Bengaluru: ಬಸ್ ಟಿಕೆಟ್ (Bus ticket) ದರ ಏರಿಕೆ ಮಾಡಿ ರಾಜ್ಯದ (State) ಜನತೆಗೆ ಶಾಕ್ ನೀಡಿರುವ ರಾಜ್ಯ ಸರ್ಕಾರ (State Govt) , ಇದೀಗ ಹಾಲಿನ ದರ ಏರಿಕೆ ಮಾಡಲು ಚಿಂತನೆ ನಡೆಸುತ್ತಿದೆ. ಈಗಾಗಲೇ ಹಾಲಿನ ಬೆಲೆ ಏರಿಕೆ (Milk price rise) ಕುರಿತು ಪ್ರತಿಕ್ರಿಯೆ ನೀಡಿರುವ ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ (Minister K. Venkatesh) ಅವರು, ಹಾಲಿನ ದರ ಹೆಚ್ಚಳ (Increase in milk price) ಮಾಡಬೇಕು ಎಂದು ರೈತರ ಒತ್ತಾಯ ಇದೆ. ರೈತರು ಜಾನುವಾರುಗಳಿಗೆ ನೀಡುತ್ತಿರುವ ಆಹಾರ ಪದಾರ್ಥಗಳ ಬೆಲೆ ಏರಿಕೆಯಾಗಿದ್ದು, ಈ ಹಿನ್ನೆಲೆ ಹಾಲಿನ ದರ ಪ್ರತಿ ಲೀಟರ್ ಗೆ ರೂ.8 ರಿಂದ 10 ರೂ. ಏರಿಕೆ ಮಾಡಿ ಎಂದು ಬೇಡಿಕೆ ಇಟ್ಟಿದ್ದಾರೆ (Demanded) . ಈ ಬಗ್ಗೆ ನಾವಿನ್ನೂ ಚರ್ಚೆ ಮಾಡುತ್ತಿದ್ದೇವೆ. ಚರ್ಚೆ ಬಳಿಕ ಅಂತಿಮ ತೀರ್ಮಾನ ಮಾಡುತ್ತೇವೆ ಎಂದು ಹೇಳಿದ್ದಾರೆ.

ಹಲವಾರು ರೈತರು ಹಾಲಿನ ಮೇಲೆ (Farmers on milk) ಅವಲಂಬಿತರಾಗಿದ್ದಾರೆ. ದಿನೇ ದಿನೇ ಹಾಲಿನ ಉತ್ಪಾದನೆ ಹೆಚ್ಚಳ (Increase in production) ಆಗುತ್ತಿದೆ. ರೈತರಿಗೆ ಅನ್ಯಾಯ ಆಗದಂತೆ ನೋಡಿಕೊಳ್ಳಬೇಕು. 5 ರೂ, 3 ರೂ, 10 ರೂ. ಮಾಡುತ್ತೇವೋ ಅದು ಇನ್ನೂ ತೀರ್ಮಾನ ಆಗಿಲ್ಲ. ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಮೊದಲು ಸಿದ್ದರಾಮಯ್ಯ ಅವರೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.ನಿರ್ಧಾರ ಯಾವಾಗ ತೆಗೆದುಕೊಳ್ಳಲಾಗುತ್ತದೆ ಎಂಬುದರ ಕುರಿತ ಪ್ರಶ್ನೆಗೆ ಉತ್ತರಿಸಿ, ಶೀಘ್ರದಲ್ಲೇ ತೆಗೆದುಕೊಳ್ಳಲಾಗುತ್ತದೆ. ಏಕೆಂದರೆ ಬಜೆಟ್ಗೂ ಮುನ್ನ ರಾಜ್ಯ ಸರ್ಕಾರವು ತನ್ನ ಆದಾಯದ ಬಗ್ಗೆ ಸ್ಪಷ್ಟತೆಯನ್ನು ಹೊಂದಿರಬೇಕಿದೆ ಎಂದಿದ್ದಾರೆ.
ಇತ್ತೀಚೆಗೆ, ರಾಮನಗರ ಜಿಲ್ಲೆಯ ಮಾಗಡಿಯ ಕೆಲವು ಹೈನುಗಾರರು ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramaiah) ಅವರನ್ನು ಭೇಟಿಯಾಗಿ ಹಾಲಿನ ಬೆಲೆಯನ್ನು ಲೀಟರ್ಗೆ 5 ರೂ. ಹೆಚ್ಚಿಸಬೇಕೆಂದು ಒತ್ತಾಯಿಸಿದ್ದರು.
ಹಾಲಿನ ಬೆಲೆಯನ್ನು (Price of milk) ಆಗಸ್ಟ್ 2023 ರಲ್ಲಿ 3 ರೂ. ಹೆಚ್ಚಿಸಲಾಗಿತ್ತು. ನಂತರ ಲೀಟರ್ಗೆ 39 ರೂ.ನಿಂದ 42 ರೂ.ಗೆ ಹೆಚ್ಚಿಸಲಾಯಿತು. ಜೂನ್ 2024 ರಲ್ಲಿ, ಮತ್ತೆ 2 ರೂ. ಹೆಚ್ಚಿಸಲಾಯಿತು, ಬಳಿಕ ಹೆಚ್ಚುವರಿಯಾಗಿ 50 ಮಿಲಿ ನೀಡಲಾಯಿತು.ಒಟ್ಟಾರೆಯಾಗಿ ಬಸ್ ಪ್ರಯಾಣ ದರ ಏರಿಕೆಯ (Bus fare hike) ಬೆನ್ನಲ್ಲೇ ರಾಜ್ಯ ಸರ್ಕಾರ ಹಾಲಿನ ಬೆಲೆ ಏರಿಕೆ ಮಾಡಲು ಮುಂದಾಗಿರುವುದು ಜನತೆಯ ಆಕ್ರೋಶಕ್ಕೆ ಕಾರಣವಾಗಿದೆ. ಹಾಲಿನ ದರ ಏರಿಕೆಯಿಂದ ರೈತರಿಗೆ ಸಹಕಾರಿಯಾದರೆ, ಹಾಲು, ಮೊಸರು ಸೇರಿದಂತೆ ಡೈರಿ ಉತ್ಪನ್ನಗಳನ್ನು (Dairy products) ಕೊಂಡುಕೊಳ್ಳುವವರು ಜೇಬು ಮುಟ್ಟಿ (Touch the pocket) ನೋಡಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಲಿದೆ.