ಅನ್ನದಾತರ ಹೋರಾಟಕ್ಕೆ ಅಣ್ಣಾ ಹಜಾರೆ ‌ಬಲ; ನಾಳೆಯಿಂದ ರೈತರನ್ನು ಬೆಂಬಲಿಸಿ ಪ್ರತಿಭಟನೆ

ಹೊಸದಿಲ್ಲಿ, ಜ. 29: ಹಿಂದೊಮ್ಮೆ ಭ್ರಷ್ಟಾಚಾರದ ವಿರುದ್ಧ ರಣಕಹಳೆ ಮೊಳಗಿಸಿದ್ದ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ, ಮತ್ತೊಮ್ಮೆ ಹೋರಾಟದ ಅಖಾಡಕ್ಕೆ ಇಳಿಯುತ್ತಿದ್ದು, ರೈತರ ಹೋರಾಟ ಬೆಂಬಲಿಸಿ ಪ್ರತಿಭಟನೆಯ ಹಾದಿ ಹಿಡಿಯಲು ಸಜ್ಜಾಗಿದ್ದಾರೆ.

ಹೊಸ ಕೃಷಿ ನೀತಿಗಳನ್ನು ಹಿಂಪಡೆಯುಂತೆ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಮಹತ್ವದ ಬೆಂಬಲ ಸಿಕ್ಕಿದೆ. ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರು ನಾಳೆಯಿಂದ ರೈತರನ್ನು ಬೆಂಬಲಿಸಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ಈ ಮೊದಲೇ ಘೊಷಿಸಿದಂತೆ ಹಜಾರೆ ಅವರು ನಾಳೆಯಿಂದ ಹುಟ್ಟೂರು ಮಹಾರಾಷ್ಟ್ರದ ರಾಳೇಗಣಸಿದ್ದಿಯಲ್ಲಿ ಉಪವಾಸ ಸತ್ಯಗ್ರಹ ಕೈಗೊಳ್ಳಲಿದ್ದಾರೆ. ರೈತರಿಗೆ ಮಾರಕವಾಗಿರುವ ಕೃಷಿ ನೀತಿಗಳನ್ನು ವಾಪಸ್‌ ಪಡೆಯುವಂತೆ ನಾನು ಮಾಡಿದ ಮನವಿಯನ್ನು ಸರ್ಕಾರವು ಪುರಸ್ಕರಿಸಿಲ್ಲ. ಹಾಗಾಗಿ ನಿರಶನ ಕೈಗೊಳ್ಳುತ್ತಿದ್ದೇನೆ ಎಂದು ಅಣ್ಣಾ ಹಜಾರೆ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

Exit mobile version