್ರವಾಗಿದೆ. ಪ್ರತಿ ವರ್ಷ ಬೇಸಿಗೆ ಬಂದರೆ ಮೈಸೂರು ಮೃಗಾಲಯ ಸೇರಿದಂತೆ ಎಲ್ಲಾ ಝೂಗಳಲ್ಲಿ ಪ್ರಾಣಿ, ಪಕ್ಷಿಗಳ ಆರೈಕೆ ಬಗ್ಗೆ ವಿಶೇಷ ಆದ್ಯತೆ ನೀಡಲಾಗುತ್ತದೆ.

ಈ ಬಾರಿ ಮೈಸೂರಿನಲ್ಲಿ ದಾಖಲೆ ಮಟ್ಟದಲ್ಲಿ 35 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಏರಿಕೆಯಾಗಿರುವುದನ್ನು ಮನಗಂಡಿರುವ ಮೃಗಾಲಯ ಅಧಿಕಾರಿಗಳು, ಪ್ರಾಣಿಗಳ ಜೊತೆ ಪ್ರವಾಸಿಗರಿಗೂ ತಂಪಾದ ಅನುಭವ ನೀಡುವ ಪರಿಸರ ಸ್ನೇಹಿ ಸೌಲಭ್ಯಗಳನ್ನು ಕಲ್ಪಿಸಿದ್ದಾರೆ. ಬೇಸಿಗೆ ಬೇಗೆ ಪ್ರಾಣಿಗಳ ಆರೋಗ್ಯದ ಮೇಲೂ ಪ್ರತಿಕೂಲ ಪರಿಣಾಮ ಬೀರುತ್ತದೆ. ಆದ್ದರಿಂದ ಮೈಸೂರಿನ ಚಾಮರಾಜೇಂದ್ರ ಮೃಗಾಲಯದ ಸಿಬ್ಬಂದಿ ಪ್ರಾಣಿ, ಪಕ್ಷಿಗಳಿಗೆ ನೀಡುವ ಆಹಾರದಲ್ಲಿ ವಿಶೇಷ ಕಾಳಜಿ ವಹಿಸುತ್ತಿದ್ದಾರೆ. ನಿಯಮಿತವಾಗಿ ನೀಡುವ ಆಹಾರ ಪದ್ಧತಿಯಲ್ಲಿ ತುಸು ಬದಲಾವಣೆ ಮಾಡಿಕೊಳ್ಳಲಾಗಿದೆ. ಸಾಧ್ಯವಾದಷ್ಟು ಪ್ರಾಣಿ-ಪಕ್ಷಿಗಳ ದೇಹದಲ್ಲಿ ನೀರಿನ ಅಂಶ ಹೆಚ್ಚು ಮಾಡುವ ಪದಾರ್ಥಗಳನ್ನೇ ಆಹಾರವಾಗಿ ನೀಡಲಾಗುತ್ತಿದೆ.

Related News

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’
ಪ್ರಮುಖ ಸುದ್ದಿ

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’

June 3, 2023
ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?
ಪ್ರಮುಖ ಸುದ್ದಿ

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?

June 3, 2023
ದೇಶ-ವಿದೇಶ

ಪಾಕ್ ಹಣದುಬ್ಬರ ಗಗನಕ್ಕೆ, ಆಹಾರಕ್ಕಾಗಿ ಹಲವೆಡೆ ಲೂಟಿ ; ಬಡವರು ಮತ್ತು ಮಧ್ಯಮ ವರ್ಗದವರು ಕಂಗಾಲು

June 3, 2023
ಪ್ರಮುಖ ಸುದ್ದಿ

200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ಬೆನ್ನಲ್ಲೇ, ವಿದ್ಯುತ್ ದರ ಏರಿಕೆ ; ಇದರ ಹೊರೆ ಯಾರಿಗೆ..?!

June 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.